ಬೆಂಗಳೂರು | ಶಿವರಾಮ ಕಾರಂತ ಬಡಾವಣೆ ಪರಿಶೀಲಿಸಿದ ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements
  • ಪ್ರಗತಿಯಲ್ಲಿರುವ ಕಾಮಗಾರಿ ಕಾರ್ಯ ವೀಕ್ಷಿಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವ
  • ಬಡಾವಣೆಯ ಬಳಿ ಐ.ಟಿ. ಹಬ್ ಮಾಡಲು ಜಾಗ ಮೀಸಲಿಡುವಂತೆ ಆದೇಶ

ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಲಹಂಕದಲ್ಲಿರುವ ಡಾ. ಕೆ. ಶಿವರಾಮ ಕಾರಂತ ಬಡಾವಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಗತಿಯಲ್ಲಿರುವ ಕಾಮಗಾರಿಯ ಕಾರ್ಯವನ್ನು ವೀಕ್ಷಿಸಿದ ಅವರು, ಕೆಲವೊಂದು ಮಾರ್ಪಾಡು ಮಾಡುವ ಬಗ್ಗೆ ಸಲಹೆಗಳನ್ನು ನೀಡಿದರು.

ಶಿವರಾಮ ಕಾರಂತ ಬಡಾವಣೆಯಲ್ಲಿ ಜಮೀನು ನೀಡಿರುವ ರೈತರು, ಭೂಮಾಲೀಕರುಗಳಿಗೆ ಆದ್ಯತೆಯ ಮೇರೆಗೆ ಪರಿಹಾರವನ್ನು ನೀಡುವ ಬಗ್ಗೆಯೂ ಸೂಚನೆ ನೀಡಿದರು.

Advertisements

ಬಡಾವಣೆಯಲ್ಲಿ ವಸತಿ ಬೆಳವಣಿಗೆಯೊಂದಿಗೆ ವಾಣಿಜ್ಯ ಚಟುವಟಿಕೆಗಳಿಗೂ ಅವಕಾಶವನ್ನು ಕಲ್ಪಿಸಿಕೊಡುವಂತೆ ಸೂಚಿಸಿದ ಅವರು, ಉದ್ಯಾನವನ, ನಾಗರಿಕ ಸೌಲಭ್ಯ ನಿವೇಶನ ಹಾಗೂ ಕ್ರೀಡಾಂಗಣಕ್ಕೆ ಮೀಸಲಿಟ್ಟಿರುವ ಸುಮಾರು 45 ಎಕರೆ ಜಾಗವು ವಾಣಿಜ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರಸ್ತೆ ಅಗಲೀಕರಣಗೊಳಿಸುವಂತೆ ಸೂಚಿಸಿದರು.

45 ಮೀಟರ್ ರಸ್ತೆ ಸಮೀಪ ಯಾರಿಗೂ ನಿವೇಶನವನ್ನು ಹಂಚಿಕೆ ಮಾಡದೇ, ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗಬೇಕು. ಅಲ್ಲದೇ, ಈ ಬಡಾವಣೆಯಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಹಾದುಹೋಗುವ ಮಾರ್ಗವನ್ನು ಕೂಡ ಪರಿಶೀಲಿಸಿದರು.

ಬಡಾವಣೆಯ ಬಳಿ ಐ.ಟಿ. ಹಬ್ ಮಾಡಲು ಜಾಗವನ್ನು ಮೀಸಲಿಡುವಂತೆ ಉಪಮುಖ್ಯಮಂತ್ರಿ ಆದೇಶಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷ ರಾಕೇಶ್ ಸಿಂಗ್, ಆಯುಕ್ತ ಜಿ. ಕುಮಾರ ನಾಯಕ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಅಭಿಯಂತರ ಸದಸ್ಯರಾದ ಶಾಂತರಾಜಣ್ಣ, ವೈ.ಬಿ. ಶಾಂತರಾಜು, ವಿಶೇಷ ಭೂಸ್ವಾಧೀನಾಧಿಕಾರಿಗಳಾದ ಕವಿತಾ ಯೋಗಪ್ಪನವರ್, ನಿಖಿತಾ ಎಂ. ಚಿನ್ನಸ್ವಾಮಿ, ಡಾ. ಹರೀಶ್ ನಾಯ್ಕ, ಎಸ್.ಎಂ. ಸಹನಾ, ಕೆ.ಎನ್. ಪ್ರವೀಣ್, ಡಾ. ನಂದಿನಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X