ದಾವಣಗೆರೆ | ಆಸ್ಪತ್ರೆ ಎದುರು ಪ್ರದರ್ಶನಕ್ಕಷ್ಟೇ ನಿಂತಿದೆ ಆ್ಯಂಬುಲೆನ್ಸ್‌

Date:

Advertisements

ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ‘108’ ಆ್ಯಂಬುಲೆನ್ಸ್‌ಗಳನ್ನು ಒದಗಿಸಿದೆ. ಹೋಬಳಿ ಮಟ್ಟದ ಬಹುತೇಕ ಆಸ್ಪತ್ರೆಗಳಲ್ಲೂ ‘108’ ಆ್ಯಂಬುಲೆನ್ಸ್‌ಗಳಿವೆ. ಆದರೆ, ಅವುಗಳು ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ ‘108’ ಆ್ಯಂಬುಲೆನ್ಸ್ ವಾಹನವನ್ನು ಕೊಡುವುದು ರೋಗಿಗಳ ಸೇವೆಗೋ? ಅಥವಾ ಆವರಣದಲ್ಲಿ ನಿಲ್ಲಿಸಿ ಪ್ರದರ್ಶನ ಮಾಡುವುದಕ್ಕೋ? ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರದ ಸರ್ಕಾರಿ ಆಸ್ಪತ್ರೆ ಬಳಿ 108 ಅಂಬ್ಯುಲೆನ್ಸ್ ಕಳೆದ 25 ದಿನಗಳಿಂದ ಕೆಟ್ಟು ನಿಂತಿದೆ. ಪರಿಣಾಮವಾಗಿ ರೋಗಿಗಳು, ಗರ್ಭಿಣಿಯರು ತುರ್ತು ಸಂದರ್ಭಗಳಲ್ಲಿ 108ಕ್ಕೆ ಕರೆ ಮಾಡಿದರೆ ಅಂಬ್ಯುಲೆನ್ಸ್ ಸಿಗುತ್ತಿಲ್ಲ ಎಂದು ರೋಗಿಗಳು ಮತ್ತು ಅವರ ಪಾಲಕರು ದೂರಿದ್ದಾರೆ.

ಕಷ್ಟಕಾಲದಲ್ಲಿ ರೋಗಿಗಳಿಗೆ ನೆರವಿಗೆ ನಿಲ್ಲಬೇಕಾದ ‘108’ ಆ್ಯಂಬುಲೆನ್ಸ್, ರೋಗಿಗಳಿಗೆ ಉಪಯೋಗವಾಗುದಕ್ಕಿಂತಲೂ ಕೆಟ್ಟು ನಿಲ್ಲುವುದೇ ಹೆಚ್ಚಾಗಿದೆ. ಆಸತ್ರೆಯ ವೈದ್ಯಾಧಿಕಾರಿಗಳ ನಿರ್ಲಕ್ಷ ಅಥವಾ ಆ್ಯಂಬುಲೆನ್ಸ್ ನಿರ್ವಹಣೆ ಮಾಡುವ ಅಧಿಕಾರಿಗಳ ನಿರ್ಲಕ್ಷದಿಂದಾಗಿ, ಸೂಕ್ತ ನಿರ್ವಹಣೆ ಇಲ್ಲದೆ ಆ್ಯಂಬುಲೆನ್ಸ್ ಸಾರ್ವಜನಿಕರ ಬಳಕೆಗೆ ದೊರೆಯದಂತಾಗಿದೆ ಎಂದು ಕಿಡಿಕಾರಿದ್ದಾರೆ.

Advertisements

ಕಳೆದ 25 ದಿನಗಳಿಂದ 108 ಅಂಬುಲೆನ್ಸ್ ವಾಹನದ ಬ್ಯಾಟರಿ ಹಾಳಾಗಿದೆ. ಏಜೆನ್ಸಿಯವರಾಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಲೀ ಆ ಬಗ್ಗೆ ಗಮನ ಕೊಡುತ್ತಿಲ್ಲ. ಪರಿಣಾಮ ತಾಲೂಕಿನ ಮಹಿಳೆಯರು, ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಹರಿಹರ ತಾಲೂಕಿನ ಜನರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X