ದಾವಣಗೆರೆ | ಅಕ್ರಮ ಆರೋಪ; ಮಹಾನಗರ ಪಾಲಿಕೆ ಬಿಲ್‌ ಕಲೆಕ್ಟರ್‌ ಅಮಾನತು

Date:

ಭೂ-ಅಕ್ರಮ ಆರೋಪದ ಹಿನ್ನೆಲೆ ದಾವಣಗೆರೆ ಮಹಾನಗರ ಪಾಲಿಕೆ‌ ಬಿಲ್ ಕಲೆಕ್ಟರ್ ಸುನಿತಾ ಅವರನ್ನು ಅಮಾನತು ಮಾಡಿ ಪಾಲಿಕೆ ಆಯುಕ್ತರು ಆದೇಶ ಮಾಡಿದ್ದಾರೆ.

- Advertisement -

ಉದ್ಯಾನಕ್ಕೆ ಮೀಸಲಿಟ್ಟ‌ ಜಾಗವನ್ನು ಅಕ್ರಮವಾಗಿ ಖಾತಾ ಉತಾರ ನೀಡುವ ಮೂಲಕ ಕರ್ತವ್ಯ ಲೋಪ ಎಸಗಿದ ಆರೋಪ ಸುನಿತಾ ಮೇಲಿತ್ತು. ಇವರು ಡೋರ್ ನಂ 1882/81ಎನಲ್ಲಿ ಡಿ ಎಲ್ ರಾಮಚಂದ್ರಪ್ಪ ಎಂಬುವವರ ಹೆಸರಿಗೆ ಮೇಲಾಧಿಕಾರಿಗಳ ಆದೇಶವಿಲ್ಲದ ಹಾಗೂ ಯಾವುದೇ ಅಧಿಕೃತ ಷರಾ ಇಲ್ಲದೇ ಹೆಚ್ಚುವರಿಯಾಗಿ ಸೇರ್ಪಡೆ ಮಾಡಿದ್ದರು. ಖಾತೆ ಸೇರಿಸಲು ಯಾವುದೇ ಮೂಲ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸದೇ 2022 ಆಗಸ್ಟ್‌ 11ರಂದು ನಮೂನೆ-3 ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸದರಿ ಖಾತಾ ಎಕ್ಸ್‌ಟ್ಯಾಕ್ ಆಧಾರದ ಮೇಲೆ ಸುಧಾ ಬಿ ಹಾಗೂ ಪೂಜಾ ಟಿ ಎಂಬುವವರು ಸಬ್ ರೆಜಿಸ್ಟಾರ್ ಕಚೇರಿಯಲ್ಲಿ 2022ರ ಆಗಸ್ಟ್‌ 15ರಂದು ದಾನ ಪತ್ರದ ಆಧಾರದ ಮೇಲೆ ನೋಂದಾವಣೆ ಮಾಡಿಸಿಕೊಂಡು, 2022ರ ಅಕ್ಟೋಬರ್‌ 10ರಂದು ಖಾತಾ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಾರ್ಡ್‌ ನಂಬರ್-20 ರ ಸಾರ್ವಜನಿಕರು, ಆಯುಕ್ತರಿಗೆ ದೂರು ನೀಡಿದ್ದರು. ಸರ್ವೆ ನಂ. 51ರ ಉದ್ಯಾನ ಜಾಗವನ್ನು ಖಾಸಗಿ ವ್ಯಕ್ತಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಸದರಿ ಸ್ವತ್ತನ್ನು ಯಾವುದೇ ಕಾರಣಕ್ಕೂ ಖಾತೆ ಮಾಡಬಾರದೆಂದು ದೂರು ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನೀರಿಗಾಗಿ ವಿದ್ಯಾರ್ಥಿಗಳ ಪರದಾಟ

ಆಯುಕ್ತರು ಈ ಬಗ್ಗೆ ತನಿಖೆ ಮಾಡಿ ವರದಿ ನೀಡುವಂತೆ ಉಪ ಆಯುಕ್ತರು(ಕಂದಾಯ) ಹಾಗೂ ಎಸ್ಟೇಟ್‌ ಆಫೀಸರ್‌ಗೆ ಆದೇಶಿದ್ದರು. ಇದೀಗ ತನಿಖಾ ವರದಿ ಸಲ್ಲಿಸಿದ್ದು, ʼಮೇಲಾಧಿಕಾರಿ ಆದೇಶ ಇಲ್ಲದೆ, ಸುನೀತಾ ಅವರು ಖಾತೆ ಪುಸ್ತಕದಲ್ಲಿ ಹೆಸರು ಸೇರಿಸಿದ್ದರುʼ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಕ್ರಮಗೊಂಡಿರುವ ಪಾಲಿಕೆ ಆಯುಕ್ತರು ಅಮಾನತುಗೊಳಿಸಿ ಮುಂದಿನ
ತನಿಖೆಗೆ ಆದೇಶ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...