ಬೀದರ್ |‌ ಸಾಲದ ಹೊರೆ : ಒಂದೇ ದಿನ ಇಬ್ಬರು ರೈತರ ಆತ್ಮಹತ್ಯೆ

Date:

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ.

- Advertisement -

ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಯುವ ರೈತ ಕಾರ್ತಿಕ್ (21) ಎಂಬುವವರು ಖಾನಾಪುರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ಮೃತ ಕಾರ್ತಿಕ್ ಬೇರೆಯವರ ಜಮೀನು ಗುತ್ತಿಗೆ ಪಡೆದು ಬೇಸಾಯ ಮಾಡುವುದಕ್ಕಾಗಿ ಬ್ಯಾಂಕ್‌ ಹಾಗೂ ಖಾಸಗಿಯವರ ಬಳಿ ಕೈಸಾಲ ಸೇರಿ ಒಟ್ಟು ₹4 ಲಕ್ಷ ಸಾಲ ಪಡೆದಿದ್ದರು. ನಿರೀಕ್ಷೆಯಂತೆ ಬೆಳೆ ಬೆಳೆಯದೆ ಸಂಕಷ್ಟಕ್ಕೆ ಸಿಲುಕಿದ್ದರು. ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಧನ್ನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾವಿಗೆ ಹಾರಿ ರೈತ ಆತ್ಮಹತ್ಯೆ :

ಬಸವಕಲ್ಯಾಣ ತಾಲ್ಲೂಕಿನ ಇಲ್ಲಾಳ ಗ್ರಾಮದ ರೈತ ಜಗದೀಶರೆಡ್ಡಿ ಪ್ರಲ್ಹಾದರೆಡ್ಡಿ (49) ತಮ್ಮ ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಮಂಗಳವಾರ ನಸುಕಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಈ ಹಿಂದೆ ಎರಡೂವರೆ ಎಕರೆ ಜಮೀನು ಇತ್ತು. ರೇಷ್ಮೆ ಹಾಗೂ ಇತರೆ ಬೆಳೆ ಬೆಳೆಯುತ್ತಿದ್ದರು. ಕೃಷಿಗಾಗಿ ಬ್ಯಾಂಕ್‌ನಲ್ಲಿ ₹1.25 ಲಕ್ಷ ಹಾಗೂ ಖಾಸಗಿ ಕೈಸಾಲ ಮಾಡಿಕೊಂಡಿದ್ದರು. ಸರಿಯಾಗಿ ಬೆಳೆ ಬಾರದೆ ಹಾಗೂ ರೇಷ್ಮೆ ಬೆಲೆ ಕುಸಿತದಿಂದ ಸಾಲದ ಹೊರೆಯಾಗಿತ್ತು. ಸಾಲ ತೀರಿಸುವುದಕ್ಕಾಗಿ ಕೆಲ ತಿಂಗಳ ತಮ್ಮ ಒಂದು ಎಕರೆ ಜಮೀನು ಸಹ ಮಾರಾಟ ಮಾಡಿದ್ದರು. ಉಳಿದ ಒಂದೂವರೆ ಎಕರೆಯಲ್ಲಿ ಬೆಳೆದ ರೇಷ್ಮೆ ಬೆಳೆದಿದ್ದರು, ನಿರೀಕ್ಷೆಯಂತೆ ಫಸಲು ಬರಲಿಲ್ಲ. ಸಾಲ ತೀರಿಸುವುದು ಹೇಗೆ ಎಂದು ಚಿಂತೆಗೀಡಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೋಗಿಲೆ ಕಂಠದ ಪ್ರಕೃತಿಗೆ ಬೇಕಿದೆ ಪ್ರೋತ್ಸಾಹ

ಮೃತರಿಗೆ ಪುತ್ರ, ಪುತ್ರಿ ಹಾಗೂ ಪತ್ನಿ ಇದ್ದಾರೆ. ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಭಟ್ಕಳ | ಗಣಪತಿ ವಿಸರ್ಜನೆ ವೇಳೆ ಮಸೀದಿ ಕಿಟಕಿ ಗಾಜು ಒಡೆದು, ಗೊಜ್ಜು ತೂರಾಟ ಆರೋಪ: ದೂರು–ಪ್ರತಿದೂರು ದಾಖಲು

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...