ದಾವಣಗೆರೆ | ಸಂವಿಧಾನದ ಉಳಿವಿಗಾಗಿ ʼಶಾಂತಿಯ ತೋಟ ದೇಶ ಉಳಿಸಿʼ ಸಂಕಲ್ಪ ಯಾತ್ರೆ

Date:

Advertisements

ಸಂವಿಧಾನದ ಉಳಿವಿಗಾಗಿ ʼಶಾಂತಿಯ ತೋಟ ದೇಶ ಉಳಿಸಿʼ ಸಂಕಲ್ಪ ಯಾತ್ರೆ ಆರಂಭಗೊಂಡಿದ್ದು, ಏಪ್ರಿಲ್ 5ರಂದು ದಾವಣಗೆರೆಗೆ ಆಗಮಿಸಿತು. ಯಾತ್ರೆಯನ್ನು ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಸ್ವಾಗತಿಸಿದರು.

ʼಸಂವಿಧಾನದ ಮೌಲ್ಯಗಳನ್ನು ಉಳಿಸುವುದು, ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಸಮಾನತೆಯನ್ನು ಕಾಪಾಡುವುದು, ಸಾಮಾಜಿಕ ನ್ಯಾಯ ಮತ್ತು ಭ್ರಾತೃತ್ವʼವನ್ನು ಉತ್ತೇಜಿಸುವ ಗುರಿಯೊಂದಿಗೆ ಆಯೋಜಿಸಿರುವ ಸಂವಿಧಾನ ಉಳಿವಿಗಾಗಿ, ʼದೇಶ ಉಳಿಸಿ ಸಂಕಲ್ಪ ಯಾತ್ರೆ ದಾವಣಗೆರೆಗೆ ಆಗಮಿಸಿದ ವೇಳೆ ನಗರದ ಜಯದೇವ ವೃತ್ತದಲ್ಲಿ ಪ್ರಗತಿಪರ ಮುಖಂಡರು, ಸಾರ್ವಜನಿಕರೊಂದಿಗೆ ಸಭೆ ಸಂವಾದ ಕಾರ್ಯಕ್ರಮ ನೆಡೆಸಿ ಸಂವಿಧಾನ, ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾರ್ವಜನಿಕರ ಜವಾಬ್ದಾರಿ, ಕರ್ತವ್ಯಗಳ ಬಗ್ಗೆ, ಭಾರತದಲ್ಲಿ ನೆಡೆಯುತ್ತಿರುವ ಜನವಿರೋಧಿ ರೈತ, ಕಾರ್ಮಿಕ ವಿರೋಧಿ ನೀತಿ, ಶೋಷಣೆಗಳ ಬಗ್ಗೆ, ಅವುಗಳ ಪರಿಹಾರಕ್ಕೆ ಚುನಾವಣೆಯಲ್ಲಿರುವ ಅವಕಾಶಗಳ ಕುರಿತು ಮುಖಂಡರು ಮಾಹಿತಿ ನೀಡಿದರು.

“ಯಾತ್ರೆ ಮುಂದುವರೆದು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಲಿದೆ. ಯಾತ್ರೆಯು ಜನರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಿದೆ” ಎಂದು ಮುಖಂಡರು ತಿಳಿಸಿದರು.

Advertisements

ಯಾತ್ರೆ ನಗರದ ಹದಡಿ ರಸ್ತೆಯಲ್ಲಿ ಮೆರವಣಿಗೆ ಹೊರಟು ಜಯದೇವ ವೃತ್ತದವರೆಗೆ ಸಾಗಿತು. ನಂತರ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿದರು. ಕೊನೆಯಲ್ಲಿ, ಹೋರಾಟಗಾರರು ಮತ್ತು ಸಂಘಟನೆಯ ಮುಖಂಡರೊಂದಿಗೆ ಸಂವಾದ ನಡೆಯಿತು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಣಾಳಿಕೆ ದೇಶದ ಅಭ್ಯುದಯಕ್ಕೆ ಸಹಕಾರಿ: ಅನಿಲ್ ಕುಮಾರ್ ತಡಕಲ್

ಈ ಸಂದರ್ಭದಲ್ಲಿ ಅಪ್ಪಾ ಸಾಹೆಬ್, ಉಮೇಶ್ ಆವರಗೆರೆ, ಅನೀಸ್ ಪಾಷಾ, ಚಂದ್ರು ಆವರಗೆರೆ, ಆದಿಲ್ ಖಾನ್, ಜಮೀನು ಖಾನಂ, ಪವಿತ್ರ ಸತೀಶ್, ಸತೀಶ್ ಅರವಿಂದ್, ರಾಮಾಂಜನೇಯ, ನಿಜಾಮುದ್ದೀನ್ ದಾವಣಗೆರೆ ಸೇರಿದಂತೆ ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X