ದಾವಣಗೆರೆ | ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ; ತಪ್ಪಿತಸ್ಥರ ಕ್ರಮಕ್ಕೆ ಕುರುಬರ ಸಂಘ ಆಗ್ರಹ

Date:

Advertisements

ಮಂಡ್ಯ ನಗರದ ಬಿ ಎಂ ರಸ್ತೆಯಲ್ಲಿರುವ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ ಕಟ್ಟಡದ ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘ, ದಾವಣಗೆರೆ ಜಿಲ್ಲಾ ಕುರುಬರ ಸಂಘ ಹಾಗೂ ಸಮಾಜದ ಹಲವು ಸಂಘಟನೆಗಳ ಸದಸ್ಯರು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು.

ಸಮಾಜದ ಮುಖಂಡ, ನಿವೃತ್ತ ಸಬ್ ರಿಜಿಸ್ಟ್ರರ್ ಮಲ್ಲಿಕಾರ್ಜುನಪ್ಪ ಮಾತನಾಡಿ, “ಕಳೆದ ಜನವರಿ 29ರ ಮಧ್ಯಾಹ್ನ ಸುಮಾರು 2 ಗಂಟೆ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ
ಕುಮಾರಸ್ವಾಮಿ, ಮಾಜಿ ಸಚಿವ ಸಿ ಟಿ ರವಿ ನೇತೃತ್ವದಲ್ಲಿ ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ನಡೆದ ಹನುಮಧ್ವಜದ ವಿವಾದದ ಪ್ರತಿಭಟನೆಯ ಮೆರವಣಿಗೆ ಸಮಯದಲ್ಲಿ ಮಂಡ್ಯ ನಗರದ ಬಿ ಎಂ ರಸ್ತೆಯಲ್ಲಿರುವ ಮಂಡ್ಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ ಕಟ್ಟಡದ ಕಿಟಕಿ, ಗಾಜುಗಳನ್ನು ಧ್ವಂಸಗೊಳಿಸಿದ್ದಾರೆ. ಇಂಥ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಸಮಾಜದ ಮುಖಂಡ ಎಸ್ ಎಸ್ ಗಿರೀಶ್ ಮಾತನಾಡಿ, “ಕಟ್ಟಡದ ಮೇಲೆ ಇದ್ದ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಈಗ ಸ್ಥಳೀಯರನ್ನು ಕೇಳಿದಾಗ ಪ್ರತಿಭಟನಾಕಾರರು ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚುವ ಹುನ್ನಾರ ನಡೆಸಿದ್ದು, ಬೆಳಕಿಗೆ ಬಂದಿದೆ. ಈ ವಿವಾದವನ್ನು ರಾಜಕೀಯ ದುರುದ್ದೇಶಕ್ಕಾಗಿ ಸೃಷ್ಟಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಶೋಷಿತರ ಸಮಾವೇಶ ಯಶಸ್ವಿಯಾಗಿರುವುದನ್ನು ಸಹಿಸಲಾಗದೆ ಅಸೂಯೆಯಿಂದ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯಗಳನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದರು.

Advertisements

“ಈ ದಬ್ಬಾಳಿಕೆ ಮತ್ತು ನೀಚ ಕೃತ್ಯವನ್ನು ಸಮರ್ಥವಾಗಿ ಎದುರಿಸಲು ರಾಜ್ಯದಲ್ಲಿರುವ ಕುರುಬ ಸಮಾಜ ಶಕ್ತವಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ. ಕುರುಬ ಸಮಾಜದ ಸಹನೆ ಮತ್ತು ತಾಳ್ಮೆಯನ್ನು ಪರೀಕ್ಷಿಸಬೇಡಿ” ಎಂದು ಎಚ್ಚರಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಭಕ್ತ ಕನಕದಾಸರು ಕುರುಬರು ಹಿಂದೂಗಳು ಎಂಬುದನ್ನು ಕಲ್ಲು ತೂರಿದ ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕು. ಇಂತಹ ಪ್ರಯತ್ನಕಾರಿ ಕೃತ್ಯಗಳಿಂದ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಕೂಡಲೇ ನಿಲ್ಲಿಸಬೇಕು. 2023ರ ವಿಧಾನಸಭಾ ಚುನಾವಣೆಯ ಮುಂಚೆ ತಾವು ಧರ್ಮ ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ. ಈಗ ಜಾತಿ ಜಾತಿಗಳ ಮಧ್ಯೆ ವಿಷ ಬೀಜವನ್ನು ಹೆಚ್ಚಿಸುವ ಕೆಲಸಕ್ಕೆ ಕೈ ಹಾಕಿದ್ದೀರಿ. ಸಮಾಜದಲ್ಲಿ ಸಾಮರಸ್ಯದಿಂದ ಕೂಡಿ ಬಾಳ್ವೆ ನಡೆಸುತ್ತಿರುವ ಎಲ್ಲ ಸಮುದಾಯಗಳನ್ನು ಒಡೆದು ಆಳುವ ನೀತಿಯನ್ನು ಈ ಕೂಡಲೇ ನಿಲ್ಲಿಸದಿದ್ದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ. ತಕ್ಕ ರೀತಿ ಪಾಠವನ್ನು ಎರಡು ಪಕ್ಷಗಳಿಗೆ ಕಲಿಸಬೇಕಾಗುತ್ತದೆ. ಈ ಕೃತ್ಯಕ್ಕೆ ಪ್ರಚೋದನೆ ನೀಡಿದ ಮತ್ತು ಕ್ಯತ್ಯವನ್ನು ಎಸಗಿದ ಸಮಾಜಘಾತುಕರ ವಿರುದ್ಧ ಸೂಕ್ತ ಎಚ್ಚರಿಕೆಯ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕ್ರೀಡಾ ವಿಭಾಗದ ಚಟುವಟಿಕೆಗಳ ಸಮಾರೋಪ ಸಮಾರಂಭ

ಪ್ರತಿಭಟನೆಯಲ್ಲಿ ಸಮಾಜದ ಮುಖಂಡರು ಕುಂಬಳೂರು ವಿರೂಪಾಕ್ಷಪ್ಪ, ಕೆ ರೇವಣಸಿದ್ದಪ್ಪ, ಪರಶುರಾಮ ಕೆ, ಪರಶುರಾಮ ಬಿ ದಿಳ್ಯಪ್ಪ, ಪ್ರೊ ಬಿ ಯಲ್ಲಪ್ಪ ಕುಂಬಳೂರು, ಎಂ ವಿರೂಪಾಕ್ಷಪ್ಪ, ಮಳಲಕೆರೆ ಪ್ರಕಾಶ್, ಜಡಗನಹಳ್ಳಿ ಚಿಕ್ಕಣ್ಣ, ಎಚ್ ಜಿ ಸಂಗಪ್ಪ, ದೀಪಕ್, ಜಡಗ್ನಳ್ಳಿ ವಿರೂಪಾಕ್ಷಪ್ಪ, ಶ್ರೀನಿವಾಸ್, ಆನಂದ, ಎಂ ಮನು, ಪುರಂದರ ಲೋಕಿಕೆರೆ, ಅನಂತಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X