ದಾವಣಗೆರೆ | ಶಾಲೆಯಲ್ಲಿ ಕಳಪೆ ಗುಣಮಟ್ಟದ ಬಿಸಿಯೂಟ; ಅಧಿಕಾರಿಗಳ ನಿರ್ಲಕ್ಷ್ಯ

Date:

Advertisements

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೆಮಲ್ಲನಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಆರು ತಿಂಗಳುಗಳಿಂದ ಮಧ್ಯಾಹ್ನದ ಬಿಸಿಯೂಟವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯೂ ಗಮನ ಹರಿಸದೆ ಕಣ್ಣುಮುಚ್ಚಿ ಕುಳಿತಿದೆ ಎಂದು ಕರುನಾಡ ನವ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಮಹಾಲಿಂಗಪ್ಪ ಜೆ. ಹಿರೇಮಲ್ಲನಹೊಳಿ ಆರೋಪಿಸಿದರು.

ಸುಮಾರು 6 ತಿಂಗಳುಗಳಿಂದ ಸಿಬ್ಬಂದಿಗಳು ಸರಿಯಾಗಿ ಅಡುಗೆ ಮಾಡದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಮನೆಯಿಂದ ಬುತ್ತಿಕಟ್ಟಿಕೊಂಡು ಬಂದು ಊಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ದಿನ.ಕಾಮ್‌ನೊಂದಿಗೆ ಮಹಾಲಿಂಗಪ್ಪ ಜೆ. ಹಿರೇಮಲ್ಲನಹೊಳಿ ಮಾತನಾಡಿ, “ಶಾಲೆಯ ಅಕ್ಷರ ದಾಸೋಹ ಅಡುಗೆ ತಯಾರಕರು ಅಕ್ಕಿ, ಬೇಳೆ, ತರಕಾರಿಗಳನ್ನು ಸರಿಯಾಗಿ ತೊಳೆಯದೆ ಶುಚಿತ್ವ ಕಾಪಾಡದೆ ಅಡುಗೆ ತಯಾರಿ ಮಾಡುತ್ತಿದ್ದಾರೆ. ಅದರಲ್ಲಿ ಹುಳುಗಳು, ತಲೆಕೂದಲು, ಕಸಕಡ್ಡಿ ಕಂಡಿಬಂದಿದ್ದು, ಮಣ್ಣಿನ ವಾಸನೆ ಇರುವ ನೀರಿನಿಂದ ಅಡುಗೆ ಮಾಡುವುದರಿಂದ ವಿದ್ಯಾರ್ಥಿಗಳು ಶಾಲೆಯಲ್ಲಿ ಊಟ ಮಾಡುತ್ತಿಲ್ಲ” ಎಂದು ತಿಳಿಸಿದರು.

Advertisements

“ಅಡುಗೆಯಲ್ಲಿ ಕೂದಲು ಹುಳಗಳು ಇವೆ ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡಿದರೆ ಅಡುಗೆ ತಯಾರಕರು ಶಾಲಾ ಮಕ್ಕಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಾರೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ .ಈ ರೀತಿ ನಡೆಯುವ  ಈ ವಿಚಾರವನ್ನು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೆ ಪ್ರಯೋನವಾಗಿಲ್ಲ” ಎಂದು ಆರೋಪಿಸಿದರು.

ಈ ಬಗ್ಗೆ ಮೂರನೇ ತರಗತಿಯ ಶಾಲೆಯ ಮಗುವಿನ ಹೆಸರು ಹೇಳಲಿಚ್ಚಿಸದ ತಾಯಿಯೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಈ ಹಿಂದಿನ ಶೈಕ್ಷಣಿಕ ವರ್ಷದ ಕೆಲವು ತಿಂಗಳುಗಳಿಂದಲೂ ಸರಿಯಾಗಿ ಬಿಸಿಯೂಟ ತಯಾರಿ ಮಾಡುತ್ತಿಲ್ಲ. ತಮ್ಮ ಮಗು ವಾರದ ಮಧ್ಯೆ ಕೆಲವು ದಿನಗಳಲ್ಲಿ ಮನೆಯಿಂದ ಊಟ ತೆಗೆದುಕೊಂಡು ಹೋಗಿ ಊಟ ಮಾಡುತ್ತದೆ” ಎಂದು ಖಚಿತಪಡಿಸಿದರು. 

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಉದ್ಯೋಗ ಕಾರ್ಡ್‌ ವಿತರಿಸುವಂತೆ ಕೂಲಿಕಾರ್ಮಿಕರ ಆಗ್ರಹ

“ತಾಲೂಕಿನ ಕೆಲವೊಂದು ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯಾವುದೇ ಶುಚಿತ್ವ, ರುಚಿ ರಹಿತವಾಗಿದ್ದು, ಮೊಟ್ಟೆ, ಬಾಳೆಹಣ್ಣು, ಶುದ್ಧ ಕುಡಿಯುವ ನೀರು ಕೂಡ ಇಲ್ಲ. ಮಕ್ಕಳು ಅನಿವಾರ್ಯ ಪರಿಸ್ಥಿತಿಯಲ್ಲಿ ಅದನ್ನೇ ಊಟ ಮಾಡುತ್ತಿದ್ದಾರೆ. ಮೇಲಧಿಕಾರಿಗಳು ಕಂಡರೂ ಕಾಣದಂತೆ ಜಾಣ ಮೌನ ವಹಿಸಿದ್ದಾರೆ” ಎಂದು ಆರೋಪಿಸಿದರು.

“ಶಾಸಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಕ್ಷರ ದಾಸೋಹ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಶಾಲೆಯಲ್ಲಿ ನಡೆಯುತ್ತಿರುವುದನ್ನು ಕಂಡು ಇಂತಹ ಅಡಿಗೆ ಸಿಬ್ಬಂದಿಗಳಿಗೆ ಮಧ್ಯಾಹ್ನದ ಬಿಸಿ ಊಟ ನಿರ್ವಾಹಕರಿಗೆ ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು” ಎಂದು ಜನಸಾಮಾನ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ದಾವಣಗೆರೆ | ಕೆರೆ ನೀರು ಪೋಲು, ನೀರಾವರಿ ಇಲಾಖೆ ನಿರ್ಲಕ್ಷ್ಯ; ದುರಸ್ತಿಗೆ ರೈತಸಂಘದ ಮುಖಂಡರ ಆಗ್ರಹ

"ಜಗಳೂರು ತಾಲೂಕಿನ ಭರಮ ಸಮುದ್ರ ಕೆರೆಯಲ್ಲಿ ಟ್ಯೂಬ್ ಗಳಲ್ಲಿ ನೀರು ಪೋಲಾಗುತ್ತಿದೆ....

Download Eedina App Android / iOS

X