ದಾವಣಗೆರೆ | ಕಳ್ಳತನ ಆರೋಪ; ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ

Date:

Advertisements

ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿಯ ಅಸ್ತಾಪನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಹಕ್ಕಿ-ಪಿಕ್ಕಿ ಜನಾಂಗದ ಬಾಲಕನ ಮೇಲೆ ಅದೇ ಜನಾಂಗದ 10 ರಿಂದ 15 ಮಂದಿ ಯುವಕರ ಗುಂಪು ಹಲ್ಲೆ ನಡೆಸಿದೆ. ದೊಣ್ಣೆ, ಡ್ರಿಪ್ ಪೈಪ್‌ನಿಂದ ಹಲ್ಲೆ ಮಾಡಿದ್ದು, ಬಾಲಕ ಚೀರಾಡುತ್ತಿರುವುದು ವಿಡಿಯೋದಲ್ಲಿದೆ.

ಇದು ಕೆಲ ತಿಂಗಳ ಹಿಂದೆ ನಡೆದ ಘಟನೆ ಎನ್ನಲಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿರುವ ಸಾಧ್ಯತೆ ಎಂದೂ ಹೇಳಲಾಗಿದೆ.

Advertisements

ಎಫ್‌ಐಆರ್‌ ದಾಖಲು : ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಬಾಲಕನ ತಾತ ನೀಡಿದ ದೂರಿನ ಮೇರೆಗೆ ಸದ್ಯ 9 ಯುವಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಅನುದಾನ,‌ ಅನುದಾನರಹಿತ ಶಾಲೆಗಳಲ್ಲಿ ಡೊನೇಷನ್ ತಡೆಗೆ ಎಸ್‌ಎಫ್ಐ ಆಗ್ರಹ

ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ ಮಾತನಾಡಿ, “ಬಾಲಕ 17 ವರ್ಷದವನಾಗಿದ್ದು, ಅಶ್ಲೀಲ ವಿಡಿಯೋಗಳನ್ನು ನೋಡುವುದು, ಮಹಿಳೆರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದನೆಂದು ತಿಳಿದುಬಂದಿದೆ. ಅವನ ಸಂಬಂಧಿಕರ ಒಂಟಿ ಮಹಿಳೆಯ ಎದು ಹೋಗಿ ಬಟ್ಟೆಬಿಚ್ಚಿ ನಿಲ್ಲುವು, ಅಶ್ಲೀಲ ವಿಡಿಯೋ ಪ್ಲೇ ಮಾಡುವಂತಹ ಘಟನೆಗಳನ್ನು ಕಂಡ ಸಂಬಂಧಿಕರೇ ಸೇರಿಕೊಂಡು ಮರಕ್ಕೆ ಕಟ್ಟಿ ಹೊಡೆದಿದ್ದಾರೆ” ಎಂದು ಪ್ರತಿಕ್ರಯಿಸಿದರು.

“ಈ ಕುರಿತು ನಮಗೆ ಯಾವುದೇ ದೂರು ಬಂದಿರಲಿಲ್ಲ. ಇದರ ವಿಡಿಯೋ ವೈರಲ್‌ ಆದ ಬಳಿಕ ನಾವು ದೂರು ದಾಖಲಿಸಲೇಬೇಕಾಗುತ್ತದೆ. ಈಗ ಆರೋಪಿಗಳ ವಿರುದ್ಧ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಇನ್ನೂ ಏಳು ಮಂದಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಸೆಕ್ಷನ್‌ 188ರಡಿ ಎಫ್‌ಐಆರ್‌ ದಾಖಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X