ದಾವಣಗೆರೆ | ಜಿ.ಬಿ ವಿನಯ್ ಕುಮಾರ್‌ಗೆ ಟಿಕೆಟ್‌ ನೀಡುವಂತೆ ಬೆಂಬಲಿಗರ ಒತ್ತಾಯ

Date:

Advertisements

ದಾವಣಗೆರೆ ಜಿಲ್ಲೆಯಲ್ಲಿ ಸಕ್ರಿಯವಾಗಿ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿರುವ ಕಾಂಗ್ರೆಸ್ ಮುಖಂಡ ಜಿ.ಬಿ ವಿನಯ್ ಕುಮಾರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿಮಾನಿಗಳ ಬಳಗದ ರಘುದೊಡ್ಮನಿ, “ಜಿಲ್ಲೆಯ ಹಿಂದುಳಿದ ವರ್ಗದವರ ಶೋಷಿತರ ದೀನದಲಿತರು ಹಾಗೂ ಅಲ್ಪಸಂಖ್ಯಾತರು ಸಾಕಷ್ಟು ಬಾರಿ ಶಾಮನೂರು ಕುಟುಂಬಕ್ಕೆ ಪ್ರತೀ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ಕೊಟ್ಟಿದ್ದಕ್ಕೆ ಅವರು ಗೆದ್ದು ಮತದಾರರ ಹಾಗೂ ಜಿಲ್ಲೆಯ ಸಾಕಷ್ಟು ಸೇವೆಯನ್ನು ಮಾಡಿದ್ದಾರೆ” ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಶಾಮನೂರು ರವರ ಕೊಡುಗೆ ಅಪಾರ. ಆದರೆ, ನಾವು ಮತದಾರರು ಈ ಲೋಕಸಭಾ ಚುನಾವಣೆಯಲ್ಲಿ ಒಬ್ಬ ಹಿಂದುಳಿದ ವರ್ಗದ ವಿದ್ಯಾವಂತ, ಸರಳ ಜೀವಿ, ಯುವಕರ ಕಣ್ಮಣಿ, ಹಳ್ಳಿ ಹುಡುಗ ಜಿ.ಬಿ. ವಿನಯ್ ಕುಮಾರ್ ರವರನ್ನು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನಾಗಿಸಿ ಇವರನ್ನು ಜಯಶೀಲರನ್ನಾಗಿಸಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ದೇಶಸೇವೆ ಮಾಡುವ ಅವಕಾಶ ಕೊಡಲು ಬಯಸುತ್ತೇವೆ ಎಂದರು.

Advertisements

ಈ ಬಾರಿ ನಮ್ಮ ಜಿಲ್ಲೆಗೆ ಜಾತಿಮತ ಬೇಧವಿಲ್ಲದೆ ಸರಳ ಸಜ್ಜನಿಕೆಯ ಜಿ.ಬಿ. ವಿನಯ್ ಕುಮಾರ್‌ರವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿಸಿ ಸಾಮಾಜಿಕ ನ್ಯಾಯ ಮಾಡುತ್ತದೆಂದು ನಂಬಿದ್ದೇವೆ ಎಂದರು.

ಪ್ರತಿಯೊಬ್ಬರು ಅವಶ್ಯವಿರುವ ಶಿಕ್ಷಣಕ್ಕೆ ಮೊದಲ ಆದ್ಯತೆ, ಕ್ಷೇತ್ರದ ಅಭಿವೃದ್ಧಿಯ ಕನಸು, ಹಿಂದುಳಿದ ಶೋಷಿತರ ದೀನದಲಿತರ ಅಲ್ಪಸಂಖ್ಯಾತರ ಅಭಿವೃದ್ಧಿಯಿಂದಲೇ ದೇಶಾಭಿವೃದ್ಧಿ, ಹಳ್ಳಿಯ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿಯ ಸಾರುವ ಈ ಹೊಸಮುಖ ನಮ್ಮ ಅಭ್ಯರ್ಥಿಯಾಗಬೇಕು ಎಂಬುದು ಮತದಾರರ ಮನದಾಳದ ಮಾತು ಎಂದರು.

ದಾವಣಗೆರೆ ಜಿಲ್ಲೆಗೆ ಕುಟುಂಬದ ರಾಜಕಾರಣ ಹೋಗಲಾಡಿಸಲು ಇದೇ ಸೂಕ್ತ ಸುಸಮಯ, ಒಂದುವೇಳೆ ಜಿ.ಬಿ. ವಿನಯ್ ಕುಮಾರ್‌ರವರನ್ನು ಕಡೆಗಣಿಸಿ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದರೆ ಜಿಲ್ಲೆಯಲ್ಲಿ ಆಸಮಧಾನ ಉಂಟಾಗಿ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದರು. ಎಐಸಿಸಿ ವೀಕ್ಷಕರ ಪ್ಯಾನಲ್ ನಲ್ಲಿ ಕೊನೆಯ ಹಂತದವರೆಗೂ ವಿನಯ್ ಕುಮಾರ್ ಅವರ ಹೆಸರೇ ಮುಂಚೂಣಿಯಲ್ಲಿತ್ತು. ಆದರೆ, ಹಣ ಹಾಗೂ ಒಳರಾಜಕಾರಣ ಕೆಲಸ ಮಾಡಿದೆ ಎಂದರು.

ಕಾಂಗ್ರೆಸ್ ಟಿಕೆಟ್ ಸಿಗದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಅಭಿಮಾನಿ ಬಳಗದವರು ಒತ್ತಾಯಿಸಿದ್ದೇವೆ. ಸಮೀಕ್ಷೆಗಳ ಆಧಾರದ ಮೇಲೆ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದಾಗಿ ಹೇಳಿದ ಮುಖಂಡರು ತಮ್ಮ ನಿಲುವು ಬದಲಾಯಿಸಿರುವುದು ಸರಿಯಲ್ಲ. ಜನರಭಾವನೆಗಳಿಗೆ ಜನಾಭಿಪ್ರಾಯದಂತೆ ಗೆಲ್ಲುವ ವ್ಯಕ್ತಿಗೆ ಅನ್ಯಾಯ ಮಾಡಬಾರದು.ನಾಳೆ ವಿನಯ್ ಕುಮಾರ್‌ ದಾವಣಗೆರೆಗೆ ಆಗಮಿಸುತ್ತಿದ್ದು ನಂತರ ಸಭೆ ನಡೆಸಿ ತಮ್ಮ ತೀರ್ಮಾನ ಹೇಳಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕಾಂಗ್ರೆಸ್ ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ಒಂದಾಗಿದೆ. ವಿನಯ್ ಕುಮಾರ್ ಅವರಿಗೆ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಗೆಲುವು ಕಳೆದುಕೊಳ್ಳಬೇಕಾಗುತ್ತದೆ. ಅಹಿಂದ ಯುವಕನಿಗೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದಂತಾಗುತ್ತದೆ.  ಅಲ್ಲದೇ ವಿದ್ಯಾವಂತ ಸಮುದಾಯ ಕಡೆಗಣಿಸಿದ ಕಳಂಕ ಕಾಂಗ್ರೆಸ್ ಗೆ ತಟ್ಟುತ್ತದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಡೆದಂತೆ ದಾವಣಗೆರೆಯಲ್ಲಿಯೂ ಸ್ವಾಭಿಮಾನದ ಪ್ರತಿಷ್ಠೆಯ ಕಣವಾಗಲಿದೆ. ನಮ್ಮ ಹೋರಾಟ ವ್ಯಕ್ತಿ ಅಥವಾ ಕುಟುಂಬದ ವಿರುದ್ಧ ಅಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಉಮೇಶ್ ಕೆ.ಸಂತೆಬೆನ್ನೂರು, ಮಹಮ್ಮದ್ ಅಲ್ತಾಫ್ ಹುಸೇನ್, ಬಸವನಗೌಡ, ಹೇಮಂತ್ ಕುಮಾರ್ ದಳವಾಯಿ, ಇರ್ಫಾನ್, ಶಿವಕುಮಾರ್, ವಿಜಯಕುಮಾರ್, ನಾಗರಾಜ್, ಪರಶುರಾಮ್ ಸೇರಿದಂತೆ ಅನೇಕರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X