‘ಫ್ಯಾಸಿಸಂ’ ಸೋಲು ಜನಪರ ಚಳುವಳಿಗಳ ನಿರಂತರ ಹೋರಾಟದಿಂದ ಮಾತ್ರ ಸಾಧ್ಯ : ಚಿಂತಕ ಶಿವಸುಂದರ್

Date:

ದೇಶದಲ್ಲಿರುವ ಫ್ಯಾಸಿಸಂ ಅನ್ನು ಸೋಲಿಸಲು ಜನಪರ ಚಳುವಳಿಗಳು ಸಕ್ರಿಯವಾಗಬೇಕೆಂದು ಖ್ಯಾತ ಚಿಂತಕರಾದ ಶಿವಸುಂದರ್ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಅವರು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಉಡುಪಿ ಜಿಲ್ಲೆ ಆಯೋಜಿಸಿದ್ದ “ಯುವ ಅಂದೋಲನ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಫ್ಯಾಸಿಸಂ ಸೋಲಿಸಲು ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ. ಫ್ಯಾಸಿಸಂ ಮನಸ್ಥಿತಿಯನ್ನು ಹೋಗಲಾಡಿಸುವ ವ್ಯವಸ್ಥೆಯೇ ಈ ಸಮಸ್ಯೆಯ ಭಾಗವಾಗಿರುವುದು ವಾಸ್ತವಿಕತೆಯಾಗಿದ್ದು ಕಾಂಗ್ರೆಸ್ ಹೊರತಾದ ಚಳುವಳಿಯೊಂದನ್ನು ಸಕ್ರಿಯಗೊಳಿಸಬೇಕಾದ ಅಗತ್ಯವಿದೆ. ಈ ಚಳುವಳಿಗಳಿಂದ ತಕ್ಷಣ ಫಲಿತಾಂಶ ಹೊರಬಾರದಿದ್ದರೂ ದಶಕಗಳ ನಿರಂತರ ಪ್ರಯತ್ನದಿಂದ ಜನರ ಮನಸ್ಸಿನಲ್ಲಿ ಗಾಢವಾಗಿ ನೆಲೆಯೂರಿರುವ ಕೋಮುವಾದವನ್ನು ದೂರೀಕರಿಸಲು ಖಂಡಿತ ಸಾಧ್ಯ ಎಂದರು.

ದಶಕಗಳ ಹಿಂದೆ ಕನಿಷ್ಠ ವೋಟ್ ಶೇರಿಂಗ್ ಪಡೆದ ಬಿಜೆಪಿ ಇಂದು ದೇಶದಲ್ಲಿ 36 % ಮತಗಳಿಸಿದ್ದಿದ್ದರೆ ಅದರ ಹಿಂದೆ ನೂರು ವರ್ಷದ ಪರಿಶ್ರಮ ಇದೆ. ಈ ಮುಂಚೆ ಜನರ ಬಳಿ ಚಳುವಳಿಗಳು ಇದ್ದವು. ದಲಿತ ಚಳುವಳಿ, ಕಾರ್ಮಿಕ ಚಳುವಳಿ, ಮುಸ್ಲಿಮರ ವಿವಿಧ ಚಳುವಳಿಗಳು ಸಕ್ರಿಯವಾಗಿದ್ದ ಕಾರಣ ಜನ ಫ್ಯಾಸಿಸಂ ಅಜೆಂಡಾಗಳಿಗೆ ಬಲಿಯಾಗದಂತೆ ಚಳುವಳಿಗಳ ಜನರು ತಡೆಯುವಲ್ಲಿ ಸಫಲರಾಗುತ್ತಿದ್ದರು. ಇಂದು ಚಳುವಳಿಗಳ ವಿಭಜನೆ ಮತ್ತು ದುರ್ಬಲಗೊಂಡ ಕಾರಣ ಫ್ಯಾಸಿಸಂ ಬಲಿಷ್ಠವಾಗಿ ಬೆಳೆಯುತ್ತಿದೆ. ಈಗ ಫ್ಯಾಸಿಸಂನ ಹಿಂದೆ ಕಾರ್ಪೊರೇಟ್ ಶಕ್ತಿಗಳು ಕೂಡ ಇರುವುದರಿಂದ ಇದನ್ನು ಸೋಲಿಸಲು ನಿರಂತರ ಹೋರಾಟದ ಅವಶ್ಯಕತೆ ಇದೆ ಎಂದು ಹೇಳಿದರು.

ಚಿಂತಕ shiv sundar

ನಾವುಗಳು ಇಂದು ಚಳುವಳಿಗಳನ್ನು ನಮ್ಮ ಜೀವನದ ಆದ್ಯತೆ ಮಾಡಿಕೊಂಡರೆ ಭವಿಷ್ಯದ ಜನರಿಗೆ ಒಂದೊಳ್ಳೆಯ ಸಮಾಜ ನಿರ್ಮಿಸಿ, ಬಿಟ್ಟು ಹೋಗಲು ಸಾಧ್ಯವಾಗುತ್ತದೆ. ಈ ಫ್ಯಾಸಿಸಂ ಅನ್ನು ಸಂವಿಧಾನದ ಪರಿಧಿಯಲ್ಲಿ ಅರ್ಥೈಸಿಕೊಂಡು ಜನರಿಗೆ ವಿವಿಧ ಕಾರ್ಯಕ್ರಮಗಳ ಮುಖಾಂತರ ತಲುಪಬೇಕಾಗಿದೆ. ನಿರಂತರ ಸುಳ್ಳಿನಿಂದ ಜನರಲ್ಲಿ ದ್ವೇಷ ಬಿತ್ತುವ ಫ್ಯಾಸಿಸಂ ಶಕ್ತಿಗಳ ಹಾಗೆ ನಾವು ನಿರಂತರ ಸತ್ಯ ತಲುಪಿಸುವ ಮುಖಾಂತರ ಜನರ ಮನಸ್ಸು ತೆರೆಯಲು ಸಾಧ್ಯವಾಗುತ್ತದೆ. ಇವತ್ತು ದೇಶದಲ್ಲಿ ‌ಮುಸ್ಲಿಮರು ಫ್ಯಾಸಿಸ್ಟ್ ಶಕ್ತಿಗಳ ಕುರಿತು ಹೆಚ್ಚು ಅರಿವು ಮೂಡಿಸಿಕೊಂಡಿದ್ದಾರೆ. ಮುಸ್ಲಿಮೇತರರು ಈ ಕುರಿತು ಚಿಂತಿಸಿ ತಿರಸ್ಕರಿಸಬೇಕಾದ ಅಗತ್ಯವಿದೆ. ಎಲ್ಲರನ್ನೊಳಗೊಂಡ ಜನಪರ ಚಳುವಳಿಯಿಂದ ಖಂಡಿತ ಈ ಫ್ಯಾಸಿಸಂ ಅನ್ನು ಸೋಲಿಸಲು ಸಾಧ್ಯವೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ನಬೀಲ್ ಗುಜ್ಜರ್’ಬೆಟ್ಟು, ಶುಐಬ್ ಮಲ್ಪೆ, ಸರ್ಫರಾಜ್ ಮನ್ನಾ,ಎಸ್.ಐ.ಓನ ಆಯಾನ್ ಮಲ್ಪೆ, ಜಿ.ಐ.ಓನ ನೂಝ್ಲಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...