ವಿಜಯಪುರ | ಆನೆಕಾಲು ರೋಗ ತಡೆಗೆ ಡಿಇಸಿ ಮಾತ್ರೆಗಳು ಅಗತ್ಯ: ತಹಶೀಲ್ದಾರ್

Date:

Advertisements

ಆನೆಕಾಲು ರೋಗ ತಡೆಗಟ್ಟುವಿಕೆ ಡಿಇಸಿ ಮಾತ್ರೆಗಳನ್ನು ಸೇವಿಸುವುದು ಅಗತ್ಯ. ಮಾತ್ರೆಗಳನ್ನು ಸೇವಿಸುವುದರಿಂದ ಆನೆಕಾಲು ರೋಗದ ಹರಡುವಿಕೆಯನ್ನು ತಡೆದು, ರೋಗವನ್ನು ನಿರ್ಮೂಲನೆ ಮಾಡಬಹುದು ಎಂದು ವಿಜಯಪುರ ಜಿಲ್ಲೆಯ ಆಲಮೇಲ ತಹಶೀಲ್ದಾರ್‌ ಡಾ. ಮಹದೇವ ಸನಮುರಿ ಹೇಳಿದ್ದಾರೆ.

ಆಲಮೇಲದಲ್ಲಿ ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮದಡಿ ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪಟ್ಟಣ ಪಂಚಾಯಿತಿ, ಪಂಚಾಯತ್ ರಾಜ್ಯ ಇಲಾಖೆ ಆಯೋಜಿಸಿದ್ದ ಡಿಇಸಿ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಡಿಇಸಿ ಮಾತ್ರೆಗಳನ್ನು ಸೇವನೆ ಮಾಡಿದಾಗ ಸಣ್ಣಪುಟ್ಟ ಜ್ವರ, ಮೈ ಕೈ ನೋವು, ಸುಸ್ತು, ವಾಕರಿಕೆ ಕಾಣಿಸಿಕೊಳ್ಳಬಹುದು. ಆದರೆ, ಯಾವುದೇ ಪ್ರಾಣಾಪಾಯವಿಲ್ಲ. ಮಾತ್ರೆಗಳನ್ನು ಸೇವನೆ ಮಾಡದೆ ಬಿಟ್ಟರೆ ಆನೆಕಾಲು ರೋಗ ಉಲ್ಬಣಗೊಂಡು ನರಕಯಾತನೇ ಅನುಭವಿಸಬೇಕಾಗುತ್ತದೆ” ಎಂದರು.

“ಗ್ರಾಮಗಳಲ್ಲಿ ಪರಿಸರ ಸ್ವಚ್ಛತೆ ಕಾಪಾಡುವುದು, ತಿಪ್ಪೆಗುಂಡಿ, ಚರಂಡಿಗಳಲ್ಲಿ ನೀರುಗಳು ನಿಲ್ಲದಂತೆ ನೋಡಿಕೊಳ್ಳುವುದು ಲೇರಿಯ ಕ್ಯೂಲೆಕ್ಸ್ ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ” ಎಂದು ಹೇಳಿದರು.

Advertisements

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ ಪೂಜಾರಿ ಮಾತನಾಡಿ, “ಡಿಇಸಿ ಮಾತ್ರಗಳ ಸೇವನೆ ಮಾಡುವುದರ ಜೊತೆಗೆ ತಮ್ಮ ಕುಟುಂಬಸ್ಥರಿಗೂ ಕೂಡ ಮಾತ್ರೆಗಳನ್ನು ನೀಡಿವುದು ಎಲ್ಲರ ಕರ್ತವ್ಯ. ಆನೆಕಾಲು ರೋಗ ತಡೆಗೆ ಮುಂಜಾಗ್ರತ ಕ್ರಮ ಕೈಗೊಳ್ಳಲು ಕಳೆದ 15 ವರ್ಷಗಳಿಂದ ನಿರಂತರವಾಗಿ ಡಿಇಸಿ ಸಾಮೂಹಿಕ ಔಷಧಿ ವಿತರಣೆ ಮಾಡಲಾಗುತ್ತಿದೆ. ಆಲಮೇಲಾದಲ್ಲಿ ಸೊಳ್ಳೆಗಳನ್ನು ಹಿಡಿದು, ಪರೀಕ್ಷಿಸಿದಾಗ ಆನೆಕಾಲು ರೋಗ ಉತ್ಪತ್ತಿ ಮಾಡುವ ಪರಾವಲಂಬಿ ಜೀವಿಗಳು ಕಂಡುಬಂದಿವೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಉಪತಹಸೀಲ್ದಾರ್ ಎಸ್.ಐ ಚೌಹಾಣ್. ಶಿರಸ್ತೆದಾರ ಪಿ.ಎಸ್‌ ಮೂಕಿಹಾಳ, ವೈದ್ಯಾಧಿಕಾರಿ ಡಾ ಪ್ರಶಾಂತ ದೊಮಗೊಂಡ, ಡಾ. ಎಸ್ ಜಿ ಪತ್ತಾರ, ಆರೋಗ್ಯ ಇಲಾಖೆಯ ಮಲ್ಲಿಕಾರ್ಜುನ ಪೂಜಾರಿ, ಸಂತೋಷ್, ಸಂದೇಶ್ ಜೋಗುರ್, ಮಾರ್ಥಾಂಡ್ ವಗ್ಗೆ, ನಿಂಗಪ್ಪ ಬೋಡ್ಕೆ, ಸಂತೋಷ್ ಕುಂಬಾರ್ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X