ದಾವಣಗೆರೆ | ಅಪ್ಪು ಅಗಲಿಕೆಯ ಚಿಂತೆಯಲ್ಲಿ ಊಟ ಬಿಟ್ಟಿದ್ದ ಯುವತಿ ಸಾವು

Date:

Advertisements

ನಟ ಪುನೀತ್‌ ರಾಜ್‌ಕುಮಾರ್‌ ಅಗಲಿಕೆಯಿಂದ ಮನನೊಂದಿದ್ದ ಯುವತಿ, ಅದೇ ಚಿಂತೆಯಲ್ಲಿ ಕ್ರಮೇಣ ಆಹಾರ ಸೇವನೆಯನ್ನೇ ತೊರೆದಿದ್ದರು. ಪರಿಣಾಮ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿ ಕೊನೆಯುಸಿರೆದಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ನಿವಾಸಿ ಕುಮಾರ ಹಾಗೂ ಮಂಜುಳಾ ದಂಪತಿ ಪುತ್ರಿ ಪ್ರೀತಿ ಮೃತ ದುರ್ದೈವಿ. ಪುನೀತ್‌ ಸಾವನ್ನಪ್ಪಿದ ನಂತರ ಯುವತಿ, ಪ್ರತಿ ದಿನ ಅಪ್ಪು ಫೋಟೋಗೆ ಪೂಜೆ ಮಾಡುತ್ತಿದ್ದರು. ಊಟ ಮಾಡುವುದನ್ನೂ ಬಿಟ್ಟಿದ್ದರು. ಇದರಿಂದಾಗಿ, ದೇಹದಲ್ಲಿ ರಕ್ತ ಕಡಿಮೆ ಆಗಿ ಕ್ರೇಟಿನ್ ಅಂಶ ಹೆಚ್ಚಾಗಿತ್ತು. ಅನಾರೋಗ್ಯಕ್ಕೆ ತುತ್ತಾಗಿದ್ದ ಆಕೆಯನ್ನು ಪೋಷಕರು ಆಸ್ಪತ್ರೆಗೆ ಸೇರಿಸಿದ್ದರು. ಆದರೂ, ಆಕೆ ಬದುಕುಳಿಯಲಿಲ್ಲ.

2017ರಲ್ಲಿ ಆರನೇ ತರಗತಿಯಲ್ಲಿ ಓದುತಿದ್ದ ಪ್ರೀತಿ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಎರಡೂ ಕಿಡ್ನಿಗಳು ವೈಫಲ್ಯವಾಗಿದ್ದರಿಂದ ಆಕೆಗೆ ಒಂದಾದರೂ ಕಿಡ್ನಿಯನ್ನು ಹಾಕಬೇಕೆಂದು ವೈದ್ಯರು ಹೇಳಿದ್ದರು. ಆದರೆ, ಪೋಷಕರು ಬಡವರಾಗಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಿಸುವುದು ಸವಾಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದಿದ್ದ ಪುನೀತ್‌ ರಾಜ್‌ಕುಮಾರ್‌, ಆಕೆಯನ್ನು ಬೆಂಗಳೂರಿಗೆ ಕರೆಸಿಕೊಂಡು 12.5 ಲಕ್ಷ ರೂ. ಆಸ್ಪತ್ರೆ ವೆಚ್ಚ ಭರಿಸಿ, ಶಸ್ತ್ರಚಿಕಿತ್ಸೆ ಮಾಡಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ?: ಬಾಲಿವುಡ್‌ನಲ್ಲಿ ಆಂತರಿಕ ರಾಜಕಾರಣ ಕೊನೆಗೊಳ್ಳಬೇಕು: ಪ್ರಿಯಾಂಕಾ ಚೋಪ್ರಾ

ಪುನೀತ್‌ ಅಭಿಮಾನಿಗಳನ್ನು ಅಗಲಿದ ಬಳಿಕ ಆಕೆ ವಿಪರೀತ ದುಃಖಿತಳಾಗಿದ್ದಳು. ಅದೇ ಚಿಂತೆಯಲ್ಲಿ ದಿನಕಳೆದಂತೆ ಊಟ ಮಾಡುವುದನ್ನು ಕಡಿಮೆ ಮಾಡಿದ್ದ ಪ್ರೀತಿ, ಆಹಾರ ಸೇವನೆಯನ್ನು ತ್ಯಜಿಸಿದ್ದರು. ಇದೀಗ, ಆಕೆ ಕೊನೆಯುಸಿರೆಳೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X