ದಾವಣಗೆರೆ | ಅಕ್ರಮವಾಗಿ ಅಳವಡಿಸಿದ್ದ ಫ್ಲೆಕ್ಸ್ ತೆರವು; ಕ್ರಮ ಕೈಗೊಳ್ಳುವ ಎಚ್ಚರಿಕೆ

Date:

Advertisements

ದಾವಣಗೆರೆ ಜಿಲ್ಲೆ ಹರಿಹರ ನಗರಸಭೆಯಿಂದ ಪರವಾನಗಿ ಪಡೆಯದೆ ಮುಖ್ಯ ವೃತ್ತಗಳಲ್ಲಿ ಅಳವಡಿಸಿದ್ದ ಬೋರ್ಡ್‌, ಪ್ಲೆಕ್ಸ್ ತೆರವುಗೊಳಿಸಲು ಹರಿಹರ ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ನಗರಸಭಾ ಆರೋಗ್ಯ ನಿರೀಕ್ಷಕರ ತಂಡ ಕಾರ್ಯಾಚರಣೆಗೆ
ಮುಂದಾಯಿತು.

ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಆಯುಕ್ತರು, “ಅನಧಿಕೃತವಾಗಿ ಅಳವಡಿಸಿದ್ದ ಪ್ಲೆಕ್ಸ್ ಹಾಗೂ ಭಿತ್ತಿ ಪತ್ರಗಳಿಂದ ಅಂದಗೆಟ್ಟಿದ್ದ ನಗರದಲ್ಲಿ ನಗರಸಭೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತದೆ. ಯಾವುದೇ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು, ಇತರೆ ವ್ಯಕ್ತಿಗಳು ನಗರಸಭೆಯಿಂದ ಅನುಮತಿ ಪಡೆಯದೆ ಅಕ್ರಮವಾಗಿ ನಗರದ ನಾನಾ ಕಡೆಗಳಲ್ಲಿ ಪ್ಲೆಕ್ಸ್ ಹಾಗೂ ಜನ್ಮದಿನದ ಶುಭಾಷಯ ಕೋರುವ ಭಿತ್ತಿಪತ್ರಗಳನ್ನು ಸರ್ಕಾರಿ ಕಚೇರಿ ಗೋಡೆ, ಕಾಂಪೌಂಡ್ ಆವರಣ‌ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗುತ್ತಿದೆ. ಇದರಿಂದ ನಗರಸಭೆಯ ಸೌಂದರ್ಯ ಹಾಳು ಮಾಡಲಾಗುತ್ತಿದೆ. ನಗರಸಭೆಯಿಂದ ಪರವಾನಿಗೆ ಪಡೆಯದೆ ಅಳವಡಿಸಿದ ಅನಧಿಕೃತ ಪ್ಲೆಕ್ಸ್ ಬೋರ್ಡ್‌ಗಳನ್ನು ಯಾವುದೇ ಮುಲಾಜಿಲ್ಲದೇ ನಗರಸಭೆಯಿಂದ ತೆರವುಗೊಳಿಸಿ ಕಾನೂನು ರೀತಿ ಕ್ರಮಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಿದ್ದ ಮಾದರಿಯ ಸಾಮಾಜಿಕ ಸಂರಕ್ಷಣೆ ಮೀರಿ ಬೆಳೆಯಬೇಕು: ಬರಗೂರು ರಾಮಚಂದ್ರಪ್ಪ

Advertisements

“ಇನ್ನು ಮುಂದೆ ಯಾವುದೇ ಪ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಬೇಕಾದರೆ ನಗರಸಭೆಯಿಂದ ಪರವಾನನಗಿ ಪಡೆದು ಅಳವಡಿಸಬೇಕು” ಎಂದು ತಿಳಿಸಿದರು.

ಹಿರಿಯ ಆರೋಗ್ಯ ಅಧಿಕಾರಿ ಸಂತೋಷ್ ನಾಯ್ಕ, ನಗರಸಭೆ ಆರೋಗ್ಯ ಇಲಾಖೆಯ ಟ್ರೈನರ್ ಸೌಜನ್ಯ, ಅಬ್ದುಲ್ ರೆಹಮಾನ್, ನಗರಸಭೆ ಸಿಬ್ಬಂದಿ ಪೌರಕಾರ್ಮಿಕರು ತೆರವು ಕಾರ್ಯಚರಣೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X