ದಾವಣಗೆರೆ | ನಕಲಿ ಬಿತ್ತನೆ ಬೀಜ ಸಾಗಾಟ; ಇಬ್ಬರ ಬಂಧನ

Date:

Advertisements

ಸರ್ಕಾರದ ಪರವಾನಿಗೆ ಇಲ್ಲದೆ ಮೆಕ್ಕೆಜೋಳ ಬಿತ್ತನೆ ಬೀಜವನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಕೂಡ್ಲಿಗಿ ಪಿಎಸ್ಐ ಹಾಗೂ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಲಗೇರಿ ಗ್ರಾಮದ ಗಿರೀಶ ದಾನಪ್ಪ ಸರವಂದ (36) ಹಾಗೂ ಮಂಜುನಾಥ (42) ಬಂಧಿತ ಆರೋಪಿಗಳು. ಅವರು ದಾವಣಗೆರೆ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಿಂದ ಕೂಡ್ಲಿಗಿ ತಾಲೂಕಿನ ಮೊರಬದ ಕಡೆಗೆ ಪರವಾನಗಿ ಇಲ್ಲದೆ ಅನಧಿಕೃತವಾಗಿ ಮೆಕ್ಕೆಜೋಳ ಬಿತ್ತನೆ ಬೀಜದ ಚೀಲಗಳನ್ನು ಸಾಗಿಸುತ್ತಿದ್ದರು. ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಬಿತ್ತನೆ ಬೀಜಗಳ ಒಟ್ಟು ಮೌಲ್ಯ 1.2 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿದ ಕೂಡ್ಲಿಗಿ ಪಿಎಸ್ಐ ಧನಂಜಯ ಅವರು ಭಾನುವಾರ ಸಂಜೆ 5-50ಕ್ಕೆ ಕೂಡ್ಲಿಗಿ ಹೊರವಲಯದ ಕೊಟ್ಟೂರು ರಸ್ತೆಯ ಬೈಪಾಸ್ ರಸ್ತೆಯಲ್ಲಿ ತಮ್ಮ ಸಿಬ್ಬಂದಿ ಜೊತೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Advertisements

ಕೂಡ್ಲಿಗಿ ಕೃಷಿ ರೈತ ಸಂಪರ್ಕ ಕೆಂದ್ರದ ಸಹಾಯಕ ಕೃಷಿ ಅಧಿಕಾರಿ ಹಾಗೂ ಬೀಜಗಳ ಪರಿವೀಕ್ಷಕ ಗುರುಬಸವರಾಜ ಚಿಲಗೋಡ ಅವರನ್ನು ಕರೆಯಿಸಿ ಮಾಹಿತಿ ಆಧಾರಿಸಿ ಅವರು ನೀಡಿದ ದೂರಿನ ಮೇರೆಗೆ ನಕಲಿ ಮೆಕ್ಕೆಜೋಳ ಬೀಜ ಸಾಗಾಟದಲ್ಲಿ ತೊಡಗಿದ್ದ ಇಬ್ಬರನ್ನೂ ಕೂಡ್ಲಿಗಿ ಪೊಲೀಸರು ವಶಕ್ಕೆ ಪಡೆದು ಸಾಗಾಟ ಮಾಡುತ್ತಿದ್ದ ಟಾಟಾ ಎಸಿ ವಾಹನವನ್ನು ಹಾಗೂ ಅದರಲ್ಲಿದ್ದ ಮೆಕ್ಕೆಜೋಳ ಬೀಜವನ್ನು ಜಪ್ತಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X