ದಾವಣಗೆರೆ | ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

Date:

Advertisements

ಹೊರಗುತ್ತಿಗೆ ಏಜೆನ್ಸಿಯವರು ಮೂರು ತಿಂಗಳಾದರೂ ವಾಹನ ಚಾಲಕರಿಗೆ ವೇತನ ನೀಡಿಲ್ಲ. ಆದ್ದರಿಂದ, ಏಜೆನ್ಸಿಗಳನ್ನು ರದ್ದುಪಡಿಸಿ ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ವಾಹನ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಹಾನಗರ ಪಾಲಿಕೆಯ ಹೊರಗುತ್ತಿಗೆ ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟಿಸಿದರು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಎಂ.ಆರ್. ದುಗ್ಗೇಶ್ ಮಾತನಾಡಿ, ಮಹಾನಗರ ಪಾಲಿಕೆಯ ಕಸ ಸಾಗಾಣಿಕೆ, ಒಳಚರಂಡಿ ಹಾಗೂ ಇತರ ವಿಭಾಗದಲ್ಲಿ ಸುಮಾರು ವರ್ಷಗಳಿಂದ ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಚಾಲಕರಾಗಿ ನಾವುಗಳು ಸೇವೆ ಸಲ್ಲಿಸುತ್ತಿದ್ದು, ಇದುವರೆಗೂ ಏಜೆನ್ಸಿಗಳ ಮೂಲಕ ಪ್ರತೀ ತಿಂಗಳು ವೇತನವನ್ನು ಪಡೆಯುತ್ತಿದ್ದೇವು. ಆದರೆ, ಕಳೆದ 2023ರ ಅಕ್ಟೋಬರ್ ತಿಂಗಳಿಂದ ಟೆಂಡ‌ರ್ ಮೂಲಕ ಏಜೆನ್ಸಿ ಬದಲಾವಣೆಯಾಗಿದ್ದು, ಆದರ್ಶ ಎಂಟರ್ ಪ್ರೈಸಸ್ ಹುಬ್ಬಳ್ಳಿ ಇವರಿಗೆ ಟೆಂಡ‌ರ್ ನೀಡಲಾಗಿದೆ.

Advertisements

ಆದರೆ, ಇವರು ಈ ಹಿಂದೆ ಹುಬ್ಬಳ್ಳಿ ಪಾಲಿಕೆಯಲ್ಲಿಯೂ ಚಾಲಕರುಗಳಿಗೆ ವೇತನ ನೀಡುವುದರಲ್ಲಿ ಸತಾಯಿಸುತ್ತಿರುವುದಾಗಿ ತಿಳಿದುಬಂದಿದ್ದು, ಟೆಂಡರ್ ನೀಡದಂತೆ ನಾವು ಈ ಹಿಂದೆ ಟೆಂಡ‌ರ್ ಸಮಯದಲ್ಲಿಯೇ ಮನವಿ ನೀಡಿದ್ದೆವು, ಆದರ್ಶ ಎಂಟರ್‌ಪ್ರೈಸಸ್ ಹುಬ್ಬಳ್ಳಿ ಏಜೆನ್ಸಿಯವರು ಆರಂಭದಲ್ಲಿಯೇ ಅಕ್ಟೋಬರ್ 2023ರ ವೇತನವನ್ನು ಕೊಡುವಲ್ಲಿ ಸತಾಯಿಸಿ, ಪಾಲಿಕೆಯಿಂದ ನೀಡಿದ ಮೇಲೆ ಪಾವತಿಸುತ್ತೇನೆ ಎಂದಿದ್ದಾರೆ. ಇದರಿಂದ ನಮಗೆ ತೀವ್ರ ತೊಂದರೆಯಾಗುತ್ತಿದೆ ಎಂದರು.

ಏಜೆನ್ಸಿಯವರು ನಮ್ಮ ದೂರವಾಣಿ ಕರೆಯನ್ನು ಸಹ ಸ್ವೀಕರಿಸುತ್ತಿಲ್ಲ. ಇದರಿಂದ ನಮ್ಮ ಸ್ಥಿತಿ ಅತಂತ್ರವಾಗಿದ್ದು, ಕುಟುಂಬ ನಿಭಾಯಿಸುವುದು ಕಷ್ಟವಾಗಿದೆ. ಮೂರು ತಿಂಗಳ ವೇತನ ನೀಡದೇ ಸತಾಯಿಸುತ್ತಿರುವ ಆದರ್ಶ ಎಂಟರ್‌ಪ್ರೈಸಸ್, ಹುಬ್ಬಳ್ಳಿ ಏಜೆನ್ಸಿಯವರ ಟೆಂಡ‌ರ್ ರದ್ದುಪಡಿಸಿ ಪಾಲಿಕೆಯಿಂದಲೇ ವೇತನ ನೀಡಿ. ಇಲ್ಲವೇ ಸ್ಥಳೀಯ ಏಜೆನ್ಸಿಗಳಿಗೆ ಟೆಂಡ‌ರ್ ನೀಡುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಂ.ವೀರೇಶ್, ಕಿರಣ್ ಕುಮಾರ್, ಎಚ್.ಎಂ. ಪ್ರಭಾಕರ್, ಸಂತೋಷ್, ಪ್ರಕಾಶ್, ಕೊಟ್ರೇಶ್, ಸಿದ್ದಲಿಂಗೇಶ್ವರ್, ಚಿದಾನಂದ, ಮೈಲಾರಿ, ನವೀನ್ ಮತ್ತಿತರರ ಕಾರ್ಮಿಕರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X