ಬಿಸಿಲಿನ ಜಳಕ್ಕೆ ಕೋಳಿಗಳ ಸಾವು; ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ

Date:

Advertisements

ಬೇಸಿಗೆ ಜಳಕ್ಕೆ ಕೋಳಿಫಾರಂಗಳಲ್ಲಿ ಕೋಳಿ ಸಾಯುತ್ತಿರುವ ಹಿನ್ನೆಲೆ ಕೋಳಿ ಉತ್ಪಾದನೆ ಕುಸಿದಿದ್ದು, ಮಾರಾಟಕ್ಕೆ ಮಾಂಸದ ಕೊರತೆ ಉಂಟಾಗಿದೆ.

ಯುಗಾದಿ ಹಬ್ಬಕ್ಕೆ ಸಹಜವಾಗಿಯೇ ಕೋಳಿ ಬೆಲೆ ಹೆಚ್ಚಾಗುತ್ತದೆ. ಹಾಗಾಗಿಯೇ ಹಬ್ಬಕ್ಕೆ ಮಾರುಕಟ್ಟೆಗೆ ಬರುವಂತೆ ರೈತರು ಫಾರಂ ಕೋಳಿಗಳನ್ನು ಸಾಕಾಣಿಕೆ ಮಾಡುತ್ತಾರೆ. ಆದರೆ ಈ ಬಾರಿ ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ಕೋಳಿಗಳು ಸಾಕಾಣಿಕೆ ಕೇಂದ್ರದಲ್ಲಿ ಸಾಯುವ ಪ್ರಮಾಣ ಹೆಚ್ಚಾಗಿದೆ.

ಹೀಗಾಗಿಯೇ ಕೋಳಿ ಮಾಂಸ ಇಂದು ಮಾರುಕಟ್ಟೆಯಲ್ಲಿ 1ಕೆಜಿಗೆ ₹240ಗಳಿಗೆ ಮಾರಾಟವಾಗುತ್ತಿದೆ. ಒಂದು ವಾರದ ಹಿಂದೆ 1 ಕೆಜಿಗೆ ₹210 ಇತ್ತು ಎಂದು ತಿಳಿದುಬಂದಿದೆ.

Advertisements

ಸಾಮಾನ್ಯವಾಗಿ ಯುಗಾದಿ ಹಬ್ಬ ಒಂದು ವಾರ ಇರುವಂತೆ ಮಾರುಕಟ್ಟೆಗೆ ಕೋಳಿ ಸಬರಾಜು ಕಡಿಮೆಯಾಗುತ್ತದೆ. ಹಾಗೆಯೇ ಖರೀದಿಯೂ ಕಡಿಮೆಯಾಗುತಿತ್ತು. ಆದರೆ ಈ ಬಾರಿ ಖರೀದಿ ಮಾತ್ರ ಕಡಿಮೆಯಾಗಿಲ್ಲ. ರಂಜಾನ್‌, ಯುಗಾದಿ ಹಬ್ಬ ಎರಡೂ ಒಂದೆರಡು ದಿನಗಳ ಅಂತರದಲ್ಲೇ ಇರುವುದರಿಂದ ಕೋಳಿ ಮಾಂಸದ ಬೆಲೆ ಮತ್ತಷ್ಟು ಹೆಚ್ಚಾಗಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಣ; ಅನುಮತಿ ಪಡೆಯದ ಪ್ರಿಂಟಿಂಗ್ ಪ್ರೆಸ್‌ಗೆ ಬೀಗಮುದ್ರೆ

ಲೋಕಸಭಾ ಚುನಾವಣೆ ಇರುವುದರಿಂದ ಜನಸಾಮಾನ್ಯರ ಕೈಯಲ್ಲಿ ಹಣ ಇರುವುದು ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಯೋಜನೆಯಿಂದಾಗಿ ಮಹಿಳೆಯರ ಕೈಯಲ್ಲೂ ಹಣ ಇರುವುದರಿಂದ ಕೊಳ್ಳುವ ಶಕ್ತಿ ವೃದ್ಧಿಯಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಕೋಳಿ ಮಾಂಸ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯು ಇದೆ ಎಂಬುದು ಕೋಳಿ ಮಾರಾಟಗಾರರ ಲೆಕ್ಕಾಚಾರವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X