ಬೀದರ್ |‌ ಸಾಲದ ಹೊರೆ : ಒಂದೇ ದಿನ ಇಬ್ಬರು ರೈತರ ಆತ್ಮಹತ್ಯೆ

Date:

Advertisements

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ.

ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಯುವ ರೈತ ಕಾರ್ತಿಕ್ (21) ಎಂಬುವವರು ಖಾನಾಪುರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಕಾರ್ತಿಕ್ ಬೇರೆಯವರ ಜಮೀನು ಗುತ್ತಿಗೆ ಪಡೆದು ಬೇಸಾಯ ಮಾಡುವುದಕ್ಕಾಗಿ ಬ್ಯಾಂಕ್‌ ಹಾಗೂ ಖಾಸಗಿಯವರ ಬಳಿ ಕೈಸಾಲ ಸೇರಿ ಒಟ್ಟು ₹4 ಲಕ್ಷ ಸಾಲ ಪಡೆದಿದ್ದರು. ನಿರೀಕ್ಷೆಯಂತೆ ಬೆಳೆ ಬೆಳೆಯದೆ ಸಂಕಷ್ಟಕ್ಕೆ ಸಿಲುಕಿದ್ದರು. ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisements

ಈ ಕುರಿತು ಧನ್ನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾವಿಗೆ ಹಾರಿ ರೈತ ಆತ್ಮಹತ್ಯೆ :

ಬಸವಕಲ್ಯಾಣ ತಾಲ್ಲೂಕಿನ ಇಲ್ಲಾಳ ಗ್ರಾಮದ ರೈತ ಜಗದೀಶರೆಡ್ಡಿ ಪ್ರಲ್ಹಾದರೆಡ್ಡಿ (49) ತಮ್ಮ ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಮಂಗಳವಾರ ನಸುಕಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಈ ಹಿಂದೆ ಎರಡೂವರೆ ಎಕರೆ ಜಮೀನು ಇತ್ತು. ರೇಷ್ಮೆ ಹಾಗೂ ಇತರೆ ಬೆಳೆ ಬೆಳೆಯುತ್ತಿದ್ದರು. ಕೃಷಿಗಾಗಿ ಬ್ಯಾಂಕ್‌ನಲ್ಲಿ ₹1.25 ಲಕ್ಷ ಹಾಗೂ ಖಾಸಗಿ ಕೈಸಾಲ ಮಾಡಿಕೊಂಡಿದ್ದರು. ಸರಿಯಾಗಿ ಬೆಳೆ ಬಾರದೆ ಹಾಗೂ ರೇಷ್ಮೆ ಬೆಲೆ ಕುಸಿತದಿಂದ ಸಾಲದ ಹೊರೆಯಾಗಿತ್ತು. ಸಾಲ ತೀರಿಸುವುದಕ್ಕಾಗಿ ಕೆಲ ತಿಂಗಳ ತಮ್ಮ ಒಂದು ಎಕರೆ ಜಮೀನು ಸಹ ಮಾರಾಟ ಮಾಡಿದ್ದರು. ಉಳಿದ ಒಂದೂವರೆ ಎಕರೆಯಲ್ಲಿ ಬೆಳೆದ ರೇಷ್ಮೆ ಬೆಳೆದಿದ್ದರು, ನಿರೀಕ್ಷೆಯಂತೆ ಫಸಲು ಬರಲಿಲ್ಲ. ಸಾಲ ತೀರಿಸುವುದು ಹೇಗೆ ಎಂದು ಚಿಂತೆಗೀಡಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೋಗಿಲೆ ಕಂಠದ ಪ್ರಕೃತಿಗೆ ಬೇಕಿದೆ ಪ್ರೋತ್ಸಾಹ

ಮೃತರಿಗೆ ಪುತ್ರ, ಪುತ್ರಿ ಹಾಗೂ ಪತ್ನಿ ಇದ್ದಾರೆ. ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X