ದಾವಣಗೆರೆ | ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಜಿಲ್ಲಾ ಸಮ್ಮೇಳನ

Date:

Advertisements

ಅಂಗನವಾಡಿ ಕಾರ್ಯರ್ತೆಯರ ಮತ್ತು ಸಹಾಯಕಿಯರ ಜಿಲ್ಲಾ ಸಮ್ಮೇಳನವು ಆಗಸ್ಟ್‌ 26ರಂದು ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ನಡೆಯಲಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷೆ ಎಂ.ಬಿ ಶಾರದಮ್ಮ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಸಮ್ಮೇಳನದ ಉದ್ಘಾಟನೆಯನ್ನು ಹೊಸತು ಪತ್ರಿಕೆ ಸಂಪಾದಕ ಡಾ.ಸಿದ್ದನಗೌಡ ಪಾಟೀಲ್ ನೆರವೇರಿಸಲಿದ್ದಾರೆ” ಎಂದರು.

“ಸಮ್ಮೇಳನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರ ಸಮಸ್ಯೆಗಳ ಮತ್ತು ದೊರೆಯಬೇಕಾದ ಸೌಲಭ್ಯಗಳ ಕುರಿತು ಚರ್ಚೆಗಳು ನಡೆಯಲಿವೆ. ಸಮಸ್ಯೆಗಳನ್ನು ಮತ್ತು ನಿವಾರಿಸಲು ಮತ್ತು ಸೌಲಭ್ಯ ದೊರಕಿಸಲು ಸರ್ಕಾರ ಮತ್ತು ಅಧಿಕಾರಿ ವರ್ಗದ ಗಮನ ಸೆಳೆಯಲು ಸಮ್ಮೇಳನ ಆಯೋಜಿಸಲಾಗಿದೆ” ಎಂದು ಹೇಳಿದರು.

Advertisements

“ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಬಸವಂತಪ್ಪ ಫೆಡರೇಷನ್ ರಾಜ್ಯಾಧ್ಯಕ್ಷ ಅಮ್ರದ್, ರಾಜ್ಯ ಪ್ರಧಾನ ಕಾರ್ಯದರ್ಶಿಎಂ. ಜಯ್ಯಮ್ಮ, ರಾಜ್ಯ ಉಪಾಧ್ಯಕ್ಷ ಹೊನ್ನಪ್ಪ ಮರಿಯಮ್ಮನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ವಾಸಂತಿ ಉಪ್ಪಾರ್, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಎಂ.ಎಸ್‌. ಅಭಿಕುಮಾರ್, ಅವರಗೆರೆ ರುದ್ರಮುನಿ, ಆನಂದರಾಜ್‌,ಆವರಗೆರೆ ಚಂದ್ರು, ರಾಘವೇಂದ್ರ ನಾಯರಿ, ಹೆಚ್, ಜಿ. ಉಮೇಶ್, ಆವರಗೆರೆ ವಾಸು, ಮಹ್ಮದ್ ಬಾಷಾ, ಎಸ್.ಎಸ್. ಮಲ್ಲಮ್ಮ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಆವರಗೆರೆ ವಾಸು, ಮಲ್ಲಮ್ಮ ವಿಶಾಲಾಕ್ಷಮ್ಮ ಮೃತ್ಯುಂಜಯ ಗೀತಾ ಕೆ ಸಿ, ನಿರ್ಮಲ ಸರ್ವಮ್ಮ ರೇಣುಕಾ ಮತ್ತು ಪದಾಧಿಕಾರಿಗಳು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X