ದಾವಣಗೆರೆ | ನಾಮಫಲಕದಲ್ಲಿ ಕನ್ನಡವೇ ಮಾಯ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಕನ್ನಡ ನಾಮಫಲಕ ಕಡ್ಡಾಯ’ಕ್ಕಾಗಿ ಆಗ್ರಹಿಸಿ ನಡೆದ ಹೋರಾಟದ ಬೆನ್ನಲ್ಲೇ ದಾವಣಗೆರೆ ನಗರದಲ್ಲೂ ‘ಕನ್ನಡ ನಾಮಫಲಕ ಕಡ್ಡಾಯ’ದ ಕುರಿತಾದ ಗಟ್ಟಿ ಧ್ವನಿ ಎದ್ದಿದೆ. ಆದರೆ, ದಾವಣಗೆರೆ ನಗರದಲ್ಲಿನ ಹಲವು ಅಂಗಡಿ, ಹೋಟೆಲ್, ಮಳಿಗೆ, ವ್ಯಾಪಾರಿ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಮಾಯವಾಗಿದ್ದು, ಸಂಪೂರ್ಣ ಇಂಗ್ಲಿಷ್‌ ಹಾಗೂ ಹಿಂದಿಮಯವಾಗಿವೆ.

ಕನ್ನಡ ಸಂಘಟನೆಗಳ ಪ್ರತಿಭಟನೆ, ಕಪ್ಪು ಮಸಿ ಬಳಿಯುವ ಎಚ್ಚರಿಕೆಗೆ ಅನ್ಯ ಭಾಷೆಗಳ ನಾಮಫಲಕಗಳನ್ನು ಅಳವಡಿಸಿರುವವರು ‘ಕ್ಯಾರೆ’ ಎನ್ನುತ್ತಿಲ್ಲ. ನಗರದ ಹಲವು ಅಂಗಡಿ, ಹೋಟೆಲ್‌ ಸೇರಿದಂತೆ ಇನ್ನಿತರ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಕಣ್ಮರೆಯಾಗಿದೆ.

ನಗರದ ಪಿ.ಜೆ.ಬಡಾವಣೆ, ಆಂಜನೇಯ ಬಡಾವಣೆ, ಬಿ.ಇ.ಐ.ಟಿ. ಕಾಲೇಜು ರಸ್ತೆ, ಎ.ವಿ.ಕೆ. ರಸ್ತೆ, ಅಶೋಕ ರಸ್ತೆ, ಮಂಡಿಪೇಟೆ, ಎಚ್‌.ಎಂ.ರಸ್ತೆ, ಆಜಾದ್ ನಗರ, ಭಾಷಾ ನಗರ ಸೇರಿದಂತೆ ಪ್ರಮುಖ ರಸ್ತೆಗಳು, ವಾಣಿಜ್ಯ ಪ್ರದೇಶಗಳಲ್ಲಿರುವ ಮಳಿಗೆಗಳು, ಅಂಗಡಿ, ಹೋಟೆಲ್‌ ಹಾಗೂ ವಾಣಿಜ್ಯ ಸಂಸ್ಥೆಗಳ ಎದುರು ಇಂಗ್ಲಿಷ್‌ ಭಾಷೆಯ ನಾಮಫಲಕಗಳು ರಾರಾಜಿಸುತ್ತಿವೆ.

Advertisements

ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸುವಂತೆ ಒತ್ತಾಯಿಸಿ ಈ ಹಿಂದೆಯೂ ಕನ್ನಡ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಮನವಿಯನ್ನೂ ಸಲ್ಲಿಸಿದ್ದರು. ಆದರೂ ಪರಿಸ್ಥಿತಿ ಕಿಂಚಿತ್ತೂ ಬದಲಾಗಿಲ್ಲ.

ಜಾಹೀರಾತು ಫ್ಲೆಕ್ಸ್‌ಗಳಲ್ಲಿಲ್ಲ ಕನ್ನಡ ಶಾಲಾ-ಕಾಲೇಜುಗಳ ಪ್ರವೇಶಾತಿ, ತರಬೇತಿ ಶಿಬಿರ, ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಪಟ್ಟಂತೆ ನಗರದ ಹಲವೆಡೆ ಅಳವಡಿಸಿರುವ ಹೆಚ್ಚಿನ ಫ್ಲೆಕ್ಸ್‌ಗಳಲ್ಲಿ ಕನ್ನಡ ಭಾಷೆ ಇಲ್ಲವಾಗಿದ್ದು, ಇಂಗ್ಲಿಷ್‌ ಭರಾಟೆ ಹೆಚ್ಚಿದೆ. ಫ್ಲೆಕ್ಸ್‌, ಬ್ಯಾನರ್‌ಗಳಲ್ಲೂ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್‌.ರಾಮೇಗೌಡ ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯನ್ನು ಬಳಸದ ನಾಮಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ನಗರದಲ್ಲಿ ಅಳವಡಿಸುವ ನಾಮಫಲಕಗಳು ಶೇ.60 ಕನ್ನಡ ಭಾಷೆ, ಶೇ. 40ರಷ್ಟು ಇತರ ಭಾಷೆಯಲ್ಲಿ ಇರಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಾಲಿಕೆ ಮುಂದಾಗಿದೆ. ಈ ನಿಯಮ ಪಾಲಿಸುವಂತೆ ಬಂಟಿಂಗ್ಸ್‌, ಫ್ಲೆಕ್ಸ್‌, ಬ್ಯಾನರ್‌ ತಯಾರಿಸುವವರಿಗೆ ಆರೋಗ್ಯ ನಿರೀಕ್ಷಕರ ಮೂಲಕ ನೋಟಿಸ್‌ ನೀಡಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಡಾ.ಚಂದ್ರಮೋಹನ್‌ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X