ದಾವಣಗೆರೆ | ಸಂವಿಧಾನ ಪೀಠಿಕೆ ಮೇಲೆ ಖಾಸಗಿ ಪ್ಲೆಕ್ಸ್‌; ಕ್ರಮಕ್ಕೆ ದಸಂಸ ಒತ್ತಾಯ

Date:

Advertisements

ದಾವಣಗೆರೆಯಲ್ಲಿ ಜಿಲ್ಲಾಡಳಿತದ ಅಂಬೇಡ್ಕರ್, ಗಾಂಧಿ ಚಿತ್ರ ಹಾಗೂ ಸಂವಿಧಾನ ಪೀಠಿಕೆ ಇರುವ ಪ್ಲೆಕ್ಸ್ ಮೇಲೆ ಖಾಸಗಿ ಪ್ಲೆಕ್ಸ್ ಹಾಕಲಾಗಿದ್ದು, ಅವುಗಳನ್ನು ತೆರವುಗೊಳಿಸಿ, ಕ್ರಮ ಕೈಗೊಳ್ಳಬೇಕೆಂದು ದಸಂಸ ಆಗ್ರಹಿಸಿದೆ.

75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ  ಭಗೀರಥ ಸರ್ಕಲ್‌ನಲ್ಲಿ ಅಳವಡಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮಾಗಾಂಧಿ ಮತ್ತು ಸಂವಿಧಾನ ಪೀಠಿಕೆ ಇರುವ ಪ್ಲೆಕ್ಸ್ ಮೇಲೆ (ಪುರೋಹಿತ ವೆಜ್) ಖಾಸಗಿ ಹೋಟೆಲ್‌ ಮಾಲೀಕರು ಅವರ ಅಂಗಡಿಯ ಪ್ರಚಾರದ  ಪ್ಲೆಕ್ಸ್ ಹಾಕಿದ್ದು, ರಾಷ್ಟ್ರೀಯ ನಾಯಕರು ಮತ್ತು ಸಂವಿಧಾನ ಪೀಠಿಕೆ ಇರುವ ಬ್ಯಾನರ್ ಮೇಲೆ ತಂತಿ ಇಂದ ಕಟ್ಟಿ ದೇಶ ದ್ರೋಹದ ಕೆಲಸವನ್ನು ಎಸಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಕೃತ್ಯದಿಂದ ಅಂಬೇಡ್ಕರ್ ಅನುಯಾಯಿಗಳಿಗೆ ಮತ್ತು ಅಂಬೇಡ್ಕರ್ ಸಂಘಟನೆಗಳಿಗೆ ಮತ್ತು ಅಂಬೇಡ್ಕರ್ ಅವರ ಸಮಸ್ತ ಅಭಿಮಾನಿಗಳಿಗೆ ಮತ್ತು ಡಿಎಸ್ಎಸ್ ಸಂಘಟನೆಗೆ ತೀವ್ರವಾದ ನೋವು ಉಂಟಾಗಿದೆ. ಈ ಅವಹೇಳನ ಕೆಲಸ ಮಾಡಿರುವ ಪುರೋಹಿತ ಹೋಟೆಲ್ ಮಾಲೀಕರ ಮೇಲೆ ಕ್ರಮ ಕೈ ಕೊಳ್ಳಬೇಕೆಂದು ಅಧಿಕಾರಿಗಳಿಗೆ ಮತ್ತು  ಜಿಲ್ಲಾಡಳಿತಕ್ಕೆ ಹೋರಾಟದ ಮೂಲಕ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

Advertisements

ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಪ್ರದೀಪ್, ಮಂಜುನಾಥ್ ಆರ್, ಶಿವಶಂಕರ ಗಾಂಧಿನಗರ ಮತ್ತು ಮಾಗಡಿ ದ್ವಾರಕೀಶ್ ಶಿವಾನಂದಣ್ಣ ಮತ್ತು ಅಂಜಿನಪ್ಪ ವಕೀಲರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X