ದಾವಣಗೆರೆ | ಮನರೇಗಾ ವೇತನ ಬಿಡುಗಡೆಗೆ ಪ್ರಧಾನಿಗೆ ಪತ್ರ ಬರೆದು ಆಗ್ರಹಿಸಿದ ಕೂಲಿಕಾರರು

Date:

Advertisements

ಮೂರು ತಿಂಗಳಿಂದ ಮನರೇಗಾದಲ್ಲಿ ಕೂಲಿ ಮಾಡಿದ ಹಣವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನರೇಗಾದಲ್ಲಿ ಕೆಲಸ ಮಾಡಿದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಪಲ್ಲಾಗಟ್ಟೆ, ಅಣಬೂರು, ದೊಣೆಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಕೂಲಿ ಕಾರ್ಮಿಕರು ಪ್ರಧಾನಮಂತ್ರಿಗೆ ಅಂಚೆ ಕಳಿಸುವ ಮುಖಾಂತರ ಪತ್ರ ಚಳುವಳಿ ನಡೆಸಿದರು.

“ಮೂರು ತಿಂಗಳಿಂದ ಮನರೇಗಾ ಯೋಜನೆಯಲ್ಲಿ ಕೂಲಿ ಮಾಡಿದ ಹಣವನ್ನು ಸರ್ಕಾರ ಬಿಡುಗಡೆ ಮಾಡುತ್ತಿಲ್ಲ. ತಾಲೂಕುಗಳಲ್ಲಿ ಬರಗಾಲವೆಂದು ಘೋಷಣೆ ಮಾಡಿದರೂ ಕೂಡ ಹೆಚ್ಚುವರಿ 50 ದಿನ ಮಾನವ ದಿನಗಳನ್ನು ಕೊಡುತ್ತಿಲ್ಲ” ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ತಾಲೂಕು ಕಾರ್ಯಕರ್ತೆ ಸುಧಾ ಪಲ್ಲಾಗಟ್ಟಿ ಆರೋಪಿಸಿದರು.

“ಇಡೀ ಕರ್ನಾಟಕದಲ್ಲಿ ಮಳೆ ಇಲ್ಲದೆ ಜನರು ಕಂಗಾಲಾಗಿದ್ದಾರೆ. ಜನರು ಜೀವನ ಮಾಡುವುದೇ ಕಷ್ಟಕರವಾಗಿದೆ. ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಟೋಲ್ ಹೋರಾಟಗಾರರ ವಿರುದ್ಧ ಚಾರ್ಜ್ ಶೀಟ್

ಪ್ರತಿಭಟನೆಯಲ್ಲಿ ದೊಣ್ಣೆಹಳ್ಳಿ ಜಿಪಿ ಕಾರ್ಯಕರ್ತೆ ಮಾಲಾಶ್ರೀ, ದೊಣ್ಣೆಹಳ್ಳಿ ಗ್ರಾಮದ ಬೋರಯ್ಯ, ಕೆಚ್ಚೇನಹಳ್ಳಿ ಜಿಪಿ ಕಣ್ಣುಕುಪ್ಪೆ ಶೃತಿ, ಕೆಚ್ಚೇನಹಳ್ಳಿ ವಸಂತಮ್ಮ, ಹನುಮವ್ವ, ನಾಗತಿಹಳ್ಳಿ ಪ್ರತಿಭಾ, ಗೀತಮ್ಮ, ಚಂದ್ರಪ್ಪ, ಜ್ಯೋತಿಪುರ ಮಹಾಲಕ್ಷ್ಮಿ, ಬಸಮ್ಮ, ದೇವಮ್ಮ, ಮಹಾಲಕ್ಷ್ಮಿ ಸೇರಿದಂತೆ ಇತರ ಗ್ರಾಮೀಣ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X