ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸ್ಥಳಕ್ಕೆ ದೆಹಲಿ ರೈತ ಹೋರಾಟಗಾರರ ಭೇಟಿ, ಚರ್ಚೆ

Date:

ದೇಶಾದ್ಯಂತ ಎಲ್ಲೆಡೆ ಕೃಷಿ ಭೂಮಿಯನ್ನು ಭೂ ಸ್ವಾಧೀನ ಮಾಡುತ್ತಿದ್ದಾರೆ. ಭೂಮಿಗಾಗಿ ಕೃಷಿಕರನ್ನು ಶೋಷಣೆ ಮಾಡುತ್ತಿದ್ದಾರೆ. ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟವೂ ಎಲ್ಲರಿಗೂ ಮಾದರಿಯಾಗಿದೆ ಎಂದು ದೆಹಲಿ ರೈತ ಹೋರಾಟದ ಮುಖ್ಯಸ್ಥ ಜಗಜೀತ್ ಸಿಂಗ್‌ ಧಲ್ಲೇವಾಲ್‌ ತಿಳಿಸಿದರು.

- Advertisement -

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, “ಇಷ್ಟು ದೀರ್ಘಾವಾಗಿ ಹೋರಾಟ ಮಾಡುತ್ತಿರುವ ಅನ್ನದಾತರ ಒಗ್ಗಟ್ಟೂ ಅನುಕರಣೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

“ಪ್ರತಿ ವರ್ಷ ಭೂಮಿಯ ಬೆಲೆ ಹೆಚ್ಚುತ್ತಿದೆ. ಅದರ ಉಪಯೋಗವನ್ನು ಪಡೆಯಲು ಬಲಾಢ್ಯರು ಪ್ರಯತ್ನ ಮಾಡುತ್ತಿದ್ದಾರೆ. ಭೂಮಿ ಕೇಲವ ತಾಯಿ ಮಾತ್ರವಲ್ಲ, ನಮ್ಮ ಮನೆಯಲ್ಲಿರುವ ಹೆಣ್ಣು ಮಗಳಾಗಿದ್ದು, ಆಕೆಯನ್ನು ಕಳೆದುಕೊಂಡರೆ ನಮ್ಮ ಗೌರವನ್ನೇ ಕಳೆದುಕೊಂಡಂತೆ” ಎಂದು ತಿಳಿಸಿದರು.

“ನೈಸರ್ಗಿಕ ಸಂಪನ್ಮೂಲಗಳನ್ನು ಕಾ‌ರ್ಪೊರೇಟ್‌ಗಳು ವಶಪಡೆಸಿಕೊಳ್ಳಲು ಸರ್ಕಾರದ ಮೂಲಕ ಯತ್ನಿಸುತ್ತಿದ್ದಾರೆ. ಕೃಷಿ ಭೂಮಿಯ ಮಾಲೀಕರನ್ನು ಕಾರ್ಪೊರೇಟ್‌ ಜೀತದಾಳುಗಳ ಮಾಡುವ ಈ ಷ್ಯಡಂತ್ರವನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಿದೆ’ ಎಂದು ಆಗ್ರಹಿಸಿದರು.

“ಭೂಮಿಯನ್ನು ನಂಬಿ ಬದುಕಿರುವ ರೈತರನ್ನು ಸಾವಿರಾರು ವರ್ಷಗಳಿಂದ ಭೂತಾಯಿಯೂ ಸಲಹುತ್ತಿದ್ದಾಳೆ. ಕುಟುಂಬವೆಲ್ಲ ಸೇರಿ ಸಂತೃಪ್ತವಾಗಿ ಬದುಕುತ್ತಿದ್ದೇವೆ. ಅಂತಹ ಮಹತ್ವದ ಜೀವನವನ್ನು ಕಸಿಯಲು ಯತ್ನಿಸುತ್ತಿರುವವರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರಬೇಕು” ಎಂದು ಕರೆ ನೀಡಿದರು.

“ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಪಕ್ಷಗಳು ಅಧಿಕಾರದಲ್ಲಿದ್ದರೂ ಭೂ ಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಭೂಮಿಯನ್ನು ಕಾರ್ಪೊರೇಟ್‌ಗಳಿಗೆ ನೀಡಲು ಭೇದ ಭಾವವಿಲ್ಲದೆ ಎಲ್ಲ ರಾಜಕೀಯ ಪಕ್ಷಗಳೂ ಕೂಡ ಮುಂದಾಗಿವೆ. ಯಾವ ಪಕ್ಷವನ್ನೂ ರೈತರು ನಂಬಕೂಡದು” ಎಂದು ಕಿವಿಮಾತು ಹೇಳಿದರು.

‘ಅಭಿವೃದ್ಧಿ ಹೆಸರಿನಲ್ಲಿ ವಿನಾಶ ಮಾಡುತ್ತಿದ್ದಾರೆ’

ರೈತರ ಭೂಮಿಯನ್ನು ಅಭಿವೃದ್ಧಿಗಾಗಿ ಭೂ ಸ್ವಾಧೀನ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ, ಇದು ನಿಜವಾದ ವಿನಾಶವಾಗಿದೆ. ಅದು ಅಭಿವೃದ್ಧಿಯಲ್ಲ, ಸಾವಿರಾರು ರೈತ ಕುಟುಂಬವನ್ನು ಹಾಳುಮಾಡುತ್ತಿದ್ದಾರೆ. ಸರ್ಕಾರ ಏಕೆ ಮಾಡಬೇಕು ನಮ್ಮ ಭೂಮಿಗಳನ್ನು ನಾವೇ ಅಭಿವೃದ್ಧಿ ಮಾಡೋಣ, ಕೃಷಿ ಕ್ಷೇತ್ರದಲ್ಲಿಯೇ ಅಭಿವೃದ್ಧಿಪಡಿಸೋಣ. ಸರ್ಕಾರದವರು ಬಂದಿರುವುದು ರೈತರಿಗೆ ಮೋಸ ಮಾಡಿ ಇಲ್ಲಿನ ನೈಸರ್ಗಿಕ ಸಂಪನ್ಮೂಲವನ್ನು ವಶಪಡಿಸಲು ಬಂದಿದ್ದಾರೆ. ಕಾರ್ಪೊರೇ ರೆಟ್‌ಗಳಿಗೆ ಅವರು ಸಹಕಾರ ನೀಡಿದದೆ ನಮ್ಮ ಹೋರಾಟ ನಿರಂತರವಾಗಿರಬೇಕು. ಸರ್ಕಾರದ ಅಸ್ತಿತ್ವವನ್ನು ಬುಡಮೇಲು ಮಾಡಲು ಮುಂದಾಗಬೇಕು” ಎಂದು ದೆಹಲಿ ರೈತ ಹೋರಾಟದ ಮುಖ್ಯಸ್ಥ ಜಗಜೀತ್ ಸಿಂಗ್‌ ಧಲ್ಲೇವಾಲ್‌ ತಿಳಿಸಿದರು.

ಇದನ್ನೂ ಓದಿದ್ದೀರಾ? ಹಾವೇರಿ | ಹದಗೆಟ್ಟ ರಸ್ತೆ; ಕರ್ಜಗಿ ಗ್ರಾಮಸ್ಥರ ಗೋಳು ಕೇಳುವವರಿಲ್ಲ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಧರಣಿ ಸ್ಥಳಕ್ಕೆ ದೆಹಲಿ ರೈತ ಹೋರಾಟದ ಮುಖಂಡರು ಭೇಟಿ ನೀಡಿ ಚರ್ಚಿಸಿ, ಬೆಂಬಲ ವ್ಯಕ್ತಪಡಿಸಿದರು.

ಇದೇ ವೇಳೆ ಬಲದೇವ್ ಸಿಂಗ್ ಸಿರ್ಸಾ, ರಾಮ್ ಗೌಂಡರ್, ಸತ್ನಾಮ್ ಸಿಂಗ್ ಬೆಹ್ರು, ಅಭಿಮನ್ಯು ಕೊಹರ್, ಮನ್ಪ್ರೀತ್ ಬಾತ್, ವೆಂಕಟೇಶ್ವರ ರಾವ್, ಸಂದೀಪ್ ಸಿಂಗ್, ಹರ್ಪಾಲ್ ಚೌಧರಿ, ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಸದಸ್ಯರು, ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...