ದಾವಣಗೆರೆ | ಕೆಪಿಎಸ್‌ಸಿ ಮರುಪರೀಕ್ಷೆಯಲ್ಲೂ ಭಾಷಾಲೋಪ; ಮುಖ್ಯ ಪರೀಕ್ಷೆ ಅವಕಾಶಕ್ಕೆ ವಿಕರವೇ ಆಗ್ರಹ

Date:

Advertisements

ಕೆಪಿಎಸ್‌ಸಿ ಮರುಪರೀಕ್ಷೆಯಲ್ಲೂ ಸಹ ಸಾಕಷ್ಟು ಭಾಷಾಂತರ ಲೋಪಗಳು ಕಂಡುಬಂದಿದ್ದು, ಇದರಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ತೊಂದರೆ ಉಂಟಾಗಿದೆ. ಹಾಗಾಗಿ ಪರೀಕ್ಷೆ ಬರೆದಿರುವ ಎಲ್ಲಾ ಅಭ್ಯರ್ಥಿಗಳಿಗೂ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ದಾವಣಗೆರೆಯ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಕಳೆದ ವರ್ಷ ಆಗಸ್ಟ್ 27ರಂದು ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯಲ್ಲಿ ಸಾಕಷ್ಟು ಭಾಷಾಂತರ ತಪ್ಪುಗಳು ಕಂಡುಬಂದ ಹಿನ್ನೆಲೆ ಡಿಸೆಂಬರ್ 29ಕ್ಕೆ ಮರು ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಕೂಡ ಸಾಕಷ್ಟು ಭಾಷಾಂತರ ತಪ್ಪುಗಳು ಕಂಡುಬಂದಿದ್ದು, ಇದರಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳು ಅವಕಾಶ ವಂಚಿತರಾಗಿದ್ದಾರೆ.‌ ಈ ಕೂಡಲೇ ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳಿಗೂ ಮುಖ್ಯ ಪರೀಕ್ಷೆಗೆ ಅವಕಾಶ ನೀಡಬೇಕೆಂದು ವೇದಿಕೆ ಆಗ್ರಹಿಸಿತು.

ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಕೆ ಜಿ ಯಲ್ಲಪ್ಪ, “ಕಳೆದ ಬಾರಿ ಇದೇ ರೀತಿ ಭಾಷಾಂತರದ ಲೋಪ ದೋಷಗಳಿಂದ ಮರು ಪರೀಕ್ಷೆಗೆ ಅವಕಾಶ ನೀಡಲಾಗಿತ್ತು. ಈ ಬಾರಿ ಕೂಡ ಸರಿಯಾದ ಭಾಷಾ ತಜ್ಞರಿಂದ ಭಾಷಾಂತರ ಮಾಡಿಸದೇ ಮತ್ತೆ ತಪ್ಪುಗಳು ಕಂಡುಬಂದಿವೆ. ಇದರಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅಂಕಗಳು ಕಡಿಮೆಯಾಗಿ ಅವಕಾಶ ವಂಚಿತರಾಗುತ್ತಿದ್ದಾರೆ. ಇಂಗ್ಲಿಷ್‌ನಲ್ಲಿ ಉತ್ತರ ಬರೆದ ಅಭ್ಯರ್ಥಿಗಳಿಗೆ ಹೆಚ್ಚಿನ ಅಂಕ ದೊರೆತು ಹೆಚ್ಚಿನ ಅವಕಾಶಗಳು ಸಿಗುತ್ತದೆ. ಇದೇ ರೀತಿ 2010, 2014, 2015 ಮತ್ತು 2017ನೇ ಸಾಲಿನಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳಲ್ಲಿ ಇಂಗ್ಲಿಷ್ ನಲ್ಲಿ ಉತ್ತರಿಸಿದ ಅಭ್ಯರ್ಥಿಗಳೇ ಹೆಚ್ಚು ಆಯ್ಕೆ ಆಗಿರುವುದು ಕನ್ನಡಿಗರಿಗಾದ ಅನ್ಯಾಯ. ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳಿಗೂ ಮುಖ್ಯ ಪರೀಕ್ಷೆಗೆ ಅವಕಾಶ ನೀಡಬೇಕು” ಎಂದು ಒತ್ತಾಯಿಸಿದರು.

Advertisements

‌‌”ಬೆಂಗಳೂರು ವಿ ವಿ ಕನ್ನಡ ಅಧ್ಯಯನ ಕೇಂದ್ರ ಡಿ. 29ರಂದು ನಡೆದಿರುವ ಪರೀಕ್ಷೆಯಲ್ಲಿ ಶೇ.45 ರಿಂದ 50ರಷ್ಟು ಲೋಪ ದೋಷಗಳನ್ನು ಗುರುತಿಸಿದೆ. ಅದರಲ್ಲಿ 29 ಗಂಭೀರವಾದ ದೋಷಗಳಿವೆ ಎಂದು ಪರಿಗಣಿಸಿದೆ. ಇಂಗ್ಲಿಷ್‌ ಪ್ರಶ್ನೆ ಮತ್ತು ಕನ್ನಡ ಪ್ರಶ್ನೆಯಲ್ಲಿ ಅರ್ಥದ ವ್ಯತ್ಯಾಸವಿದೆ.‌ ಭಾಷಾಂತರವನ್ನು ಕನ್ನಡದ ವಿಷಯ ತಜ್ಞರಿಂದ ಮಾಡಿಸಿದರೆ ಇಷ್ಟೊಂದು ತಪ್ಪು ಆಗುತ್ತಿರಲಿಲ್ಲ. ಬದಲಾಗಿ ಸೀಮಿತ ಭಾಷೆಯ ಜ್ಞಾನ ಇರುವವರು ಅನುವಾದಿಸಿದಂತಿದೆ. ವಾಕ್ಯ ರಚನೆಯಲ್ಲಿ ತಪ್ಪುಗಳಿವೆ. ಕೆಲವು ವಾಕ್ಯಗಳ ರಚನೆಯೇ ಸರಿಯಾಗಿಲ್ಲ. ಈ ರೀತಿ ಆದರೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಭವಿಷ್ಯದ ಗತಿಯೇನು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕನ್ನಡ ನಾಡಿನಲ್ಲಿ ಕನ್ನಡಿಗರ ಸೇವೆ ಮಾಡುವ ಅಧಿಕಾರಿಗಳನ್ನು ಆಯ್ಕೆ ಮಾಡುವ ಪರೀಕ್ಷೆಯಲ್ಲಿ ಇಂಗ್ಲಿಷ್‌ನಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಕನ್ನಡಕ್ಕೆ ಭಾಷಾಂತರ ಮಾಡುವ ಬದಲು ಕನ್ನಡದಲ್ಲಿ ಪ್ರಶ್ನೆ ಪತ್ರಿಕೆ ರಚಿಸಿ ಇಂಗ್ಲಿಷ್‌ಗೆ ಭಾಷಾಂತರ ಮಾಡಬೇಕು. ಕನ್ನಡಿಗರು ಅವಕಾಶ ವಂಚಿತರಾಗುವುದನ್ನು ತಡೆಯಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಕಿರುಕುಳ ಶಂಕೆ

ಈ ಸಂದರ್ಭದಲ್ಲಿ ಮುಖಂಡರಾದ ಬಾಬುರಾವ್, ಮಂಜುನಾಥ ಶೆಟ್ಟಿ, ಅನಿಲ್, ಅಲೋಕ್ ಕೆವೈ, ಎಂ ರವಿ, ಸೈಯದ್ ಶಾಬಾಜ್, ದಯಾನಂದ್ ಎಂ, ಮಂಜುನಾಥ್, ಬಿವಿ ಗಿರೀಶ್, ಖಲಂದರ್, ಸಂತೋಷ್ ದೊಡ್ಮನಿ ಗದಿಗೆಪ್ಪ ಎಂ, ಅಶೋಕ, ರಂಗನಾಥ್ ಕೆಪಿ, ನವೀನ್ ಹಾಗೂ ಇತರರು ಹಾಜರಿದ್ದರು.‌

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X