ದಾವಣಗೆರೆ | ಅಕ್ರಮ ಒತ್ತುವರಿ ತೆರವಿಗೆ ಆಗ್ರಹ

Date:

Advertisements

ದಾವಣಗೆರೆ, ಹರಿಹರ ನಗರದಲ್ಲಿ ರಾಜಕಾಲುವೆಗಳನ್ನು ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಕೆಲವು ಬಡಾವಣೆಗಳಲ್ಲಿ ಸರ್ಕಾರಿ ಜಾಗ ಹಾಗೂ ಉದ್ಯಾನವನಗಳ ಜಾಗಗಳನ್ನು ಅತಿಕ್ರಮಣ ಮಾಡಿದ್ದಾರೆ. ಒತ್ತುವರಿಗಳ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಬೇಕು. ಒತ್ತುವರಿಗಳನ್ನು ತೆರವು ಮಾಡಬೇಕೆಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ದಾವಣಗೆರೆ ಜಿಲ್ಲಾಧಿಕಾರಿಗೆ ಸಂಘಟನೆಯ ಪದಾಧಿಕಾರಿಗಳು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಜಿ ಯಲ್ಲಪ್ಪ, “ರಾಜ್ಯ ಸರ್ಕಾರಕ್ಕೆ ಸೇರಿದ ಸಾವಿರಾರು ಕೋಟಿಗಳ ಆಸ್ತಿ ಪ್ರಭಾವಿಗಳ ಪಾಲಾಗಿದೆ. ನಗರ ವ್ಯಾಪ್ತಿಯಲ್ಲಿ ಹಲವರು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಆದರೂ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಖಂಡನೀಯ” ಎಂದು ಹೇಳಿದ್ದಾರೆ.

“ರಾಜಕಾಲುವೆಗಳಿಗೆ ಸೇರಿದ ಜಾಗವನ್ನು, ಕೆಲವು ಸಂಸ್ಥೆಗಳು ತಮ್ಮ ಖಾಸಗಿ ಆಸ್ತಿಯನ್ನಾಗಿ ಮಾಡಿಕೊಂಡಿವೆ. ಅಕ್ರಮವಾಗಿ ಕಟ್ಟಡಗಳನ್ನು ಕಟ್ಟಲಾಗಿದೆ. ಕೆಲವು ಅಧಿಕಾರಿಗಳು ಖಾಸಗಿ ಬಡಾವಣೆಗಳ ಮಾಲೀಕರ ಜೊತೆಗೆ ಶಾಮೀಲಾಗಿ ಬಡಾವಣೆಗಳಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟ ಜಾಗಗಳಿಗೆ ಆಕ್ರಮವಾಗಿ ಡೋರ್ ನಂಬ‌ರ್ ನೀಡಿರುವ ಪ್ರಕರಣಗಳಿವೆ” ಎಂದು ಹೇಳಿದ್ದಾರೆ.

Advertisements

“ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹೋಟೆಲ್‌ ಒಂದರ ಮಾಲೀಕರು ರಾಜಕಾಲುವೆ ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಿಸಿದ್ದು, ಸರ್ಕಾರಿ ಜಾಗವನ್ನು ತಮ್ಮ ಸಂತ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಇಂತಹ ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸರ್ಕಾರಿ ಜಾಗಗಳನ್ನು ವಶಕ್ಕೆ ಮರಳಿ ಪಡೆಯಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಕೆ.ಹೆಚ್ ಮಹೆಬೂಬ್, ದಯಾನಂದ, ಸಂತೋಷ್ ದೊಡ್ಡನಿ,ಸಿದ್ದೇಶ್‌. ಎಸ್, ಗದಿಗೆಪ್ಪ, ಅಮ್ಮದ್ ಅಲಿ,ಎಂ. ರವಿ, ಬಾಬುರಾವ್‌, ಜಿ.ರಮೇಶ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X