ಶಿಗ್ಗಾಂವಿ ಚುನಾವಣೆ | ಸಂವಿಧಾನ ಉಳಿವಿಗಾಗಿ ಬಿಜೆಪಿ ಸೋಲಿಸಿ; ಎದ್ದೇಳು ಕರ್ನಾಟಕ ಕರೆ

Date:

Advertisements

ಸಂವಿಧಾನ ಉಳಿವಿಗಾಗಿ ಎಲ್ಲರೂ ಒಗ್ಗೂಡಬೇಕು. ಕೋಮುವಾದಿ ಪಕ್ಷ ಬಿಜೆಪಿಯನ್ನು ಸೋಲಿಸಬೇಕು. ಶಿಗ್ಗಾಂವಿ ಸೌಹಾರ್ದತೆಗೆ ಹೆಸರುವಾಸಿಯಾದ ಸಂತ ಶಿಶುನಾಳ ಷರೀಫರ ನಾಡು. ಇಲ್ಲಿ ಕೋಮು ದ್ವೇಷಕ್ಕೆ ಅವಕಾಶ ಕೊಡಬಾರದು ಎಂದು ಶಿಗ್ಗಾವಿಯ ಮತದಾರರಿಗೆ ಹಿರಿಯ ವಕೀಲ ಅನೀಶ್ ಪಾಷಾ ಕರೆಕೊಟ್ಟಿದ್ದಾರೆ.

ಶಿಗ್ಗಾವಿಯಲ್ಲಿ ಉಚುನಾವಣೆಯ ನಡೆಯುತ್ತಿರುವ ಹಿನ್ನೆಲೆ, ಎದ್ದೆಳು ಕರ್ನಾಟಕ, ಜಾಗೃತ ಕರ್ನಾಟಕ, ಮುಸ್ಲಿಂ ಬಾಂಧವ್ಯ ವೇದಿಕೆ ಹಾಗೂ ಜೀವಿಕ ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅನೀಶ್ ಮಾತನಾಡಿದರು. “ಬಿಜೆಪಿ ತನ್ನ ಆಡಳಿತದಲ್ಲಿ ಜನರಿಗೆ ಬೇಕಾದಂತಹ ಯಾವುದೇ ಮೂಲ ಸೌಲಭ್ಯಗಳನ್ನು ನೀಡಿಲ್ಲ. ಕೇವಲ ತಳಸಮುದಾಯಗಳ ಮೇಲೆ ಮತ್ತು ಅಲ್ಪಸಂಖ್ಯಾತರ ಮೇಲೆ ಶೋಷಣೆ ಮತ್ತು ಕೋಮು ಬೆಂಕಿ ಹಚ್ಚುತ್ತಾ ಬಂದಿದೆ. ಹಲಾಲ್, ಹಿಜಾಬ್, ಆಜಾನ್, ಹುಬ್ಬಳ್ಳಿ ದರ್ಗಾ ಹೆಸರಿನಲ್ಲಿ ಕೋಮುಗಲಭೆ ಸೃಷ್ಟಿಸಿ, ಜನರನ್ನು ಧರ್ಮದ ಹೆಸರಿನಲ್ಲಿ ವಿಭಜಿಸುತ್ತಿದ್ದಾರೆ” ಎಂದರು.

ಸೋಹೆಲ್ ಅಹ್ಮದ್ ಮಾತನಾಡಿ, “ಇಂದಿನ ಯುವಜನರು ಧರ್ಮ, ರಾಜಕೀಯ ದ್ವೇಷದ ದಳ್ಳೂರಿಗೆ ಸಿಲುಕಿ ಹಾದಿ ತಪ್ಪುತ್ತಿದ್ದಾರೆ. ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಸಮಾನತೆಯೇ ಸಂವಿಧಾನದ ಆಶಯವಾಗಿದೆ. ಆದರೆ, ವ್ಯವಸ್ಥಿತವಾಗಿ ಪ್ರಜಾಪ್ರಭುತ್ವವನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ದೇಶದ ನೆಲದಲ್ಲಿ ಸೌಹಾರ್ದತೆ ಇದೆ. ಶಿಗ್ಗಾಂವಿ ಸಂತರ ನಾಡು. ಇಲ್ಲಿ ಕೋಮುದ್ವೇಷ ಬೇರೂರುತ್ತಿರುವುದು ಆತಂಕಕಾರಿ” ಎಂದರು.

ಎದ್ದೆಳು ಕರ್ನಾಟಕ ಅಭಿಯಾನದ ಚೆನ್ನಮ್ಮ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ನೀಡಿ ಸಭಲರಾಗಲು ಸಹಾಯ ಮಾಡಿದೆ. ಹಾಗಾಗಿ, ನಾವೆಲ್ಲರೂ ಈ ಉಪಚುನಾವಣೆಯಲ್ಲಿ ಬೆಂಬಲ ನೀಡಿ ಕಾಂಗ್ರೆಸ್ ಗಲ್ಲಿಸೋಣ” ಎಂದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X