ಚಿಕ್ಕಬಳ್ಳಾಪುರ | ಜಾತಿ ಜನಗಣತಿ ಉತ್ತಮ ಸ್ಪಂದನೆ ; ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ

Date:

Advertisements

ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತ ಮನೆ ಮನೆ ಸಮೀಕ್ಷೆ ಗಣತಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಇದುವರೆಗೆ 5,877 ಜನರ ಗಣತಿಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ವರದಹಳ್ಳಿಗೆ ಗುರುವಾರ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಬಳಿಕ ಮಾತನಾಡಿದರು.

ಗಣತಿದಾರರು ತಮ್ಮ ಮನೆಗಳ ಬಳಿ ಬಂದು ಕೇಳುವ ಮಾಹಿತಿ ಹಾಗೂ ವಿವರವನ್ನು ಸ್ಪಷ್ಟವಾಗಿ ನೀಡಬೇಕು. ಗಣತಿದಾರರಿಗೆ ಸಹಕಾರ ನೀಡಿದರೆ ಸಮೀಕ್ಷೆ ಕಾರ್ಯ ಸುಗಮವಾಗಲಿದೆ. ಈ ಜಾತಿಗಣತಿ ವರದಿಯ ಅನುಸಾರ ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಬಹಳ ಸಹಕಾರಿಯಾಗುತ್ತದೆ. ಸಾರ್ವಜನಿಕರು ಈ ಕುರಿತು ಜಾಗೃತರಾಗಿ ಮಾಹಿತಿ ನೀಡಿ ಸಾಮಾಜಿಕ ಜವಾಬ್ದಾರಿ ತೋರಬೇಕು. ಸಮುದಾಯದ ಅಭಿವೃದ್ಧಿಗೆ ಈ ಗಣತಿಯು ತುಂಬಾ ಸಹಕಾರಿಯಾಗುವುದರಿಂದ ಸಮುದಾಯದ ಮುಖಂಡರ ಸಹಕಾರ ಪಡೆದು ಅವರೊಂದಿಗೆ ಸಭೆ ನಡೆಸಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Advertisements

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಮಾತನಾಡಿ, ಒಳಮೀಸಲಾತಿ ಕುರಿತ ಸಮೀಕ್ಷೆ ಕಾರ್ಯವನ್ನು ಜಿಲ್ಲೆಯಾದ್ಯಂತ ಪರಿಶೀಲಿಸಲಾಗುತ್ತಿದೆ. ಈ ಸಮೀಕ್ಷೆ ಕಾರ್ಯವು ಮೇ 17ರವರೆಗೆ ಜಿಲ್ಲಾಯಾದ್ಯಂತ ನಡೆಯಲಿದ್ದು, ಪರಿಶಿಷ್ಟ ಜಾತಿ ಸಮುದಾಯದವರು ನಿಖರ ಮಾಹಿತಿ ಹಾಗೂ ವಿವರವನ್ನು ಒದಗಿಸುವ ಮೂಲಕ ಸಮೀಕ್ಷೆ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ವರದಹಳ್ಳಿ ಸಮೀಕ್ಷೆ ಕಾರ್ಯದ ನಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಂಟಿಯಾಗಿ ಬಾಗೇಪಲ್ಲಿ ತಾಲ್ಲೂಕಿನ ಪರಗೋಡು ಗ್ರಾಮದಲ್ಲಿ ನಡೆಯುತ್ತಿದ್ದ ಗಣತಿ ಕಾರ್ಯವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ್ ರೆಡ್ಡಿ, ಸಹಾಯಕ ನಿರ್ದೇಶಕ ಶೇಷಾದ್ರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣತಿದಾರರು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X