ಮಂಗಳೂರು | ಡಿ.25: ಬಿಎಸ್‌ಡಬ್ಲ್ಯೂಟಿ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (BSWT) ವತಿಯಿಂದ 2024ನೆ ಸಾಲಿನ “BSWT ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮತ್ತು ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕಾರ್ಯಕ್ರಮವು ಡಿ.25ರಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಆಕೀಫ್ ಇಂಜಿನಿಯರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆಯ ಮೂಲಕ ಮಾಹಿತಿ ನೀಡಿರುವ ಅವರು, ಡಿ.25ರಂದು ಅಪರಾಹ್ನ 3 ಗಂಟೆಗೆ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆಯ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಎಸ್, ಡಾ. ಪಿ ದಯಾನಂದ ಪೈ, ಪಿ.ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಯಕಾರ ಭಂಡಾರಿ, ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ಡೈರೆಕ್ಟೊರೇಟ್ ಎಕ್ಸ್ಟೆನ್ಷನ್ ಆಂಡ್ ಔಟ್ ರೀಚ್ ಆಕ್ಟಿವಿಟಿ ಇದರ ಡೈರೆಕ್ಟರ್ ಆಗಿರುವ ಡಾ. ಅಶ್ವಿನಿ ಎಸ್ ಶೆಟ್ಟಿ, ಎ.ಜೆ ಆಸ್ಪತ್ರೆಯಲ್ಲಿ ಗೈನೋಕಾಲಜಿಸ್ಟ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ವೀಣಾ ಕೆ.ಆರ್ ಭಾಗ್ವಾನ್, ಮಂಗಳ ಗಂಗೋತ್ರಿ ಇಲ್ಲಿನ ನಿವೃತ್ತ ಸೂಪರಿಂಟೆಂಡೆಂಟ್ ಹರೀಶ್ ಕುಮಾರ್ ಕುತ್ತಡ್ಕ, ಖದೀಜ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಅಶ್ರಫ್ ಎಂ.ಸಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ದೇವಾಲಯಗಳ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ ವಹಿಸಿದ ರಾಜ್ಯ ಸರ್ಕಾರ: ಉಳಿಯಿತು 10,700 ಎಕರೆ ‘ದೇವರ ಸ್ವತ್ತು’

bswt
ರೂಪಾ ಬಲ್ಲಾಳ್ ಉಡುಪಿ

ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಈಶ್ವರ್ (ಕೆ.ಎ.ಎಸ್) ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್‌ನ ಚೇರ್‌ಮೆನ್ ಎನ್ ಅಮೀನ್ ಅಧ್ಯಕ್ಷತೆ ವಹಿಸಲಿದ್ದಾರೆ. ಚಿಲ್ಡ್ರನ್ಸ್ ವಿಥ್ ಡ್ರೀಮ್ಸ್ ಇದರ ಸ್ಥಾಪಕಿಯಾಗಿರುವ ರೂಪಾ ಬಲ್ಲಾಳ್ ಉಡುಪಿ ಅವರಿಗೆ ಈ ಸಂದರ್ಭದಲ್ಲಿ ‘ಬಿಎಸ್‌ಡಬ್ಲ್ಯೂಟಿ ವರ್ಷದ ವ್ಯಕ್ತಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು’ ಹಾಗೂ ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು ಎಂದು ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಇದರ ಕಾರ್ಯದರ್ಶಿ ಆಕೀಫ್ ಇಂಜಿನಿಯರ್ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X