ದಾವಣಗೆರೆ | ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಆರೋಪಿಸಿ ಮೌನ‌ ಪ್ರತಿಭಟನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆ ಶೋಷಿತ ಸಮುದಾಯದ ಒಕ್ಕೂಟದ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಉಪ ವಿಭಾಗಾಧಿಕಾರಿ ಕಚೇರಿ ಬಳಿ ಮೌನ ಪ್ರತಿಭಟನೆ ನಡೆಸಿದರು.

- Advertisement -

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆದರೂ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ರೂಪಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ನ್ಯಾಯಾಲಯ ಒಳ್ಳೆಯ ತೀರ್ಪು ನೀಡುವ ವಿಶ್ವಾಸವಿತ್ತು. ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಪ್ರಾಮಾಣಿಕವಾಗಿ ಎರಡನೇ ಬಾರಿಗೆ ಒಳ್ಳೆಯ ಅಧಿಕಾರ ನೀಡುತ್ತಿದ್ದಾರೆ. ಬಿಜೆಪಿಯವರು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಬಿಜೆಪಿಯವರು ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ. ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ ಅವರು, ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ
ಮುಂದುವರಿಯಬೇಕು. ಅವರ ಪರ ಇಡೀ
ರಾಜ್ಯದ ಜನರಿದ್ದಾರೆ. 136 ಶಾಸಕರಿದ್ದಾರೆ.
ಕಾಂಗ್ರೆಸಿನವರಿಗೆ ದಿನಕ್ಕೊಂದು ನೋಟಿಸ್
ನೀಡುವ ರಾಜ್ಯಪಾಲರು ಬಿಜೆಪಿಯವರಿಗೆ
ಏನೂ ಕೇಳುವುದಿಲ್ಲ. ರಾಜ್ಯಪಾಲರ ಕಚೇರಿ
ಬಿಜೆಪಿ ಕಚೇರಿ ಆಗಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ಕೆ.ಜಿ. ಶಿವಕುಮಾರ್, ಬಿ. ವೀರಣ್ಣ, ಎಲ್.ಡಿ. ಗೋಣೆಪ್ಪ, ಇಟ್ಟಿಗುಡಿ ಮಂಜುನಾಥ್, ಎಸ್. ವೆಂಕಟೇಶ್, ಕಾವ್ಯ, ಕವಿತಾ ಚಂದ್ರಶೇಖರ್, ಬಿ.ಎಚ್‌. ಪರಶುರಾಮಪ್ಪ, ಎಸ್. ಮಲ್ಲಿಕಾರ್ಜುನ್, ಎಸ್. ಎಲ್. ಆನಂದಪ್ಪ, ಸುರೇಶ್ ಕೋಗುಂಡೆ, ಕೆ.ಎನ್. ಮಂಜುನಾಥ್, ಮಂಜುನಾಥ್, ಎಸ್. ಎಸ್. ಗಿರೀಶ್, ನಂಜಾನಾಯ್ಕ, ಎಚ್. ಜಯಣ್ಣ, ಸಯೀದ್ ಚಾರ್ಲಿ, ಆದಿಲ್ ಖಾನ್, ರವೀಂದ್ರ, ಜಯಶ್ರೀ, ಡಿ. ಶಿವಕುಮಾರ್, ಆರ್. ಪ್ರತಾಪ್, ಜಿ.ಸಿ. ನಿಂಗಪ್ಪ, ರೇವಣಸಿದ್ದಪ್ಪ, ಲಿಯಾಖತ್ ಅಲಿ ಇತರ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...