ದಾವಣಗೆರೆ | ನ್ಯಾ. ಎ ಜೆ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಡಿಎಸ್ಎಸ್ ಆಗ್ರಹ

Date:

Advertisements

ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಡಿಎಸ್‌ಎಸ್ ರಾಜ್ಯಸಂಚಾಲಕ ಹೆಚ್ ಮಲ್ಲೇಶ್ ಮಾತನಾಡಿ, “ಭಾರತದ ವೈದಿಕ ನಿರ್ಮಿತ ಶ್ರೇಣಿಕೃತ ಜಾತಿ ವ್ಯವಸ್ಥೆಯಿಂದ ಶತಮಾನ ಕಾಲ ಶೋಷಣೆಗೆ ಗುರಿಯಾಗಿರುವ ಅಸ್ಪೃಶ್ಯ ಸಮುದಾಯ ಶಿಕ್ಷಣ, ಉದ್ಯೋಗ, ಸಾಮಾಜಿಕ, ರಾಜಕೀಯ ಸ್ಥಾನಮಾನಗಳಿಂದ ವಂಚನೆಗೆ ಒಳಗಾಗಿದೆ. ದೇಶದ ಸಂಪತ್ತು, ಅಧಿಕಾರ, ಅದಾಯ ಮತ್ತು ಸಂವಿಧಾನಿತ ಸೌಲಭ್ಯಗಳು ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಆಗಬೇಕೆಂಬುದು ಮೀಸಲಾತಿ ವರ್ಗಿಕರಣದ ಆಶಯ” ಎಂದರು.

“ಕರ್ನಾಟಕದ ಪರಿಶಿಷ್ಟ ಜಾತಿಗಳ ಸಂವಿಧಾನದ ಶೇ.15ರಷ್ಟು ಮೀಸಲಾತಿ ಸೌಲಭ್ಯಗಳು, ತಾರತಮ್ಯ ಅಸಮಾನ ಹಂಚಿಕೆ ಪರಿಣಾಮವಾಗಿ 2005ರಲ್ಲಿ ರಚನೆಗೊಂಡಿರುವ ನ್ಯಾಯಮಾರ್ತಿ ಎ ಜೆ ಸದಾಶಿವ ವಿಚಾರಣಾ ಆಯೋಗ 2012ರಲ್ಲಿ ಸಲ್ಲಿಸಿರುವ ವರದಿ ಜಾರಿಗೆ ತರಬೇಕು” ಎಂದು ಒತ್ತಾಯಿಸಿದರು.

Advertisements

“ಈ ಹಿಂದಿನ ಸರ್ಕಾರದ ಸಚಿವ ಜೆ ಸಿ ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ವರದಿಯಂತೆ ಪರಿಷ್ಕರಿಸಿ ಕೇಂದ್ರಕ್ಕೆ ಸಲ್ಲಿಸಿದ್ದರೂ ಅನುಮೋದನೆಗೊಂಡಿಲ್ಲ. ಕಾಂಗ್ರೆಸ್ ಸರ್ಕಾರ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವುದಾಗಿ ತನ್ನ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು ಹಾಗೂ ಪ್ರಥಮ ಅಧಿವೇಶನದಲ್ಲಿ ಜಾರಿಗೊಳಿಸುವುದಾಗಿ ಭರವಸೆ ನೀಡಿದೆ. ಈಗ ಹಾಲಿ 2ನೇ ಚಳಿಗಾಲ ಅಧಿವೇಶನ ಪ್ರಾರಂಭಗೊಂಡಿದ್ದು, ವಿಧಾನಮಂಡಲ ಉಭಯ ಸದನಗಳಲ್ಲಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಲೋಕ್‌ ಅದಾಲತ್‌ನಲ್ಲಿ 26 ಸಾವಿರ ಪ್ರಕರಣ ಇತ್ಯರ್ಥ; ಒಂದಾದ 9 ಜೋಡಿ

ಪ್ರತಿಭಟನೆಯಲ್ಲಿ ಸಿ. ಬಸವರಾಜ್, ಎಚ್‌ ನಿಂಗಪ್ಪ, ಕುಂದುವಾಡ ಮಂಜುನಾಥ್, ಜಿಗಳ ಹಾಲೇಶ್, ರಾಘವೇಂದ್ರ ಕಡೇಮನಿ, ಹೆಣ್ಣೂರು ಶ್ರೀನಿವಾಸ್, ಚಂದ್ರಪ್ಪ ಗೋಪನಾಳ್, ಚಂದ್ರಪ್ಪ ಎಲ್ ಆರ್ ಹೆಗ್ಗರೆ ರಂಗಪ್ಪ, ಹೆಚ್ ಸಿ ಮಲ್ಲಪ್ಪ, ಪಿ. ತಿಪ್ಪೇರುದ್ರಪ್ಪ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X