ದಾವಣಗೆರೆ | ಜಿಲ್ಲಾ ಬಿಜೆಪಿ ಘಟಕದಲ್ಲಿ ಗುಂಪುಗಾರಿಕೆ, ಕಾರ್ಯಕರ್ತರ ಸರಣಿ ಸಭೆ

Date:

Advertisements

ದಾವಣಗೆರೆಯ ಬಿಜೆಪಿ ಘಟಕದಲ್ಲಿ ಇತ್ತೀಚಿನ ಕೆಲ ದಿನಗಳಿಂದ ನಡೆಯುತ್ತಿರುವ ಗುಂಪುಗಾರಿಕೆ ಹಾಗೂ ಕೆಲ ಮುಖಂಡರ ವರ್ತನೆಗೆ ದಾವಣಗೆರೆ ಜಿಲ್ಲೆಯ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರು ಸರಣಿ ಸಭೆ ನಡೆಸಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ಇದ್ದಾಗಲೇ ಕೆಲವರು ಹುಟ್ಟು ಹಾಕುತ್ತಿರುವ ಗೊಂದಲ, ಗದ್ದಲಗಳ ಬಗ್ಗೆ ಬಹುತೇಕ ಎಲ್ಲರಿಂದಲೂ ತೀವ್ರ ಅಸಮಾಧಾನ ವ್ಯಕ್ತವಾಯಿತಲ್ಲದೇ, ನಿಮ್ಮ ಇಂತಹ ಕೆಲಸ ಸಾವಿರಾರು ಕಾರ್ಯಕರ್ತರ ಕೆಂಗಣ್ಣಿಗೂ ಗುರಿಯಾಗಿದೆ ಎಂಬ ಎಚ್ಚರಿಕೆ ನೀಡಲಾಯಿತು ಎಂದು ಗೊತ್ತಾಗಿದೆ. ಸಭೆಯಲ್ಲಿ ಮಾತನಾಡಿದ ಬಹುತೇಕ ಮುಖಂಡರು, ಮಹಿಳಾ ಮುಖಂಡರು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಜಿ.ಮಲ್ಲಿಕಾರ್ಜುನಪ್ಪನವರು ಸ್ಪರ್ಧಿಸಿದಾಗಿನಿಂದ ತೀರಾ ಈಚಿನವರೆಗೂ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಇದೇ ಜಿಲ್ಲೆಯವರಾಗಿದ್ದರು.

ಆದರೆ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾಂಗ್ರೆಸ್ಸಿನ ನಾಯಕರು, ಸಿಎಂ, ಡಿಸಿಎಂ, ಕೆಲ ಸಚಿವರು, ವಿಶೇಷವಾಗಿ ದಾವಣಗೆರೆ ಕಾಂಗ್ರೆಸ್ಸಿನ ನಾಯಕರ ಭೇಟಿ ಮಾಡಿ ಬಂದ ನಂತರವಂತೂ ಕಾಂಗ್ರೆಸ್ಸಿನವರ ಮಾತುಗಳು ರೇಣುಕಾಚಾರ್ಯ ಮತ್ತಿತರರ ಬಾಯಿಂದ ಬರುತ್ತಿವೆ. ಇದೆಲ್ಲದರ ಹಿಂದೆ ಯಾವ ಕಾಣದೆ ಕೈಗಳಿವೆ ಎಂಬ ನಮ್ಮ ಪ್ರಶ್ನೆಗೆ ಮುಖಂಡರೆನಿಸಿಕೊಂಡವರು ಉತ್ತರ ಕೊಡಲಿ ಎಂಬ ಒತ್ತಾಯ ಕೇಳಿ ಬಂದಿದೆ.

Advertisements

ವಿಧಾನಸಭೆ ಚುನಾವಣೆಗಳ ವೇಳೆ ಟಿಕೆಟ್ ವಿಚಾರಕ್ಕಾಗಲೀ, ಹಣದ ವಿಚಾರವೇ ಆಗಿರಲಿ ಎಲ್ಲದಲ್ಲೂ ಸಿದ್ದೇಶಪ್ಪ ಬೇಕು. ಈಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿನವರೇ ಬೆಚ್ಚಿ ಬೀಳುವಂತೆ ಬಿಜೆಪಿಯಲ್ಲಿರುವ ಕೆಲವರು ಕಾಂಗ್ರೆಸ್ಸಿನವರ ಮಾತುಗಳನ್ನಾಡುತ್ತಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಸತತವಾಗಿ 4 ಚುನಾವಣೆಗಳಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಬಿಜೆಪಿಗೆ ಭದ್ರ ನೆಲೆ ಮಾಡಿಕೊಟ್ಟವರು ಸಿದ್ದೇಶ್ವರ. ಒಟ್ಟು 6 ಸಲ ಬಿಜೆಪಿ ಗೆದ್ದಿದ್ದರೆ ಸಿದ್ದೇಶ್ವರರ ಕೊಡುಗೆ ಇದೆಯೆಂಬುದನ್ನು ಈಗ ವಿರೋಧಿಸುತ್ತಿರುವವರು ಅರ್ಥ ಮಾಡಿಕೊಳ್ಳಬೇಕು. ಇದ್ದಕ್ಕಿದ್ದಂತೆ ಇಂತಹವರಿಗೆ ಸಿದ್ದೇಶಪ್ಪ ಬೇರೆ ಜಿಲ್ಲೆಯವರಾದರೆ ಎಂದು ಅವರು ಪ್ರಶ್ನಿಸಿದರೆನ್ನಲಾಗಿದೆ.

ಸಭೆಯಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ ಗೌಡ, ಉತ್ತರ ಅಧ್ಯಕ್ಷ  ಬೇತೂರು ಸಂಗನಗೌಡ, ಬಿಜೆಪಿ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ, ಮುಖಂಡರಾದ ಬಿ.ಎಸ್.ಜಗದೀಶ, ಟಿ.ಶ್ರೀನಿವಾಸ ದಾಸಕರಿಯಪ್ಪ, ಮಂಜಾನಾಯ್ಕ, ದೂಡಾ ಮಾಜಿ ಅಧ್ಯಕರಾದ ಯಶವಂತರಾವ್ ಜಾಧವ್, ಎ.ವೈ.ಪ್ರಕಾಶ, ದೇವರಮನಿ ಶಿವಕುಮಾರ, ರಾಜನಹಳ್ಳಿ ಶಿವಕುಮಾರ, ಕೊಂಡಜ್ಜಿ ಜಯಪ್ರಕಾಶ, ವಕೀಲ ರಾಘವೇಂದ್ರ ಮೊಹರೆ.

ಮಾಜಿ ಮೇಯರ್ ಗಳಾದ ಡಿ.ಎಸ್.ಉಮಾ ಪ್ರಕಾಶ, ಎಸ್.ಟಿ.ವೀರೇಶ, ಪಾಲಿಕೆ ಉಪ ಮೇಯರ್ ಯಶೋಧ ಯೋಗೇಶ, ವಿಪಕ್ಷ ನಾಯಕ ಕೆ.ಎಸ್.ಪ್ರಸನ್ನಕುಮಾರ, ಆ‌ರ್.ಎಲ್.ಶಿವಪ್ರಕಾಶ, ಆರ್.ಶಿವಾನಂದ, ಮಾಜಿ ಉಪ ಮೇಯರ್ ಪಿ.ಎಸ್. ಜಯಣ್ಣ, ಆನಂದರಾವ್ ಸಿಂಧೆ, ರಾಜು ನೀಲಗುಂದ, ಶಿವನಗೌಡ ಪಾಟೀಲ್‌, ಟಿಂಕರ್ ಮಂಜಣ್ಣ, ಪಿ.ಎಸ್.ಬಸವರಾಜ, ಕೆ.ಹೇಮಂತಕುಮಾರ, ಮುಕುಂದ, ಶಿವಾಜಿ ರಾವ್, ಸುರೇಶ  ಗಂಡಗಾಳೆ ಹಾಗೂ ಕಾರ್ಯಕರ್ತರು ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X