ದಾವಣಗೆರೆ | ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ, ವ್ಯಾಪಾರೋದ್ಯಮ ಸಹಕಾರ ಸಂಘದಲ್ಲಿಅಕ್ರಮ: ತನಿಖೆಗೆ ಆಗ್ರಹ

Date:

Advertisements

ದಾವಣಗೆರೆ ಜಿಲ್ಲೆ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತದಲ್ಲಿ 17 ಕೋಟಿಗೂ ಹೆಚ್ಚು ಹಣದ ದುರುಪಯೋಗ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ, ಯಾವುದೇ ಕಾರಣಕ್ಕೆ ಸಮಾಪನೆ ತೆರವು ಮಾಡಬಾರದು ಎಂದು ಸಹಕಾರ ಸಂಘದ ಮಾಜಿ ನಿರ್ದೆಶಕರು ಹಾಗೂ ಸದಸ್ಯರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್ ಎನ್ ಚನ್ನಬಸಪ್ಪ, ಎಂ ಎಸ್ ಮಲ್ಲಿಕಾರ್ಜುನ, ಆರ್ ಎಸ್ ಗುರು ಶಾಂತಪ್ಪ ಜಂಟಿಯಾಗಿ ಮಾತನಾಡಿ, “2009ರಿಂದ 2018ರ ಅವಧಿಯಲ್ಲಿನ ಆಡಳಿತ ಮಂಡಳಿಯಲ್ಲಿ ಇದ್ದ ಕೆಲವರು ಆಡಳಿತದಲ್ಲಿ ಲೋಪ ಎಸಗಿದ್ದು, ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಈ ಕುರಿತು ಸಹಕಾರ ಇಲಾಖೆಯ ಅಧಿಕಾರಿಗಳಿಂದ ಕಲಂ 65, 68, 69ರ ಅಡಿಯಲ್ಲಿ ತನಿಖೆ ನಡೆಸಿ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತವನ್ನು ಸಮಾಪನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ಅಂದಿನ ಆಡಳಿತ ಮಂಡಳಿಯಲ್ಲಿದ್ದ ಸದಸ್ಯರ ಅಭಿಪ್ರಾಯಗಳಿಗೆ ಕಿವಿಗೊಡದೆ ಏಕಪಕ್ಷೀಯವಾಗಿ ಏಕಸ್ವಾಮ್ಯವನ್ನು ಸಾಧಿಸುವ ಉದ್ದೇಶದಿಂದ ಆಮಿಷ ಒಡ್ಡಿ, ಬೆದರಿಸಿ ತಾನು ಹೇಳಿದಂತೆ ಮಾಡಿಸಿಕೊಂಡಿದ್ದಾರೆ. ಅಲ್ಲದೇ ಸಂಘದ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ” ಎಂದು ಕಿಡಿ ಕಾರಿದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ರೈತ – ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಸಿಐಟಿಯು ಒತ್ತಾಯ

“ಸಹಕಾರ ಸಂಘದಲ್ಲಿ ರೈತರ ಚಟುವಟಿಕೆಗಳನ್ನು ಬಿಟ್ಟು ಇನ್ನಿತರ ಅಕ್ರಮ ಚಟುವಟಿಕೆ ಮಾಡುತ್ತಾ, ಒತ್ತಾಯಪೂರ್ವಕವಾಗಿ ನಿರ್ದೇಶಕರ ಸಹಿ ಪಡೆದು ಸಂಘದಲ್ಲಿ ದುರಾಡಳಿತ, ಹಣ ದುರುಪಯೋಗ ಮಾಡಿದ್ದಾರೆ. ಹಾಗಾಗಿ ಈ ಎಲ್ಲ ದುರುಪಯೋಗಗಳ ಕುರಿತು ಸಮಗ್ರ ತನಿಖೆ ನಡೆಸಿ, ರೈತರು, ಸಾರ್ವಜನಿಕರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ನೂತನವಾಗಿ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತವನ್ನು ಆರಂಭಿಸಲು ಸಂಬಂಧಿಸಿದ ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಎನ್‌ ಇ ಶಿವಕುಮಾರ್, ಎಂ ಆರ್ ಕುಬೇಂದ್ರಪ್ಪ, ಹೆಚ್ ಜಿ ಮರುಳಸಿದ್ದಪ್ಪ, ಆರ್ ಜಿ ನರೇಶ್‌ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X