ದಾವಣಗೆರೆ | ಜನರ ಮುಖ್ಯ ಸಮಸ್ಯೆ ಪರಿಹರಿಸುವ ನೀತಿಗಳು ಜಾರಿಯಾಗದಿದ್ದರೆ, ಹೋರಾಟ ಅನಿವಾರ್ಯ; ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

Date:

Advertisements

ಮುಖ್ಯಮಂತ್ರಿಯವರು, ಸಚಿವರು, ಸಂಬಂಧಿತ ಅಧಿಕಾರಿಗಳು ಮತ್ತು ಜನಚಳವಳಿಗಳ ಮುಖಂಡರು ಸೇರಿದಂತೆ ಒಂದು ಜನತಾ ಅಧಿವೇಶನವನ್ನು ಕರೆದು ಜನರ ಬದುಕಿನ ಮುಖ್ಯ ಸಮಸ್ಯೆಗಳ ಕುರಿತು ಚರ್ಚೆ ಮಾಡಿ, ಜನಪರ ನೀತಿಗಳು ಮತ್ತು ಕಾರ್ಯಕ್ರಮಗಳು ಜಾರಿಯಾಗಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧವೂ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸಂಚಾಲಕ ನೂರ್ ಶ್ರೀಧರ್ ಎಚ್ಚರಿಸಿದರು.

ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ರೈತ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ರಾಷ್ಟ್ರವ್ಯಾಪಿ ಕರೆ ನೀಡಿರುವ ಹೋರಾಟದ ಭಾಗವಾಗಿ ದಾವಣಗೆರೆಯ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಬಳಿಕ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಯುಕ್ತ ಹೋರಾಟ-ಕರ್ನಾಟಕದ ರೈತ ಮತ್ತು ಕಾರ್ಮಿಕ ಕಾರ್ಯಕರ್ತರು ಹಾಗೂ ಮುಖಂಡರು ಜಯದೇವ ಸರ್ಕಲ್ ಮೂಲಕ ಉಪವಿಭಾಗಾಧಿಕಾರಿ ಕಚೇರಿವರೆಗೆ ತೆರಳಿ ಮನವಿ ಸಲ್ಲಿಸಿದರು.

“ಕೇಂದ್ರ ಸರ್ಕಾರ ಐತಿಹಾಸಿಕ ರೈತರ ಪ್ರತಿಭಟನೆಯ ನಂತರ ಮೂರು ಕಾಯ್ದೆಗಳನ್ನು ವಾಪಸ್ ಪಡೆಯುವುದು ಹಾಗೂ ಬೆಂಬಲ ಬೆಲೆ ನೀಡುವುದು ಸೇರಿದಂತೆ ಇತರ ಆಶ್ವಾಸನೆಗಳನ್ನು ನೀಡಿತ್ತು. ಈ ಆಶ್ವಾಸನೆಗಳನ್ನು ನೀಡಿದ್ದು ಬಿಟ್ಟರೆ ಈವರೆಗೂ ಕೂಡ ಅವುಗಳನ್ನು ಈಡೇರಿಸಿಲ್ಲ. ಅವರ ನೀತಿಗಳು ಕಾರ್ಪೊರೇಟ್ ಮಾರುಕಟ್ಟೆ ಪೂರೈಕೆಗಳಿಗೆ ಸಹಾಯಕವಾಗಿದ್ದು, ಐಸಿಎಆರ್ ಕೂಡ ಬಹುರಾಷ್ಟ್ರೀಯ ಕಂಪೆನಿಗಳೊಂದಿಗೆ ಅನೇಕ ಒಪ್ಪಂದಗಳಿಗೆ ಸಹಿ ಹಾಕಿದ್ದು, ಇವುಗಳು ರೈತರ ಶೋಷಿಸಲು ಕಾರಣವಾಗುತ್ತದೆ. ಕಾರ್ಮಿಕರ ನೀತಿಗಳನ್ನೂ ಕೂಡ ಬದಲಾಯಿಸಲು ಹೊರಟಿದ್ದೂ ಕೂಡಾ ಕಾರ್ಮಿಕರ ಶೋಷಣೆಗೆ ಕಾರಣವಾಗಿದೆ. ಹೀಗಾಗಿ ಕೂಡಲೇ ನಿಮ್ಮ ಮನೆಹಾಳು ನೀತಿಗಳನ್ನು ಬಿಟ್ಟು ಕಾರ್ಮಿಕರ, ರೈತಪರ ಮತ್ತು ಜನಪರ ನೀತಿಗಳನ್ನು ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

Advertisements

“2023ರಲ್ಲಿ ಕರ್ನಾಟಕ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳು ಸೇರಿದಂತೆ ಜನ ಚಳವಳಿಗಳು ಮುಂದಿಡುತ್ತಿದ್ದ ಬಹಳಷ್ಟು ಬೇಡಿಕೆಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿ ಭರವಸೆ ನೀಡಿದ್ದರು. ಕೇವಲ ಗ್ಯಾರಂಟಿಗಳನ್ನು ಬಿಟ್ಟರೆ ಬೇರೆ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಬಿಜೆಪಿಯ ಜನವಿರೋಧಿ ನೀತಿಗಳನ್ನು ತೆಗೆದು ಜನಪರ ನೀತಿಗಳನ್ನು ಜಾರಿಗೆ ತರಲು ಕಾಂಗ್ರೆಸ್ ಬೆಂಬಲಿಸಿದ್ದೆವು. ಆದರೆ ಒಂದೂವರೆ ವರ್ಷದ ನಂತರವೂ ಬಿಜೆಪಿಯ ಜನವಿರೋಧಿ ನೀತಿಗಳನ್ನು ಹಿಂಪಡೆದಿಲ್ಲ. ಬದಲಿಗೆ ಅವುಗಳನ್ನು ಮುಂದುವರೆಸಲಾಗುತ್ತಿದೆ” ಎಂದು ನೂರ್ ಶ್ರೀಧರ್ ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯದಲ್ಲಿ ಹಿಂದಿನ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದ ಕೃಷಿ ಕಾಯ್ದೆಗಳನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಬಹುದಾಗಿತ್ತು. ಆದರೆ ವಾಪಸ್ ಪಡೆಯುವ ಕೆಲಸ ಮಾಡಿಲ್ಲ. ಕಾರ್ಮಿಕರ ಕೆಲಸದ ಸಮಯವನ್ನು 8 ಗಂಟೆಯಿಂದ 12 ಗಂಟೆಗೆ ಏರಿಸಿದ್ದ ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂದಕ್ಕೆ ಪಡೆದಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಜನತಾ ಅಧಿವೇಶನ ಕರೆಯಬೇಕೆಂಬ ಒತ್ತಾಯ ಮಾಡುತ್ತಿದ್ದೇವೆ. ಆ ಮೂಲಕ ರೈತ ಮುಖಂಡರು ಕಾರ್ಮಿಕ ಮಖಂಡರು ಮತ್ತು ಜನಚಳವಳಿಗಳ ಮುಖಂಡರು ಸೇರಿದಂತೆ ಅಲ್ಲಿ ರೈತ, ಕಾರ್ಮಿಕರ, ಜನಸಾಮಾನ್ಯರ ಸಮಸ್ಯೆಗಳ ಚರ್ಚೆಯಾಗಿ ಒಪ್ಪಿತ ನೀತಿಗಳನ್ನು ಕೂಡಲೇ ಜಾರಿ ಮಾಡಬೇಕಾಗುತ್ತದೆ. ಇಲ್ಲದಿದ್ದಲ್ಲಿ ನಿಮ್ಮ ವಿರುದ್ಧ ಕೂಡ ಮುಂದಿನ ದಿನಗಳಲ್ಲಿ ಹೋರಾಟ ಕೈಗೊಳ್ಳುತ್ತೇವೆ” ಎಂದು ಎಚ್ಚರಿಸಿದರು.

WhatsApp Image 2024 11 26 at 12.57.12 PM

ಸಂಚಾಲಕ ಮಧು ತೊಗಲೇರಿ ಮಾತನಾಡಿ, “ಸರ್ಕಾರಗಳು ರೈತರು ಮತ್ತು ಕಾರ್ಮಿಕರ ಜನಸಾಮಾನ್ಯರ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ. ರೈತ ಕಾರ್ಮಿಕರ ವಿರೋಧಿ ಕಾನೂನುಗಳನ್ನು ಜಾರಿಗೆ ತಂದು ಆಡಳಿತ ನಡೆಸುತ್ತಿವೆ. ಈ ಕೂಡಲೇ ಇದನ್ನು ಕೈ ಬಿಟ್ಟು ಕಾರ್ಮಿಕರ ರೈತರ ಪರವಾದ ಕಾನೂನುಗಳನ್ನು ಜಾರಿಗೆ ತಂದು ಅವರ ಬೆನ್ನಿಗೆ ನಿಲ್ಲಬೇಕು. ಇಲ್ಲವಾದಲ್ಲಿ ಸರ್ಕಾರಗಳ ವಿರುದ್ಧ ಜನಾಕ್ರೋಶ ಮುಂದುವರೆಯಲಿದೆ” ಎಂದು ತಿಳಿಸಿದರು.

ಎಐಟಿಯುಸಿ ಕಾರ್ಮಿಕ ಮುಖಂಡ ಉಮೇಶ್ ಅವರಗೆರೆ ಮಾತನಾಡಿ “ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಶ್ರೀಮಂತರನ್ನು ಅತೀ ಶ್ರೀಮಂತಗೊಳಿಸುವ ಕಾರ್ಯದಲ್ಲಿ, ರೈತರು ಮತ್ತು ಕಾರ್ಮಿಕರನ್ನು ಬಡವರನ್ನಾಗಿಸುವ ನೀತಿಗಳನ್ನು ಜಾರಿಗೆ ತರುತ್ತಿವೆ. ರೈತರ ಪರವೆಂದು ಹೇಳಿಕೊಂಡು ಬಂದ ಸರ್ಕಾರಗಳೂ ಕೂಡ ವಂಚಿಸುತ್ತಿವೆ. ಸರ್ಕಾರ ಕೂಡಲೇ ಎಚ್ಚೆತ್ತು ರೈತ ಮತ್ತು ಕಾರ್ಮಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೀತಿಗಳನ್ನು ರೂಪಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತುರ್ತಾಗಿ ಒಳಮೀಸಲಾತಿ ನೀಡುವಂತೆ ದಲಿತ ಸಂಘಟನೆಗಳ ಆಗ್ರಹ

ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಹೊನ್ನೂರು ಮುನಿಯಪ್ಪ, ಅರುಣ್ ಕುಮಾರ್ ಕುರುಡಿ, ಗುಮ್ಮನೂರು ಮಂಜುನಾಥ್, ಬುಳ್ಳಾಪುರ ಹನುಮಂತಪ್ಪ, ಬುಳ್ಳಾಪುರ ಪರಮೇಶ್ವರಪ್ಪ, ಮರುಳಸಿದ್ದಯ್ಯ, ಕಾರ್ಮಿಕ ಮುಖಂಡರಾದ ಉಮೇಶ್ ಆವರಗೆರೆ, ಆವರಗೆರೆ ಚಂದ್ರು, ಶಿವಕುಮಾರ್, ರಮೇಶ್, ಲಕ್ಷ್ಮಣ್, ಮಂಜುನಾಥ್ ಕೈದಾಳೆ, ಮಂಜುನಾಥ್ ಕುಕ್ಕುವಾಡ, ಸತೀಶ್ ಕೈದಾಳೆ, ನಾಗಸ್ಮಿತ, ಜನಶಕ್ತಿಯ ಸತೀಶ್ ಅರವಿಂದ್, ಪವಿತ್ರ ಅರವಿಂದ್, ರಾಮಾಂಜನೇಯ, ಆದಿಲ್ ಖಾನ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X