ದಾವಣಗೆರೆ | ಬಿಸಿಯೂಟ ತಯಾರಕರ ಕನಿಷ್ಟ ವೇತನ ಜಾರಿಗೆ ಒತ್ತಾಯ

Date:

Advertisements

ಮುಂಬರುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ನೀಡಲು ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಬಿಸಿಯೂಟ ತಯಾರಕ ಸಂಘಟನೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನೆಡೆಯಲಿರುವ ಪ್ರತಿಭಟನೆ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಂಸದೆ ಪ್ರಿಯಾಂಕ ಗಾಂಧಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಬಿಸಿಯೂಟ ತಯಾರಕರಿಗೆ ಆರನೇ ಗ್ಯಾರಂಟಿಯಾಗಿ 6000 ವೇತನ ಕೊಡುವುದಾಗಿ ಭರವಸೆ ನೀಡಿದ್ದರು. ಈವರೆಗೆ ಅದನ್ನು ಈಡೇರಿಸಿಲ್ಲ. ಸರ್ಕಾರವು ಬಜೆಟ್‌ನಲ್ಲಿ ವೇತನ ಹೆಚ್ಚಳ ಮಾಡಬೇಕು.‌ ಅಧಿಕಾರಿಗಳ ನಿರ್ಲಕ್ಷತೆಯಿಂದ ಬಿಸಿ ಊಟ ತಯಾರಕರು ಸಮಯಕ್ಕೆ ಸರಿಯಾಗಿ ವೇತನ ಪಾವತಿ ಇಲ್ಲದೆ, ವರ್ಷಕ್ಕೆ ಎರಡು ಮೂರು ಬಾರಿ ವೇತನ ಪಡೆಯುವಂತಾಗಿದೆ. ಈ ಹಿನ್ನಲೆ ಎಐಟಿಯುಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ದಾವಣಗೆರೆ ಜಿಲ್ಲಾ ಸಮಿತಿ, ತಮಗೆ 6ನೇ ಗ್ಯಾರಂಟಿಯಾಗಿ ಘೋಷಣೆ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಫೆ. 3ರಿಂದ ಫ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಧರಣಿ ಮಾಡುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಫೈನಾನ್ಸ್‌ ಕಂಪನಿ ಕಿರುಕುಳ: ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಮೃತದೇಹ ನದಿಯಲ್ಲಿ ಪತ್ತೆ

Advertisements

ಈ ವೇಳೆ ಎಐಟಿಯುಸಿ ಸಂಯೋಜಿತ ಬಿಸಿಯೂಟ ತಯಾರಕರ ಸಂಘಟನೆಯ ಮುಖಂಡ ಚಂದ್ರು ಆವರಗೆರೆ, ಜಿಲ್ಲಾ ಉಪಾಧ್ಯಕ್ಷೆ ಸರೋಜಾ, ಹರಿಹರ ತಾಲೂಕು ಸಂಘಟನೆಯ ಮುಖಂಡರುಗಳಾದ ನಾಗವೇಣಿ, ಶೃತಿ, ವಿಶಾಲಮ್ಮ, ಗೌರಮ್ಮ, ಮಂಗಳ, ಮಂಜುಳಾ, ಸುಧಾ ಸೇರಿದಂತೆ ಇತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X