ದಾವಣಗೆರೆ | ವಿವಿಧ ಬೇಡಿಕೆ ಈಡೇರಿಸುವಂತೆ ನೇಕಾರರ ಆಗ್ರಹ

Date:

Advertisements

ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ ದಾವಣಗೆರೆ ನಗರದಲ್ಲಿ ಪ್ರತಿಭಟನೆ ನಡೆಸಿ, ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ನಗರ ಪಾಲಿಕೆ ಎದುರಿನ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಸಾಗಿ ಮನವಿ ಸಲ್ಲಿಸಿದ್ದಾರೆ.

ಒಕ್ಕೂಟದ ಗೌರವಾಧ್ಯಕ್ಷ ಬಸವರಾಜ ಡಿ.ಗುಬ್ಬಿ ಮಾತನಾಡಿ, ಕಳೆದ 2023ರ ಮಾರ್ಚನಲ್ಲಿ ಬಿಜೆಪಿ ಸರ್ಕಾರ ಘೋಷಣೆ ಮಾಡಿದ್ದ ನೇಕಾರರ ಅಭಿವೃದ್ಧಿ ನಿಗಮ ಇನ್ನು ಕಾರ್ಯಾರಂಭ ಮಾಡಿಲ್ಲ. ಶೀಘ್ರವೇ ನೇಕಾರ ಅಭಿವೃದ್ಧಿ ನಿಗಮ ಕಾರ್ಯಾರಂಭ ಮಾಡಬೇಕು. ನೇಕಾರರ ಅಭಿವೃದ್ಧಿಗೆ 100 ಕೋಟಿ ರೂ. ಗಳನ್ನು ಮೀಸಲಿರಿಸಬೇಕು. ದಾವಣಗೆರೆಯಲ್ಲಿ ಜವಳಿ ಪಾರ್ಕ್ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

Advertisements

ರಾಜ್ಯದಲ್ಲಿ 60 ಲಕ್ಷ ಜನಸಂಖ್ಯೆಯಿರುವ ನೇಕಾರರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು. ಆತ್ಮಹತ್ಯೆ ಮಾಡಿಕೊಂಡ ನೇಕಾರರ ಕುಟುಂಬಗಳಿಗೆ ಪರಿಹಾರ ಧನ ಶೀಘ್ರವೇ ನೀಡಬೇಕು. ಕರ್ನಾಟಕ ಹ್ಯಾಂಡ್‌ಲೂಮ್ ಡೆವಲ್ಪಮೆಂಟ್‌ ಕಾರ್ಪೊರೇಷನ್ ಮುಖಾಂತರ ರಾಜ್ಯದ ಪ್ರತಿಯೊಬ್ಬ ಸರ್ಕಾರಿ ನೌಕರನಿಗೆ ಕೈಮಗ್ಗ ನೇಕಾರ ನೇಯ್ದ ಎರಡು ಜೊತೆ ಬಟ್ಟೆ ಖರೀದಿಸುವಂತೆ ಆದೇಶಿಸಬೇಕು. ವಿದ್ಯಾರ್ಥಿಗಳಿಗೆ ಸ್ಕೂಲ್ ಯೂನಿಫಾರಂ ಬಟ್ಟೆಗಳನ್ನು ನೇಕಾರರಿಂದಲೇ ಖರೀದಿ ಮಾಡಬೇಕು ಹಾಗಿದ್ದಲ್ಲಿ ಮಾತ್ರ ಆಧುನಿಕ ಯುಗದಲ್ಲಿ ನೇಕಾರರು ಆರ್ಥಿಕವಾಗಿ ಸದೃಢರಾಗಲು ಸಾದ್ಯ ಎಂದು ಮನವಿ ಮಾಡಿದರು.

ಪವರ್ ಲೂಮ್ ಡೆವಲಪ್ ಮೆಂಟ್ ಕಾರ್ಪೊರೇಷನ್, ಹ್ಯಾಂಡೂ ಲೂಮ್ ಡೆವಲಪ್ ಮೆಂಟ್ ಕಾರ್ಪೊರೇಷನ್, ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಗಮಕ್ಕೆ ಮೂಲ ನೇಕಾರರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು. ನೇಕಾರ ಸಮ್ಮಾನ್ ಯೋಜನೆಯಿಂದ ಹೊರಗುಳಿದ ನೇಕಾರರ ಗಣತಿಯನ್ನು ಶೀಘ್ರವೇ ಪೂರ್ಣಗೊಳಿಸಿ ಅವರಿಗೆ ನೇಕಾರ ಸಮ್ಮಾನ್ ಯೋಜನೆ ತಲುಪುವಂತೆ ಆಗಬೇಕು. ಕೈಮಗ್ಗ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು. ನೇಕಾರರ ವಿದ್ಯುತ್ ಬಿಲ್ ಬಾಕಿಯನ್ನು ಸರ್ಕಾರವೇ ಭರಿಸಬೇಕು. ಸರ್ಕಾರ 10 ಹೆಚ್ಚಿಯವರೆಗೂ ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿದ್ದು, 10ರಿಂದ 20 ಹೆಚ್ ಪಿವರೆಗಿನ ವಿದ್ಯುತ್ ದರವನ್ನು 1.25 ರೂ.ವರೆಗೆ ನಿಗದಿಪಡಿಸಿ ಆದೇಶ ಹೊರಡಿಸಬೇಕು. ಅಲ್ಲದೇ ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ನೇಕಾರರಿಗೂ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಿವಕುಮಾರ್ ಪಿ.ಸುಂಕಾಪುರ, ಕೆ.ಎನ್. ವೆಂಕಟೇಶ್, ಸೋಮಶೇಖರ್ ಯಡಳ್ಳಿ, ಕರಿಬಸಪ್ಪ ಐರಣಿ, ಪರಶುರಾಮ ನಂದಿಗಾವಿ, ರಾಮಪ್ಪ, ಪರಶುರಾಮ, ಮಂಜುನಾಥ್, ರವೀಂದ್ರ, ಚಂದ್ರು, ತಿಪ್ಪೇಸ್ವಾಮಿ, ಪ್ರಮೋದ್, ವಿಠಲ ಇತರರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X