ದಾವಣಗೆರೆ | ಅರ್ಹ ಫಲಾನುಭವಿಗಳಿಗೆ ಸೂರು ಕಲ್ಪಿಸಿ: ಸಂಸದ ಸಿದ್ದೇಶ್ವರ್

Date:

ಪ್ರಧಾನ ಮಂತ್ರಿ ಆವಾಸ್ ಯೋಜನೆಯು ನಿರಾಶ್ರಿತರಿಗೆ ಸೂರು ಕಲ್ಪಿಸುವ ಉದ್ದೇಶ ಹೊಂದಿದೆ. ಪ್ರತಿ ಹಳ್ಳಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ತಿಳಿಸಿದರು.

- Advertisement -

ದಾವಣಗೆರೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. “ಜಿಲ್ಲೆಯಲ್ಲಿ 966 ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಯಾವುದೇ ಜಾತಿ ಭೇದವಿಲ್ಲದೆ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಒದಗಿಸಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳಪೆ ಕಾಮಗಾರಿಗಳಾಗುತ್ತವೆ. ಅಧಿಕಾರಿಗಳು ಜವಬ್ದಾರಿಯಿಂದ ಕೆಲಸ ನಿರ್ವಹಿಸಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಹೊನ್ನಾಳಿ ಪಟ್ಟಣ ಪಂಚಾಯಿತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗಿದ್ದು, ಘಟಕಕ್ಕೆ ಹಗಲು ರಾತ್ರಿ ಸೆಕ್ಯೂರಿಟಿ ಗಾರ್ಡ್‌ಗಳನ್ನು ನೇಮಕ ಮಾಡಬೇಕು. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮಾಂತರ ಪ್ರದೇಶಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಸಮುದಾಯ ಶೌಚಾಲಯಗಳಲ್ಲಿ ಸ್ವಚ್ಛತೆ ಹಾಗೂ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಬೇಕು” ಎಂದು ತಿಳಿಸಿದರು.

“ಜಲಜೀವನ್ ಮಿಷನ್ ಯೋಜನೆಯಡಿ ಗುಣಮಟ್ಟದ ನಳ, ಪೈಪುಗಳ ಅಳವಡಿಕೆ ಮತ್ತು ದುರಸ್ತಿಗೊಂಡಿರುವ ನಳ ಸಂಪರ್ಕಗಳನ್ನು ಸರಿಪಡಿಸಬೇಕು. ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಕುರಿತು ಮಾಹಿತಿ ಕೊರತೆ ಇದ್ದು, ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಪ್ರಚಾರ ಮಾಡಿ ನೋಂದಣಿ ಹಾಗೂ ವಿಮಾ ಸೌಲಭ್ಯ ಒದಗಿಸುವಂತೆ ಕೃಷಿ ಇಲಾಖೆಯಿಂದ ಕೈಗೊಳ್ಳಬೇಕು. ಬಿತ್ತನೆಬೀಜ, ಗೊಬ್ಬರ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ವರ್ಷ ಹೆಚ್ಚಿನ ಪ್ರದೇಶದಲ್ಲಿ ತೊಗರಿ ಬೆಳೆ ಬೆಳೆಯಲು ಆದ್ಯತೆ ನೀಡಬೇಕು” ಎಂದು ಸೂಚನೆ ನೀಡಿದರು.

“ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಇಕೆವೈಸಿ ಮಾಡಿಸದೇ ಇರುವ ರೈತರನ್ನು ಗುರುತಿಸಿ ನೋದಣಿ ಮಾಡಿಸಬೇಕು. ಚಿಗಟೇರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಆಹಾರ, ಅಡುಗೆ ಕೊಠಡಿಯನ್ನು ಸ್ವಚ್ಛತೆಯಿಂದ ನೋಡಿಕೊಳ್ಳಬೇಕು. ಅಂಗನವಾಡಿ ಕೇಂದ್ರಗಳಿಂದ ಮಹಿಳೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಉತ್ತಮ ಗುಣಮಟ್ಟದ ಮೊಟ್ಟೆಗಳು ಪೂರೈಕೆಯಾಗುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಿಮ್ಸ್‌ ನಿರ್ದೇಶಕರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

ಜಗಳೂರು ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿ, “ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕೊಳೆತ ಹಾಗೂ ಕಡಿಮೆ ತೂಕದ ಮೊಟ್ಟೆಗಳು ಸರಬರಾಜಾಗುತ್ತಿದ್ದು, ನಮ್ಮ ಜಿಲ್ಲೆಯಲ್ಲಿ ಈ ತರಹದ ದೂರುಗಳಿದ್ದಲ್ಲಿ ಮೇಲಾಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಬೇಕು” ಎಂದರು.

ಹರಿಹರ ಶಾಸಕ ಬಿ ಪಿ ಹರೀಶ್, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಕೆ ಇಟ್ನಾಳ್, ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕ ಡಾ. ಎ ಚನ್ನಪ್ಪ, ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಮುಖ್ಯ ಲೆಕ್ಕಾಧಿಕಾರಿ ಸೌಮ್ಯಶ್ರೀ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...