ದಾವಣಗೆರೆ | ರೈತರಿಗೆ ಹಣ ನೀಡದೆ ಕೋಟ್ಯಂತರ ರೂ. ವಂಚನೆ: ಕೊನೆಗೂ ಆರೋಪಿ ಶ್ರೀನಿವಾಸ್ ಬಂಧನ

Date:

Advertisements

ಹಲವು ಪ್ರಕರಣಗಳಲ್ಲಿ ರೈತರು ಮತ್ತು ದಲ್ಲಾಳಿಗಳಿಂದ ಮೆಕ್ಕೆಜೋಳ, ಭತ್ತ ಖರೀದಿ ಮಾಡಿ ರೈತರಿಗೆ ಹಣ ನೀಡದೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಆರೋಪಿ ಶ್ರೀನಿವಾಸ್‌ ಅಲಿಯಾಸ್ ಶಿವಣ್ಣ(46) ಎಂಬಾತನನ್ನು ದಾವಣಗೆರೆಯ ಆರ್‌ಎಂಸಿ ಯಾರ್ಡ್‌ ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯ, ಕಂಪಮಲ್ಲ ಗ್ರಾಮದ ದಲ್ಲಾಳಿ ಕೆಲಸ ಮಾಡುವ ಎಂ. ನರಸಯ್ಯ ತಮ್ಮ ಜಿಲ್ಲೆಯ ಸುತ್ತಮುತ್ತ ಇರುವ ರೈತರಿಂದ ಖರೀದಿದಾರರಿಗೆ ಭತ್ತವನ್ನು ಕೊಡಿಸುವ ಕೆಲಸವನ್ನು ಮಾಡುತ್ತಿದ್ದರು.

ದಿನಾಂಕ:07.10.2023 ರಂದು ರಾತ್ರಿ 10 ಗಂಟೆಗೆ ದಾವಣಗೆರೆಯ ಶ್ರೀನಿವಾಸ ಎನ್ನುವ ವ್ಯಕ್ತಿ ದೂರವಾಣಿ ಕರೆಮಾಡಿ ನಾನು ನಿಮ್ಮ ಲಾರಿಯ ಡ್ರೈವರ್ ಕಡೆಯಿಂದ ನಿಮ್ಮ ನಂಬರ್ ಪಡೆದುಕೊಂಡಿದ್ದೇನೆ, ನನ್ನ ಭತ್ತದ ಮಿಲ್ ಇದೆ. ನೀವು ನನಗೆ ಭತ್ತವನ್ನು ಕಳುಹಿಸಿದರೆ ನಾನು ಬೇರೆಯವರಿಗಿಂತ 50 ರೂ ಹೆಚ್ಚಿಗೆ ಕೊಡುತ್ತೇನೆ. ಭತ್ತ ಮಾರಾಟಕ್ಕೆ ನನ್ನ ಜಿ ಎಸ್ ಟಿ ಇದೆ ನಿಮಗೆ ಬೇಕಾದರೆ ಕೊಡುತ್ತೇನೆ ಎಂದು ನಂಬಿಸಿದ್ದಾರೆ.

Advertisements

ಇದನ್ನು ನಂಬಿದ ದೂರುದಾರ ನರಸಯ್ಯ ದಿ: 28-04-2023 ರಿಂದ 21-05-2023 ರ ಅವಧಿಯಲ್ಲಿ 40 ಲೋಡ್ ಭತ್ತವನ್ನು ಕಳುಹಿಸಿದ್ದಾರೆ. ಅದರ ಒಟ್ಟು ಮೊತ್ತ 2,58,65,200/- ಆಗಿದೆ. ಅದರಲ್ಲಿ ಮೊದಲು ಕಳುಹಿಸಿರುವ 15 ಲೋಡ್ ಭತ್ತದ ಹಣಕ್ಕೆ, ಮೊತ್ತ ರೂ. 75,00,000 /- ಹಣವನ್ನು ಆರೋಪಿತ ಶ್ರೀನಿವಾಸ ಕಳುಹಿಸಿ ನಂಬಿಕೆಯನ್ನು ಹುಟ್ಟಿಸಿದ್ದಾನೆ. ಅದೇ ನಂಬಿಕೆಯಿಂದ ಉಳಿದ 25 ಲೋಡ್ ಭತ್ತವನ್ನು ನೆರೆಹೊರೆಯ ರೈತರಿಂದ ಪಡೆದು ಶ್ರೀನಿವಾಸರವರಿಗೆ ಕಳುಹಿಸಿಕೊಟ್ಟಿದ್ದಾರೆ.

ನಂತರ 25 ಲೋಡ್ ಬತ್ತದ ಬಾಕಿ ಉಳಿದಿರುವ ರೂ. 1,83,65,200/- ರೂ ಹಣವನ್ನು ಕೊಡದೆ ಸಬೂಬು ಹೇಳುತ್ತಾ , ಫೋನ್ ರಿಸೀವ್ ಮಾಡದೇ ಇದ್ದುದರಿಂದ ದಾವಣಗೆರೆಗೆ ಹುಡುಕಿಕೊಂಡು ಬಂದಿದ್ದು, ಅವರ ವಿಳಾಸ ಇತರೆ ಮಾಹಿತಿ ದೊರೆತಿಲ್ಲ.

ಶ್ರೀನಿವಾಸ ಮೊದಲು ನೀಡಿದ ಭತ್ತಕ್ಕೆ ಹಣವನ್ನು ನನಗೆ ಸರಿಯಾಗಿ ನೀಡಿ, ನಂಬಿಕೆ ಹುಟ್ಟಿಸಿ ಮೋಸ ಮಾಡುವ ಉದ್ದೇಶದಿಂದಲೇ ಉಳಿದ 25 ಲೋಡ್ ಭತ್ತವನ್ನು ತರಿಸಿಕೊಂಡು ರೂ. 1,83,65,200/- ರೂ ಹಣವನ್ನು ನೀಡದೇ ಮೋಸ ಮಾಡಿರುವ ಶ್ರೀನಿವಾಸ ರವರ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ಆರ್.ಎಂ.ಸಿ. ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಗಾಗಿ ಸಿಇಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದರು.

ಪ್ರಕರಣದ ಆರೋಪಿತನ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಸಂತೋಷ್, ಮಂಜುನಾಥ ಜಿ, ಸಿಇಎನ್ ಠಾಣೆಯ ಡಿವೈಎಸ್ಪಿ ಪದ್ಮಶ್ರೀಗುಂಜೀಕರ್ ಮಾರ್ಗದರ್ಶನದಲ್ಲಿ ಪಿ.ಎಸ್.ಐ ರೂಪಾ ತೆಂಬದ್, ಸಿಬ್ಬಂದಿಗಳಾದ ಸೋಮಶೇಖರಪ್ಪ, ಲೋಹಿತ್, ಮಲ್ಲಿಕಾರ್ಜುನ ಹಾದಿಮನಿ, ಗೋವಿಂದರಾಜ್, ಸಣ್ಣ ಬುಡೇನ್ ವಲಿ ತಂಡವು ನ.13 ರಂದು ಆರೋಪಿ ಶ್ರೀನಿವಾಸನನ್ನು ಮಹಾಲಕ್ಷ್ಮಿ ಲೇಔಟ್ ದಾವಣಗೆರೆ ಇಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನು ಓದಿದ್ದೀರಾ? ಬಳ್ಳಾರಿ | ಜಿಲ್ಲಾಸ್ಪತ್ರೆಯಲ್ಲಿ ಮೂರೇ ದಿನದಲ್ಲಿ ಮೂವರು ಬಾಣಂತಿಯರ ಸಾವು

ಆರೋಪಿ ಶ್ರೀ ನಿವಾಸ ವಿರುದ್ಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಹದಡಿ, ಆರ್.ಎಂ.ಸಿ. ಪೊಲೀಸ್ ಠಾಣೆ, ಬಸವನಗರ ಪೊಲೀಸ್ ಠಾಣೆ, ಆಂದ್ರಪ್ರದೇಶ ರಾಜ್ಯದ ತಿರುಪತಿ ಜಿಲ್ಲೆಯ ಸತ್ಯವೇಡು ಪೊಲೀಸ್ ಠಾಣೆ ಪ್ರಕರಣಗಳಿವೆ. ಆರೋಪಿ ಮೇಲೆ ರಾಜ್ಯದಲ್ಲಿನ ರೈತರಲ್ಲಿ ಭತ್ತವನ್ನು ಪಡೆದು ಹಣವನ್ನು ವಾಪಸ್ ಕೊಡದೆ ಹಲವು ದೂರುಗಳು ದಾಖಲಾಗಿದ್ದು,
ಈ ಬಗ್ಗೆ ಮಾಹಿತಿಯನ್ನು ಖಚಿತಪಡಿಸಿಕೊಳ್ಳಬೇಕಾಗಿದೆ.

ಹಲವಾರು ರೈತರಿಗೆ ಹಾಗೂ ದಲ್ಲಾಳಿಗೆ ವರ್ತಕರಿಗೆ ವಂಚನೆ ಮಾಡಿದ್ದ ಆರೋಪಿತ ಶ್ರೀನಿವಾಸನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ಸಿಇಎನ್ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡವನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್
ಶ್ಲಾಘಿಸಿ, ಪ್ರಶಂಸನಾ ಪತ್ರಗಳನ್ನು ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X