ದಾವಣಗೆರೆ | ಜಗಳೂರು ತಾಲೂಕನ್ನು ಬರ ಪ್ರದೇಶಗಳ ಪಟ್ಟಿಗೆ ಸೇರಿಸಲು ಒತ್ತಾಯ: ಶಾಸಕ ದೇವೇಂದ್ರಪ್ಪ

Date:

ಮಳೆ ಕೊರೆತೆಯಿಂದ ಅನ್ನದಾತ ತತ್ತರಿಸಿದ್ದಾರೆ. ಜಗಳೂರು ತಾಲೂಕಿನಲ್ಲಿ 90% ಬೆಳೆ ಹಾನಿಯಾಗಿದೆ. ಬರ ಸಮೀಕ್ಷೆ ನೆಡೆಸಿ ತಾಲೂಕನ್ನು ಶಾಶ್ವತ ಬರ ಪೀಡಿತವೆಂದು ಘೋಷಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜನ್ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಮನವಿ ಮಾಡುತ್ತೇವೆ ಎಂದು ಶಾಸಕ ಬಿ ದೇವೇಂದ್ರಪ್ಪ ಭರವಸೆ ನೀಡಿದ್ದಾರೆ.

- Advertisement -

ಜಗಳೂರು ತಾಲೂಕಿನ ಗೊಲ್ಲರಟ್ಟಿ, ಭರಮಸಮುದ್ರ, ಮುನ್ನೂರು, ಬಿಳಿಚೋಡು, ಸೊಕ್ಕೆ ಸೇರಿದಂತೆ ಹಳ್ಳಿಗಳಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಸಮೀಕ್ಷೆ ನಡೆಸಿ, ಅವರು ಮಾತನಾಡಿದರು. “ಜಗಳೂರು ತಾಲೂಕಿನಲ್ಲಿ 51% ಪ್ರದೇಶದಲ್ಲಿ ಮೆಕ್ಕೆಜೋಳ, ಶೇಂಗಾ, ರಾಗಿ, ಸೂರ್ಯಕಾಂತಿ, ತೊಗರಿ ಹೀಗೆ ವಿವಿಧ ರೀತಿಯಾಗಿ ಬಿತ್ತನೆ ಮಾಡಲಾಗಿದೆ. ಅಲ್ಲದೆ, ಆಗಸ್ಟ್‌ ಅಂತ್ಯಕ್ಕೆ 57 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ, 15 ಮಿ.ಮೀ. ಮಳೆಯಾಗಿ 70% ಮಳೆ ಕೊರತೆಯಿಂದ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ, ಬೆಳೆಗಳ ವಿವಿಧ ಬೆಳೆಗಳು ಸಂಪೂರ್ಣ ಒಣಗಿವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ನಮ್ಮ ರೈತರು ಹಾಕಿದ್ದ ಬಂಡವಾಳವೂ ಮರಳಿ ಬಾರರೆ, ಸಾಲವನ್ನು ಹೊತ್ತಿಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಮಳೆ ಇಲ್ಲದೆ ಆಕಾಶದತ್ತ ಮುಗಿಲು ನೋಡಿ ರೈತರು ವಿಚಲಿತರಾಗಿದ್ದಾರೆ. ಕೃಷಿ ತೋಟಗಾರಿಕೆ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಇಲ್ಲಿನ ನೈಜ್ಯ ಪರಿಸ್ಥಿತಿಯನ್ನು ಮೇಲಾಧಿಕಾರಿಗಳಿಗೆ ಮನವರಿಕೆ ಮಾಡಿಬೇಕು. ತೀವ್ರ ಬರ ಪ್ರವೇಶವೆಂದು ಘೊಷಿಸಲು ಕ್ರಮ ಕೈಳ್ಳುವಂತೆ ಸಚಿವರ ಗಮನಕ್ಕೆ ತರಲಾಗುವುದು” ಎಂದರು.

ಸಮೀಕ್ಷೆ ಕಾರ್ಯದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಿಥುನ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ತೋಟದಯ್ಯ. ಆರ್.ಐ ಧನಂಜಯ್,ಕೀರ್ತಿ, ಕೃಷಿ ಇಲಾಖೆ ಎ.ಡಿ.ಎ ಜೀವಿತಾ, ಪ್ರಸನ್ನ ಕುಮಾರ್‌, ವೆಂಕಟೇಶ್ ನಾಯ್ಕ
ಶಾಸಕರ ಆಪ್ತ ಸಹಾಯಕರಾದ ಶಿವಕುಮಾರ್, ಪಲ್ಲಾಗಟ್ಟಿ ಶೇಖರಪ್ಪ, ಮುಖಂಡರಾದ ಅನುಪ್ ರೆಡ್ಡಿ, ಜಗಳೂರು ಗೊಲ್ಲರಟ್ಟಿ ರಮೇಶ್,ಪ್ರಕಾಶ್ ರೆಡ್ಡಿ,ಹರೀಶ್ ಸೇರಿದಂತೆ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...