ದಾವಣಗೆರೆ | ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹಳ್ಳಕ್ಕೆ ನುಗ್ಗಿದ ಖಾಸಗಿ ಬಸ್

Date:

Advertisements

ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕರ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಸ್ಸು ನುಗ್ಗಿದ ಘಟನೆ ದಾವಣಗೆರೆ ನಗರದ ಹೊರವಲಯದಲ್ಲಿ ನಡೆದಿದೆ.

ದಾವಣಗೆರೆ ನಗರದ ಹೊರವಲಯದಲ್ಲಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ಸೊಂದು ಚಲಿಸುತ್ತಿದ್ದ ವೇಳೆ ಅಚಾನಕ್ಕಾಗಿ ಎದುರಾದ ಕಾರನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಈ ವೇಳೆ ರಸ್ತೆ ಬಿಟ್ಟು ಬದಿಯಲ್ಲಿನ ಹಳ್ಳದ ಕಡೆಗೆ ನುಗ್ಗಿದೆ. ಅಷ್ಟರಲ್ಲಿ ಎಚ್ಚೆತ್ತ ಚಾಲಕ ಬ್ರೇಕ್ ಹಾಕಿದ್ದರಿಂದ ಹೆಚ್ಚಿನ ಅವಘಡ ತಪ್ಪಿದೆ.

WhatsApp Image 2024 11 14 at 9.48.48 PM

ಎದುರಿಗೆ ಬಂದ ಕಾರು, ಬೈಕನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ, ಬಸ್ನಲ್ಲಿ 35-40 ಪ್ರಯಾಣಿಕರಿದ್ದರು. ಯಾರಿಗೂ ತೀವ್ರ ಸ್ವರೂಪದ ಗಾಯಗಳಾಗಿಲ್ಲ. ಅಷ್ಟಕ್ಕೆ ನಿಯಂತ್ರಿಸಿದ್ದರಿಂದ ಹೆಚ್ಚಿನ ಹಾನಿ ತಪ್ಪಿದೆ. ಕೇವಲ ಹದಿನೈದು ಇಪ್ಪತ್ತು ಅಡಿಗಳಷ್ಟು ಮುಂದೆ ಸಾಗಿದ್ದರೆ ಹಳ್ಳದ ಆಳದ ಕಮರಿಗೆ ಬಿದ್ದು ಸಾವುನೋವುಗಳು ಹೆಚ್ಚುತ್ತಿದ್ದವು ಎಂದು ಅಲ್ಲೇ ಹತ್ತಿರದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಮಾಹಿತಿ ನೀಡಿದರು.

Advertisements

ಇದನ್ನು ಓದಿದ್ದೀರಾ? ಧಾರವಾಡ | ನೆರೆಮನೆಗೆ ಆಟವಾಡಲು ಹೋದ ಮಗ, ಬಂದಿದ್ದು ಶವವಾಗಿ : ಹೂತಿದ್ದ ಶವ ಹೊರ ತೆಗೆಸಿದ್ದು ಯಾಕೆ?

ಬಸ್ ನ ಈ ಅವಘಡದಿಂದಾಗಿ ಜಗಳೂರು ರಸ್ತೆಯಲ್ಲಿ ಕೆಲಕಾಲ ರಸ್ತೆ ಓಡಾಟ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

dvg1 1
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X