ದಾವಣಗೆರೆ | ಅಡುಗೆ ತಯಾರಕರ ಬಾಕಿ ವೇತನ ಬಿಡುಗಡೆಗೆ ಆಗ್ರಹ; ಇಒ ಭರವಸೆ

Date:

Advertisements

ಬಿಸಿಯೂಟ ತಯಾರಕರ ಬಾಕಿ ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಸಿಯೂಟ ತಯಾರಕರ ಫೆಡರೇಶನ್ ಸಮಿತಿ ಕಾರ್ಯಕರ್ತರು ದಾವಣಗೆರೆ ತಾಲೂಕು ಮಧ್ಯಾಹ್ನ ಉಪಾಹಾರ ಯೋಜನೆ ಸಹಾಯಕ ನಿರ್ದೇಶಕರು ಮತ್ತು ತಾಲೂಕು ಪಂಚಾಯತ್‌ ಕಾರ್ಯನಿರ್ವಣಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ದಾವಣಗೆರೆ ತಾಲೂಕಿನ ಎಲ್ಲ ಶಾಲೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರಿಗೆ ಜುಲೈ 31 ಬಂದರೂ ಜುಲೈ ತಿಂಗಳ ವೇತನ ಪಾವತಿಯಾಗಿಲ್ಲ. ವೇತನವಿಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ. ಹಾಗಾಗಿ ಜೂನ್ ಮತ್ತು ಜುಲೈ ತಿಂಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯದರ್ಶಿ ಅವರಗೆರೆ ಚಂದ್ರು ಮಾತನಾಡಿ, “ಜುಲೈ ತಿಂಗಳು ಮುಗಿದರೂ ಜೂನ್‌ ತಿಂಗಳ ವೇತನ ಬಿಡುಗಡೆಯಾಗಿಲ್ಲ. ಬೆಲೆ ಏರಿಕೆ, ಹಣದುಬ್ಬರ, ಶಿಕ್ಷಣದ ಖರ್ಚು ಸೇರಿದಂತೆ ಇನ್ನಿತರ ಖರ್ಚು ವೆಚ್ಚಗಳು ಹೆಚ್ಚಾಗಿರುವ ಈ ಕಾಲದಲ್ಲಿ ಬಿಸಿಯೂಟದ ವೇತನ ನಂಬಿ ಬದುಕುತ್ತಿರುವ ಬಿಸಿಯೂಟ ತಯಾರಿಕರಿಗೆ ವೇತನವಿಲ್ಲದೆ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಆದ ಕಾರಣ ಕೂಡಲೇ ಸರ್ಕಾರ ಜೂನ್ ಮತ್ತು ಜುಲೈ ತಿಂಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

Advertisements

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜ್ಯೋತಿಲಕ್ಷ್ಮಿ ಮಾತನಾಡಿ, “ಎರಡು ತಿಂಗಳ ವೇತನಗಳಿಲ್ಲದೆ ನಮಗೆ ಜೀವನ ನಿರ್ವಹಣೆ ಕಷ್ಟವಾಗಿದ್ದು, ಮಕ್ಕಳ ಶೈಕ್ಷಣಿಕ ವರ್ಷ ಆರಂಭವಾಗಿರುವುದರಿಂದ ಮಕ್ಕಳ ಶೈಕ್ಷಣಿಕ ಖರ್ಚು ಸೇರಿದಂತೆ ಇತರೆ ಸಮಸ್ಯೆಗಳೂ ಹೆಚ್ಚಾಗಿವೆ. ಹಾಗಾಗಿ ಕೂಡಲೇ ವೇತನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ್ದು, ಮನವಿ ಪರಿಗಣಿಸಿ ಸಂಬಂಧಪಟ್ಟ ಮೇಲಧಿಕಾರಿಗಳ ಜೊತೆ ಶೀಘ್ರದಲ್ಲಿ ಮಾತನಾಡಿ ಒಂದು ವಾರದ ಒಳಗಾಗಿ ಬಾಕಿ ಇರುವ ಮತ್ತು ಜುಲೈ ತಿಂಗಳ ವೇತನವನ್ನೂ ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X