ದೆಹಲಿ ಜಾಮಿಯಾ ಮಿಲ್ಲೀಯಾ ವಿವಿ ಎಲ್‌ಎಲ್‌ಎಂ ಪ್ರವೇಶ ಪರೀಕ್ಷೆ: ಮಂಗಳೂರಿನ ನಿಹಾಲ್‌ಗೆ 7ನೇ ರ‍್ಯಾಂಕ್

Date:

Advertisements

ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲ್ಲೀಯಾ ಇಸ್ಲಾಮಿಯಾ(ಜೆಎಂಐ) ಕೇಂದ್ರೀಯ ವಿಶ್ವವಿದ್ಯಾಲಯ ನಡೆಸಿದ ಎಲ್‌ಎಲ್‌ಎಂ ಸ್ನಾತಕೋತ್ತರ ಪದವಿಯ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ನಿಹಾಲ್ ಮುಹಮ್ಮದ್ ರಾಷ್ಟ್ರಮಟ್ಟದಲ್ಲಿ ಏಳನೇ ರ‍್ಯಾಂಕ್ ಪಡೆದಿದ್ದು, ಸರಕಾರಿ ಕೋಟಾದ ಸೀಟ್‌ಗೆ ಆಯ್ಕೆಯಾಗಿದ್ದಾರೆ.

ಮಂಗಳೂರು ನಗರದ ಕುದ್ರೋಳಿಯ ನಿವಾಸಿಯಾಗಿರುವ ಅಬ್ದುಲ್ ನಿಝಾರ್ ಹಾಗೂ ಖಾಲಿಸ ನಿಝಾರ್ ಅವರ ಸುಪುತ್ರರಾಗಿರುವ ನಿಹಾಲ್ ಮುಹಮ್ಮದ್, ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಆ ಬಳಿಕ ಕೇರಳದ ಮಲಪ್ಪುರಂನಲ್ಲಿರುವ ಆಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಪಡೆದಿದ್ದರು.

ಇದನ್ನು ಓದಿದ್ದೀರಾ? ತುಮಕೂರು | ಸ್ಪ್ರೈಟ್ ಕೂಲ್ ಡ್ರಿಂಕ್‌ನಲ್ಲಿ ಹುಳ ಪತ್ತೆ; ದೂರು ದಾಖಲು

Advertisements

ಸ್ನಾತಕೋತ್ತರ ಪದವಿ ಪಡೆಯಲು ಜಾಮಿಯಾ ಮಿಲ್ಲೀಯಾ ಇಸ್ಲಾಮಿಯಾ ನಡೆಸಿದ್ದ ಪ್ರವೇಶ ಪರೀಕ್ಷೆ ಬರೆದಿದ್ದು, ಇದರಲ್ಲಿ ರಾಷ್ಟ್ರಮಟ್ಟದಲ್ಲಿ ಏಳನೇ ರ‍್ಯಾಂಕ್ ಪಡೆದಿದ್ದಾರೆ. ನಿಹಾಲ್ ಮುಹಮ್ಮದ್ ಅವರು, ವಿದ್ಯಾರ್ಥಿ ಸಂಘಟನೆಯಾಗಿರುವ ಸ್ಟೂಡೆಂಟ್ಸ್‌ ಇಸ್ಲಾಮಿಕ್ ಆರ್ಗನೈಝೇಷನ್(ಎಸ್ಐಓ)ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X