ದಾವಣಗೆರೆ | ಭಾರೀ ಗಾಳಿ ಮಳೆ; ಸಿಡಿಲ ಹೊಡೆತಕ್ಕೆ 25 ಮೇಕೆಗಳು ಬಲಿ

Date:

Advertisements

ದಾವಣಗೆರೆ ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲಿನ ಮಳೆ ಸುರಿದಿದ್ದು, ನೀರಿಲ್ಲದೆ ಕಂಗೆಟ್ಟಿರುವ ರೈತರ ಮೊಗದಲ್ಲಿ ಸಂತಸ ತಂದಿದೆ. ಭಾರೀ ಗಾಳಿ ಜತೆಗೆ ದಿಗಿಲು ಹುಟ್ಟಿಸುವಂತಹ ಸಿಡಿಲು ಮಿಂಚು ಜೋರಾಗಿದ್ದು, ಹಲವೆಡೆ ಮರಗಿಡಗಳು ರೆಂಬೆಗಳು ಮುರಿದು ಬಿದ್ದು, ರಸ್ತೆ ಮಾರ್ಗಗಳು, ಕೆಲವೆಡೆ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಸಿಡಿಲಿನ ಹೊಡೆತಕ್ಕೆ ಬರೋಬ್ಬರಿ 25 ಮೇಕೆಗಳು ಆಹುತಿಯಾದ ಘಟನೆ ವರದಿಯಾಗಿದೆ.

ದಾವಣಗೆರೆ ತಾಲೂಕಿನ ಆನಗೋಡು ಸಮೀಪದ ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು 16 ಆಡುಗಳು ಸೇರಿದಂತೆ 25 ಮೇಕೆಗಳು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ದಾವಣಗೆರೆ ತಾಲೂಕಿನ ಸುತ್ತಮುತ್ತ ಗುರುವಾರ ಸಂಜೆ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಿತು. ಎಂದಿನಂತೆ ಈಚಘಟ್ಟ ಗ್ರಾಮದ ರೈತ ಪಾಪ್ಯಾನಾಯ್ಕ ಮತ್ತು ರೇವತಿಬಾಯಿ ಅವರು ತಮ್ಮ ಮೇಕೆಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದರು. ಮಳೆ ಜೋರಾಗಿ, ಗುಡುಗು ಆರಂಭವಾದಾಗ ಮೇಕೆಗಳು ಮರದ ಕೆಳಗೆ ಬಂದು ಆಶ್ರಯಿಸಿವೆ. ಈ ವೇಳೆ ಸಿಡಿಲಿನ ಹೊಡೆತಕ್ಕೆ 16 ಆಡುಗಳು ಮತ್ತು 9 ಗಂಡು ಮೇಕೆ ಸ್ಥಳದಲ್ಲೇ ಮೃತಪಟ್ಟಿವೆ.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

ಈ ವೇಳೆ ಸ್ಥಳದಲ್ಲಿದ್ದ ಪಾಪ್ಯಾನಾಯ್ಕ ಅವರು ಉಳಿದ ಮೇಕೆಗಳನ್ನು ಅಟ್ಟಿಕೊಂಡು ಬರಲೆಂದು ಸಿಡಿಲು ಬಡಿದ ಸ್ಥಳದಿಂದ ದೂರ ಹೋಗಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂದಾಜು ₹4 ರಿಂದ ₹5 ಲಕ್ಷ ನಷ್ಟವಾಗಿದ್ದು, ಸ್ಥಳಕ್ಕೆ ಸ್ಥಳೀಯ ಶಾಸಕ ಕೆ ಎಸ್ ಬಸವಂತಪ್ಪ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಪೊಲೀಸರು, ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X