ದಾವಣಗೆರೆ | ಹುಬ್ಬಳ್ಳಿ ಕರ ಸೇವಕರ ಬಂಧನ; ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಕ್ರೋಶ

Date:

Advertisements

ಕರ ಸೇವಕರಿಗೆ ತೊಂದರೆ ಕೊಟ್ಟರೆ ಬಿಡೋ ಪ್ರಶ್ನೆ ಇಲ್ಲ. ನಾನೂ ಕೂಡ ಹೋರಾಟದಲ್ಲಿ ಭಾಗಿಯಾಗಿದ್ದೆ, ನನ್ನನ್ನು ಬಂಧಿಸಲಿ. ಬೇಕಂತಲೇ ಸುಮಾರು 35 ವರ್ಷಗಳ‌ ಕೇಸನ್ನು ಈಗ ಓಪನ್ ಮಾಡಿದ್ದಾರೆ. ನಮ್ಮ ಕರ ಸೇವಕರನ್ನು ಮುಟ್ಟಲಿ ನೋಡೋಣ ಎಂದು ಸರ್ಕಾರಕ್ಕೆ ಈಶ್ವರಪ್ಪ ಸವಾಲು ಹಾಕಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರದ ಭಸ್ಮ ಆಗುವ ತನಕ ಕರ ಸೇವಕರು ಬಿಡೋದಿಲ್ಲ. ಹುಬ್ಬಳ್ಳಿಯಲ್ಲಿ ಅದೊಂದೆ ಫೈಲ್ ಯಾಕೆ ಓಪನ್ ಮಾಡಿದ್ರು. ಇಡೀ ದೇಶ ದೀಪಾವಳಿ ಮಾಡುತ್ತಿದೆ. ರಾಮಭಕ್ತರನ್ನ ಈ ಸಂದರ್ಭದಲ್ಲಿ ಅರೆಸ್ಟ್ ಮಾಡಬೇಕಿತ್ತಾ” ಎಂದು ಪ್ರಶ್ನಿಸಿದರು.

ಕರಸೇವಕರಿಗೆ ತೊಂದರೆ ಮಾಡಿ ರಾಜಕಾರಣ ಮಾಡಬೇಡಿ. ಒಂದು ವೇಳೆ ತೊಂದರೆ ಕೊಟ್ಟರೆ ಕಾಂಗ್ರೆಸ್ ರಾಮ ಭಕ್ತರ ಸಿಟ್ಟಿಗೆ ಒಳಗಾಗಬೇಕು ಎಂದು ಈಶ್ಬರಪ್ಪ ಎಚ್ಚರಿಸಿದರು. ಅದೊಂದೆ ಫೈಲ್ ಯಾಕೆ ಓಪನ್ ಮಾಡಿದ್ರಿ, ಯಾರು ಯಾರು ಭಾಗೀಯಾಗಿದ್ರು ಎಲ್ಲರನ್ನೂ ಅರೆಸ್ಟ್ ಮಾಡಿ.

Advertisements

ನಮ್ಮನ್ನೇಲ್ಲ ಅರೆಸ್ಟ್ ಮಾಡಿ ನೋಡೋಣ, ಎಂದು ಸವಾಲ್ ಹಾಕಿದರು. ಸಿದ್ದರಾಮಯ್ಯ ಬೇಡ ಅಂದ್ರೂ ವಿವಾದ ಮೈ ಮೇಲೆ ಎಳೆದುಕೊಳ್ಳುತ್ತಾರೆ. ಕೋರ್ಟ್‌ನಲ್ಲಿ ಸಮವಸ್ತ್ರ ಹಾಕಿಕೊಂಡು ಹೋಗಬೇಕೆಂದು ಎಂದು ಆದೇಶ ಇತ್ತು. ಆದರೆ, ಇದ್ದಕ್ಕಿದ್ದಂತೆ ಹಿಜಾಬ್ ಓಪನ್ ಅಂದು ಸಿದ್ದರಾಮಯ್ಯ ಕೋಮು ಗಲಭೆ ಹಚ್ಚಿಸಿದ್ರು. ಅಭಿವೃದ್ದಿ ಮೇಲೆ ಚುನಾವಣೆಗೆ ಹೋಗೋಣ ಎಂದರೂ ಓಕೆ. ಹಿಂದುತ್ವದ ಮೇಲೆ ಚುನಾವಣೆ ಅಂದರೆ ಅದುಕ್ಕೂ ನಾವು ತಯಾರು. ಸುಮ್ಮನೆ ಇದ್ದ ಹುಬ್ಬಳಿಗೆ ಗಲಭೆ ಹಚ್ಚಿದ್ದೀರಿ ಎಂದು ಈಶ್ವರಪ್ಪ ಹರಿಹಾಯ್ದರು.‌

ಸಿದ್ದರಾಮಯ್ಯ ಅಯೋಧ್ಯೆಗೆ ಪೂಜೆ ಮಾಡಲ್ಲ ಅಂತಾರೆ. ಮುಲಾಯಂ ಸಿಂಗ್ ಒಂದು ಅಯೋಧ್ಯೆ ಗೆ ಒಂದು ಹಕ್ಕಿ ಹೋಗೋಕೆ ಬಿಡಲ್ಲ ಅಂದಿದ್ರು. ಆದರೆ ರಾಜೀವ ಗಾಂಧಿ, ನರಸಿಂಹರಾವ್ ಸಹಕಾರ ಕೊಟ್ಟಿದ್ದರು ಎಂದು ನೆನಪಿಸಿದರು.

ಹಿಂದುತ್ವ ಜೀವನದ ಪದ್ಧತಿ. ನನ್ನ ಪೂಜೆ ಪದ್ಧತಿಗೆ ಅಡ್ಡ ಬಂದರೆ ಬಿಡಲ್ಲ. ನಾವು ಪೂಜೆ ಮಾಡಿದರೆ ಇವರಿಗ್ಯಾಕೆ ಸಿಟ್ಟು, ಇವರೇನು ಬಾಬರ್ ವಂಶಸ್ಥರಾ ಎಂದು ವ್ಯಂಗವಾಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ರಾಜನಹಳ್ಳಿ ಶಿವಕುಮಾರ್, ಜಯಮ್ಮ ಸೇರಿದಂತೆ ಇತರರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X