ದಾವಣಗೆರೆ | 2ಎ ಮೀಸಲಾತಿಗೆ ಆಗ್ರಹ; ಡಿ.10ರಂದು ಸುವರ್ಣ ಸೌಧ ಮುತ್ತಿಗೆಗೆ ನಿರ್ಧಾರ

Date:

Advertisements

ಕೂಡಲ ಸಂಗಮದ ಜಯಮತ್ಯುಂಜಯ ಶ್ರೀಗಳ ನೇತೃತ್ವದಲ್ಲಿ 2ಎ ಮೀಸಲಾತಿಗಾಗಿ ಇದೇ ಡಿಸೆಂಬರ್‌ 10ರಂದು ನಡೆಯಲಿರುವ ಬೃಹತ್‌ ಟ್ರ್ಯಾಕ್ಟರ್ ರ್‍ಯಾಲಿ ಮೂಲಕ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಹಾಕುವ ಏಳನೇ ಹಂತದ ಹೋರಾಟಕ್ಕೆ ದಾವಣಗೆರೆ ಜಿಲ್ಲೆಯಿಂದ ಒಂದು ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್ ವಿ ಅಶೋಕ್ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “2ಎ ಮೀಸಲಾತಿಗಾಗಿ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಾಲ್ಕು ವರ್ಷದಿಂದ ಆರನೇ ಹಂತದವರೆಗೂ ಹೋರಾಟ ಮಾಡಿದ್ದೇವೆ. ಸರ್ಕಾರ ಈ ಹಿಂದೆ 2ಎ ಮೀಸಲಾತಿಗೆ ನಡೆದ ಹೋರಾಟದ ಸಮಯದಲ್ಲಿ ಕೇವಲ ಭರವಸೆಯನ್ನು ನೀಡುತ್ತ, ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡನೀಯ” ಎಂದರು.

ಮೀಸಲಾತಿಗೆ ಹೋರಾಟ

“ಪಂಚಮಸಾಲಿ ಸಮಾಜ ಬೇಸತ್ತಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಅಧಿವೇಶನದಲ್ಲಿಯೇ ಪಂಚಮಸಾಲಿಗಳಿಗೆ 2ಎ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದಲ್ಲಿ ಸಮಾಜದ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಿಜೆಪಿ ಪ್ರವಾಸ ಪೋಸ್ಟರ್‌ನಲ್ಲಿ ವಿಜಯೇಂದ್ರ ಫೋಟೋ ನಾಪತ್ತೆ; ಗೊತ್ತೇ ಇಲ್ಲವೆಂದ ಮಾಜಿ ಸಚಿವ

“ಕೂಡಲಸಂಗಮ ಶ್ರೀಗಳ ನೇತೃತ್ವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಾಯಕತ್ವದಲ್ಲಿ ಈ ಹೋರಾಟ ಏಳನೇ ಹಂತ ತಲುಪಿದೆ. ಈ ಹೋರಾಟಕ್ಕೆ ರಾಜ್ಯದ ಎಲ್ಲ ಪಂಚಮಸಾಲಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮುತ್ತಿಗೆ ಹೋರಾಟ ಯಶಸ್ವಿ ಮಾಡಬೇಕು” ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಪಂಚಮಸಾಲಿ ಮಹಾಸಭಾದ ಪದಾಧಿಕಾರಿಗಳಾದ ಮಂಜು ಪೈಲ್ವಾನ್, ಎಚ್ ಕೆ ಗಿರೀಶ್ ಮರಡಿ, ಶಂಕರ್, ವೀರೇಶ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X