ದಾವಣಗೆರೆ | ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ನಿಷ್ಠಾವಂತ ಕಾರ್ಯಕರ್ತರು ಕಣ್ಮರೆ: ಕೆಪಿಸಿಸಿ ಎಚ್ ದುಗ್ಗಪ್ಪ

Date:

Advertisements

ರಾಜ್ಯ ಕಾಂಗ್ರೆಸ್ ಸರ್ಕಾರವು ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಹಾಗೂ ಹಾಲಿ ಶಾಸಕರು, ಒಮ್ಮೆ ಅಧಿಕಾರ ಪಡೆದವರು, ಅಧಿಕಾರದಲ್ಲಿರುವವರ ಹೆಸರುಗಳೇ ಹೆಚ್ಚಾಗಿದೆ. ಪಕ್ಷಕ್ಕಾಗಿ ಸುಮಾರು 50 ವರ್ಷಗಳಿಂದ ಸೇವೆ ಸಲ್ಲಿಸಿರುವ ನಿಷ್ಠಾವಂತ ಕಾರ್ಯಕರ್ತರ ಹೆಸರುಗಳು ಕಣ್ಮರೆಯಾಗಿವೆ ಎಂದು ಕೆಪಿಸಿಸಿ ಸದಸ್ಯ ಎಚ್. ದುಗ್ಗಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, “ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು. ಈ ಹಿಂದೆಲ್ಲಾ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿಗೆ ಕಾರ್ಯಕರ್ತರನ್ನು ಕಡೆ ಗಣಿಸಿದ್ದೇ ಕಾರಣವಾಗಿದೆ. ಈಗಲೂ ಕಾರ್ಯಕರ್ತರನ್ನು ಕಡೆಗಣಿಸಿದರೆ ಮುಂಬರುವ ಚುನಾವಣೆಯನ್ನು ಎದುರಿಸುವುದು ಕಷ್ಟವಾಗುತ್ತದೆ. ಪಕ್ಷದಲ್ಲಿ ವಂಶ- ಪರಂಪರೆ ಸಂಸ್ಕೃತಿ ಈಗಲೂ ಹೆಚ್ಚಾಗುತ್ತಿದೆ. ಅಧಿಕಾರದಲ್ಲಿದ್ದವರ ಮಕ್ಕಳು, ಅಳಿಯ, ಹೆಂಡತಿ, ಮೊಮ್ಮಕ್ಕಳು ಹೀಗೆ ಅವರ ವಂಶದವರಿಗೆ ಟಿಕೇಟ್ ಕೊಡಿಸಲು ಬಹುತೇಕ ಪೈಪೋಟಿ ನಡೆಯುತ್ತದೆ” ಎಂದು ಅವರು ದೂರಿದರು.

ಪಕ್ಷ ಅಧಿಕಾರದಲ್ಲಿ ಇಲ್ಲದ ಸಮಯದಲ್ಲಿ ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವವನ್ನು ಸಿದ್ದರಾಮೋತ್ಸವವನ್ನಾಗಿ ಮಾಡಿ, ದಾವಣಗೆರೆ ಕಾರ್ಯಕರ್ತರು ಹತ್ತಾರು ಲಕ್ಷ ಜನರನ್ನು ಸೇರಿಸಿದ್ದರು. ರಾಜ್ಯದ 7 ಕೋಟಿ ಜನ ಮತ ಹಾಕಿ ಗೆಲ್ಲಿಸಿ, ಪಕ್ಷವನ್ನು ಸಿದ್ದರಾಮಯ್ಯ ನವರನ್ನು ಅಧಿಕಾರಕ್ಕೆ ತರಲು ಈ ಸಿದ್ದರಾಮೋತ್ಸವವೇ ಕಾರಣವಾಯಿತು. ಕಾಂಗ್ರೇಸ್ ಪಕ್ಷ ಹೀನಾಯ ಸ್ಥಿತಿಯಲ್ಲಿದ್ದಾಗ ದಾವಣಗೆರೆಯಲ್ಲಿನ ಸಿದ್ದರಾಮೋತ್ಸವ ಕಾರ್ಯಕ್ರಮ ಪಕ್ಷಕ್ಕೆ  ಅಪಾರ ಶಕ್ತಿ ತುಂಬಿತು. ಆದರೆ ಅವರು ಅಧಿಕಾರಕ್ಕೆ ಬಂದ ಮೇಲೆ ತಮ್ಮನ್ನು ಅಧಿಕಾರಕ್ಕೆ ತಂದ ದಾವಣಗೆರೆ ಕಾರ್ಯಕರ್ತರನ್ನೇ ಮರೆತಿದ್ದಾರೆ ಎಂದು ಅಸಹನೆ ವ್ಯಕ್ತಪಡಿಸಿದ್ದಾರೆ.

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬರಲು ದಾವಣಗೆರೆ ಕಾರ್ಯಕರ್ತರು ಪಟ್ಟ ಶ್ರಮ ಅಪಾರ. ಅದರ ಜೊತೆಗೆ ಡಿ. ಕೆ. ಶಿವಕುಮಾರ್‌ರವರು ಸಹ ತಮಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಸಿಎಂರವರೇ, ನಿಮ್ಮ ಕೈಯಲ್ಲೇ ಅಧಿಕಾರವಿದೆ. ಲೇಖನಿಯಿದೆ, ಆದರೂ ನೀವು ಏಕೆ ಕಾರ್ಯಕರ್ತರನ್ನು ಅಧಿಕಾರದಿಂದ ವಂಚಿತರನ್ನಾಗಿ ಮಾಡುತ್ತಿದ್ದೀರಿ? ಯಾವ ಕಾಣದ ಕೈ ನಿಮ್ಮನ್ನು ತಡೆಯುತ್ತಿದೆ? ದಯವಿಟ್ಟು ದಾವಣಗೆರೆ ಕಾರ್ಯಕರ್ತರಿಗೂ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ, ಗೌರವಿಸಿ ಎಂದು ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X