ದಾವಣಗೆರೆ | ಸ್ಲಂ ಜನರ ಮತ ಜಾಗೃತಿ ಸಮಾವೇಶ; ಸ್ಲಂ ಜನರ ಪ್ರಣಾಳಿಕೆ-2024 ಬಿಡುಗಡೆ

Date:

Advertisements

ದೇಶದ ರಕ್ಷಣೆ, ಸಾರ್ವಭೌಮತ್ವದ ಸಂವಿಧಾನದ ರಕ್ಷಣೆ ಮಾಡುವ ಅಭ್ಯರ್ಥಿಗೆ ನಾವು ಮತ ನೀಡಲಿದ್ದೇವೆ ಎಂದು ಸ್ಲಂ ಜನಾಂದೋಲನ ಹಾಗೂ ಸಾವಿತ್ರಿಬಾಯಿ ಫುಲೆ ಸಂಘಟನೆ ದಾವಣಗೆರೆ ಜಿಲ್ಲಾ ಗೌರವಾಧ್ಯಕ್ಷ ಎಸ್ ಎಲ್ ಆನಂದಪ್ಪ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ “ಲೋಕಸಭಾ ಚುನಾವಣೆ-2024 ಸ್ಲಂ ಜನರ ಪ್ರಣಾಳಿಕೆ” ಬಿಡುಗಡೆ ಮಾಡಿ ಮಾತನಾಡಿ, “ಕೊಳಗೇರಿಯಲ್ಲಿ ನಿವಾಸಿಗಳು ಯಾರಿಗೆ ಮತ ನೀಡಬೇಕೆಂದು ಚರ್ಚಿಸಲಾಗಿದೆ. ಪ್ರಸ್ತುತ ಪವಿತ್ರ ಸಂವಿಧಾನಕ್ಕೆ ಧಕ್ಕೆಯಾಗುತ್ತಿದೆ. ದೇಶದಲ್ಲಿ ಏಕತೆ ದೂರವಾಗುತ್ತಿದೆ. ಆದ್ದರಿಂದ ಭಾರತ ಸಂವಿಧಾನ ಮತ್ತು ದೇಶ ರಕ್ಷಣೆಗಾಗಿ ಸ್ಲಂ ಜನರ ಮತ ಎಂಬ ಜಾಗೃತಿ ಸಮಾವೇಶವನ್ನು ಏಪ್ರಿಲ್‌ 27ರಂದು ಹಮ್ಮಿಕೊಳ್ಳಲಾಗಿದೆ” ಎಂದರು.

“ಸಂಸತ್ ಸದಸ್ಯರ ನಿಧಿಯಲ್ಲಿ ಸ್ಲಂಗಳ ಅಭಿವೃದ್ಧಿಗೆ ಹಣ ಮೀಸಲಿಡಲಿಬೇಕು. ನಿವೇಶನ ರಹಿತರು ಹಾಗೂ ವಸತಿ ರಹಿತರಿಗೆ ನೀವೇಶನ/ವಸತಿ ದೊರೆಯಲು ರಾಷ್ಟ್ರೀಯ ನಗರ ಲ್ಯಾಂಡ್ ಬ್ಯಾಂಕ್ ನೀತಿ ಜಾರಿಗೊಳಿಸಬೇಕು. ವಸತಿ ಹಕ್ಕು ಕಾಯಿದೆ ಜಾರಿ ಮಾಡಬೇಕು. ದೇಶದ ಎಲ್ಲ ಪ್ರಜೆಗಳಿಗೆ ಉಚಿತ ಮತ್ತು ಕಡ್ಡಾಯ ಚಿಕಿತ್ಸೆ ನೀಡುವ ಹೆಲ್ತ್ ಗ್ಯಾರೆಂಟಿಯನ್ನು ಜಾರಿಗೊಳೊಸಬೇಕು. ರೈಟ್ ಟು ಎಜುಕೇಶನ್ ಅರ್ಥಪೂರ್ಣಗೊಳಿಸಲು ಸಮಾನ ಶಿಕ್ಷಣ ಜಾರಿಗೊಳಿಸಿ ʼರಾಷ್ಟ್ರೀಯ0 ಶಿಕ್ಷಣ ನೀತಿʼ ಕಾಯಿದೆ ರದ್ದುಗೊಳಿಸಬೇಕು. ದೇಶದ ಎಲ್ಲ ನಾಗರಿಕರಿಗೆ ಉದ್ಯೋಗ ಭದ್ರತೆ ನೀಡಲು ‘ರಾಷ್ಟ್ರೀಯ ನಗರ ಉದ್ಯೋಗ ಖಾತ್ರಿʼ ಯೋಜನೆ ಜಾರಿಗೊಳಿಸಬೇಕು ಮತ್ತು ಪ್ರತಿ ಕುಟುಂಬಕ್ಕೊಂದು ಸರ್ಕಾರಿ ಕೆಲಸ ನೀಡಬೇಕು. 1931ರ ನಂತರದಲ್ಲಿ ದೇಶದಲ್ಲಿ ಜನಗಣತಿ ನಡೆದಿರುವುದಿಲ್ಲ. ಆದ್ದರಿಂದ ಜಾತಿವಾರು ಜನಗಣತಿಯನ್ನು ನಡೆಸಬೇಕು” ಎಂಬ ಬೇಡಿಕೆಗಳು ಸೇರಿದಂತೆ ಹಲವು ಸ್ಲಂ ನಿವಾಸಿಗಳ ಸಾರ್ವತ್ರಿಕ ಬೇಡಿಕೆಗಳನ್ನು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಏಮ್ಸ್ ಮಂಜೂರು ಮಾಡದಿದ್ದರೆ ಚುನಾವಣೆ ಬಹಿಷ್ಕಾರ; ಎಚ್ಚರಿಕೆ

ಸುದ್ದಿಗೋಷ್ಟಿಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ರೇಣುಕಾ ಯಲ್ಲಮ್ಮ, ಎಂ ಶಬ್ಬಿರ್ ಯೂಸುಫ್ ಸಾಬ್, ಬಾಲಪ್ಪ, ಮಂಜುಳಾ, ಜಂಶಿದ್ ಬಾನು, ಗೀತಮ್ಮ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X