ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

Date:

Advertisements

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗಿ ದೇಶಾದ್ಯಂತ ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸಲು ಶ್ರಮಿಸುತ್ತಿದೆ ಎಂದು ಸಿಪಿಐ ರಾಜ್ಯ ನಾಯಕ ಡಾ ಸಿದ್ದನಗೌಡ ಪಾಟೀಲ್ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಲಿದೆ. ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮತ ಹಾಕಿ ಬೆಂಬಲ ಸೂಚಿಸಬೇಕು” ಎಂದು ಮನವಿ ಮಾಡಿದರು.

“ಈ ದೇಶದಲ್ಲಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಚುನಾವಣೆ ಉಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಚುನಾವಣೆ ಎನ್ನುವ ಪದ್ಧತಿಯೇ ಇಲ್ಲದಂತಾಗುತ್ತದೆ. ಚುನಾವಣೆ ದೇಶದ ಪ್ರಜಾಪ್ರಭುತ್ವದ ಅಡಿಯಲ್ಲಿ ನಡೆಯುತ್ತದೆ. ಒಂದು ವೇಳೆ ದೇಶದಲ್ಲಿ ಚುನಾವಣೆ ಇಲ್ಲ ಎಂದಾದರೆ ನಾವು ಮುಂಬರುವ ದಿನಗಳನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಒಂದು ದೇಶ ಒಬ್ಬ ನಾಯಕ ಎನ್ನುವ ಪರಿಸ್ಥಿತಿ ಎದುರಾಗಿ ಹಿಟ್ಲರ್ ಆಡಳಿತ ಬರಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

Advertisements

“ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪಾರ್ಲಿಮೆಂಟ್ ಕಾಯುವ ಬದಲು ಕಾರ್ಪೋರೆಟ್ ಕಂಪನಿಗಳನ್ನು ಕಾಯಲು ಅವಕಾಶ ಮಾಡಿಕೊಡುತ್ತದೆ. ಅಲ್ಲದೆ ಈ ದೇಶದ ಬಹುತ್ವವನ್ನು ಒಡೆಯುವ ಮೂಲಕ ಏಕವ್ಯಕ್ತಿ ಆಡಳಿತ ಬರಲಿದೆ. ಅಲ್ಲದೆ ವಿರೋಧ ಪಕ್ಷಗಳನ್ನು ದಮನ ಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ. ಚುನಾವಣೆಯಲ್ಲಿ ಹೇಳಿಕೊಳ್ಳಲು ಯಾವುದೇ ವಿಷಯ ಇಲ್ಲದ ಕಾರಣ ದೇವಸ್ಥಾನದಲ್ಲಿ ಇರಬೇಕಾದ ರಾಮನನ್ನು ಬೀದಿಗೆ ತಂದಿದ್ದಾರೆ. ಪಾರ್ಲಿಮೆಂಟ್‌ನಲ್ಲಿ ಇರಬೇಕಾದ ಮೋದಿ ದೇವಸ್ಥಾನದಲ್ಲಿ ಕುಳಿತು ಭಜನೆ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

“ರೈತ ವಿರೋಧಿ, ಕೃಷಿ ವಿರೋಧಿ, ಕಾರ್ಮಿಕ ವಿರೋಧಿ ಕಾನೂನನ್ನು ಜಾರಿಗೆ ತಂದು ದೇಶದ ಕಾರ್ಮಿಕ, ರೈತರ ಬದುಕನ್ನೇ ನಾಶ ಮಾಡುತ್ತಿದ್ದಾರೆ. ಆಡಳಿತ ವಿರೋಧಿ ಅಭಿಪ್ರಾಯಗಳನ್ನು ಪ್ರಸಾರ ಆಗದಂತೆ ತಡೆಯಲು ಮುಂದಾಗಿದ್ದಾರೆ. ಬಿಎಸ್‌ಆರ್‌ಬಿ ಕಾಯಿದೆ ಜಾರಿಗೆ ಬಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಅಪಾಯಕಾರಿ ಹೆಜ್ಜೆ ಇಡುತ್ತಿರುವ ಬಿಜೆಪಿಯನ್ನು ದೂರ ಇಡಲು ಪ್ರಜಾಸತ್ತತೆಯ ಅಳಿವು ಉಳಿವಿನ ಪ್ರಶ್ನೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಬಿಜೆಪಿಯನ್ನು ಸೋಲಿಸಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆಯ ಗಾಳಿ: ಗೀತಾ ಶಿವರಾಜ್‌ಕುಮಾರ್

ಸುದ್ದಿಗೋಷ್ಟಿಯಲ್ಲಿ ಸಿಪಿಐ ಪಕ್ಷದ ಎಚ್ ಜಿ ಉಮೇಶ್, ಆನಂದ ರಾಜ್, ಅವರಗೆರೆ ಚಂದ್ರು, ವಿ ಲಕ್ಷ್ಮಣ, ಟಿ ಎಸ್ ನಾಗರಾಜ್, ಎಂ ಬಿ ಶಾರದಮ್ಮ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X