ದಾವಣಗೆರೆ | ಒಳಮೀಸಲಾತಿಗೆ ಆಯೋಗ ರಚನೆ; ಮತ್ತೊಂದು ಮೂರ್ಖ ಭರವಸೆ: ಮಾದಿಗ ಜಾಗೃತಿ ಸಮಿತಿ

Date:

Advertisements

ಸುಪ್ರೀಂ ಕೋರ್ಟ್ ನ ಸೂಚನೆಯಂತೆ, ಒಳ ಮೀಸಲಾತಿಯನ್ನು ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಾದಿಗ ಜಾಗೃತಿ ಸಮಿತಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿ ಒತ್ತಾಯಿಸಿತು.

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಮುಖಂಡರು, ಒಳಮಿಸಲಾತಿಗಾಗಿ ಮಾದಿಗ ಸಮುದಾಯ ಕಳೆದ 30 ವರ್ಷಗಳಿಂದ ಅನೇಕ ಹೋರಾಟ ಮಾಡುತ್ತಾ ಬಂದಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಹೋರಾಟದ ಫಲವಾಗಿ 2004 ರಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷದ ನೇತೃತ್ವದ ಎಸ್.ಎಂ. ಕೃಷ್ಣ ಸರ್ಕಾರ ಹೋರಾಟದ ಮನವಿಗೆ ಸ್ಪಂದಿಸಿ ಹೈಕೋರ್ಟನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಎ.ಜೆ. ಸದಾಶಿವ ರವರ (ಆಯೋಗ) ರಚನೆ ಮಾಡಿ ನೂರಾರು ಕೋಟಿ ವ್ಯಯಮಾಡಿ ನಿಕಟವಾದ ವರದಿಯನ್ನು ತಯಾರು ಮಾಡಿತು ಎಂದರು.

ನಂತರ ಸದಾನಂದ ಗೌಡರ ಸರ್ಕಾರ ವರದಿಯನ್ನು ಅನುಷ್ಠಾನಗೊಳಿಸಲು ಪ್ರಯತ್ನಪಟ್ಟಿತು. ನಂತರ ಅನೇಕ ಸಮಸ್ಯೆಗಳ ನೆಪವೊಡ್ಡಿ ಸದಾಶಿವ ಆಯೋಗದ ವರದಿ ಮೂಲೆ ಗುಂಪಾಯಿತು. ಮತ್ತು ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಸಮುದಾಯದ ನ್ಯಾಯಕ್ಕೋಸ್ಕರ ಮಾಧುಸ್ವಾಮಿ ಆಯೋಗವನ್ನು ರಚನೆ ಮಾಡಿತ್ತು. ಈ ಆಯೋಗವು ವರದಿಯ ಎಲ್ಲಾ ದತ್ತಾಂಶಗಳನ್ನು ಕೂಲಂಕುಶವಾಗಿ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಅದರ ಫಲವಾಗಿ ಬಸವರಾಜ ಬೊಮ್ಮಾಯಿ ರವರ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 2% ಹೆಚ್ಚಿಸುವುದರೊಂದಿಗೆ ಮಾದಿಗ ಸಮುದಾಯಕ್ಕೆ ಶೇಕಡಾ 6%, ಛಲವಾದಿ ಸಮುದಾಯಕ್ಕೆ 5.5%, ಕೊರಚ,ಲಂಬಾಣಿ, ಭೋವಿ ಜಾತಿಗಳಿಗೆ 4%, ಇತರೆ 1.5% ಸಣ್ಣ ಮಟ್ಟ ಸಮುದಾಯಗಳಿಗೆ ನ್ಯಾಯ ಸಮ್ಮತವಾಗಿ ಮೀಸಲಾತಿಯನ್ನು ಹಂಚಿಕೆ ಮಾಡಿತ್ತು ಎಂದು ತಿಳಿಸಿದರು.

Advertisements
ದಾವಣಗೆರೆ

ಆದರೆ ಸಮಾಜವಾದಿ ಹಿನ್ನೆಲೆಯಿಂದ ಬಂದಿರುವಂತಹ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತೇನೆಂದು ಹೇಳುತ್ತಾ ಬಂದಿರುವ ಸಿದ್ದರಾಮಯ್ಯ ಸರ್ಕಾರವನ್ನು ನಮ್ಮ ಸಮುದಾಯವು ಹಿಂದಿನಿಂದಲೂ ಬೆಂಬಲಿಸಿತ್ತು. ಆದರೆ ನಮ್ಮ ಬೇಡಿಕೆಯನ್ನು ಅತಿ ಲಘುವಾಗಿ ತೆಗೆದುಕೊಂಡಿದ್ದರಿಂದ ನಮ್ಮ ಸಮುದಾಯ ಉಗ್ರವಾಗಿ ಖಂಡಿಸುತ್ತದೆ. ಈಗಲೂ ಸಹ ಮೂರು ಕ್ಷೇತ್ರಗಳ ಉಪ ಚುನಾವಣಾ ಸಂದರ್ಭದಲ್ಲಿಯೂ ಮೂರು ತಿಂಗಳ ಸಮಯದಲ್ಲಿ ಹೊಸದಾಗಿ ಆಯೋಗ ರಚನೆ ಮಾಡಿ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳುತ್ತಿರುವುದು ಈ ಸಮುದಾಯಕ್ಕೆ ಮಾಡುತ್ತಿರುವ ಮತ್ತೊಂದು ಮೂರ್ಖ ಭರವಸೆ ಎಂದುಕೊಳ್ಳಬೇಕಾಗುತ್ತದೆ ಕಿಡಿಕಾರಿದರು.

ಇದನ್ನು ಓದಿದ್ದೀರಾ? ಅರಕಲಗೂಡು | ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಬಂಧಿಸಲು ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಆದ್ದರಿಂದ ಸಮಾಜವಾದಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲ ಕಷ್ಟದ ಸಂದರ್ಭದಲ್ಲಿ ಅಹಿಂದ ಸಮುದಾಯವನ್ನು ಜಪಿಸುವ ನೀವು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನ್ವಯ ಈ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ ಸಾಮಾಜಿಕವಾಗಿ ಶೋಷಣೆಗೊಳಗಾಗಿರುವ ಈ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಈ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾದಿಗ ಜಾಗೃತಿ ಸಮಿತಿಯ ಆಲೂರು ನಿಂಗರಾಜ್, ಗುಡ್ಡಪ್ಪ, ಜಯಪ್ರಕಾಶ್ ಎಂ, ಚಂದ್ರಪ್ಪ, ಜಿ ಎಚ್ ನಾಗರಾಜ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎಂ. ಹಾಲೇಶ್, ಹೆಗ್ಗೆರೆ ರಂಗಪ್ಪ, ರವಿಕುಮಾರ್, ಶಿವಣ್ಣ ಹಾಗೂ ಕಾರ್ಯಕರ್ತರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X