ಕಲಬುರಗಿ | ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಆಗ್ರಹ

Date:

Advertisements

ಗ್ರಾಮೀಣ ಪ್ರದೇಶದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಪದಾಧಿಕಾರಿಗಳು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್ ಬಿ. ಮಾತನಾಡಿ, ʼಕಲಬುರಗಿ ತಾಲೂಕಿನ ಕುಸನೂರು, ಕುಸನೂರು ತಾಂಡಾ, ನಂದೂರ ತಾಂಡಾ ಹಾಗೂ ಝಾಪುರ್ ಗ್ರಾಮಗಳಲ್ಲಿ ಸುಮಾರು ಕಳೆದ 40 ವರ್ಷಗಳಿಂದ ರೈತರು ತಮ್ಮ ಸಾಗುವಳಿ ಭೂಮಿ ಸಕ್ರಮವಾಗಿ ಪರಿವರ್ತಿಸಿಕೊಳ್ಳಲು ಅರ್ಜಿ ಸಲ್ಲಿಸಿ ದಶಕಗಳಿಂದ ಕಾಯುತ್ತಿದ್ದಾರೆ. ಫಾರಂ ನಂ.50, 53 ಮತ್ತು ಫಾರಂ 57 ಇವುಗಳ ವಿಲೇವಾರಿ ಮಾಡಲಾಗುತ್ತಿಲ್ಲ. ಇದರಿಂದ ನಿಜವಾದ ಭೂ ಸಾಗುವಳಿ ಮಾಡುವವರಿಗೆ ಭೂಮಿ ಸಿಗುತ್ತಿಲ್ಲʼ ಎಂದರು.

ʼಭೂಹೀನ ಮತ್ತು ಬಡ ರೈತರು ಕಂದಾಯ ಹಾಗೂ ಅರಣ್ಯದ ಕುರುಚಲು ಗಿಡ, ಕಲ್ಲು ಭೂಮಿ ಇರುವ ಪ್ರದೇಶಗಳಲ್ಲಿ ಜೀವನೋಪಾಯಕ್ಕಾಗಿ ಸಾಗುವಳಿ ಮಾಡುತ್ತಿದ್ದಾರೆ. ಇದು ಬಹುಪಾಲು ರೈತರ ಬದುಕಿಗೆ ಜೀವನಾಧಾರವಾಗಿದೆ. ಎಲ್ಲಾ ಸರ್ಕಾರಗಳು ಬಡ ರೈತರ ಜೀವನದ ವಸ್ತುಸ್ಥಿತಿ ಅರಿವಿದ್ದೇ ಸರ್ಕಾರಕ್ಕೆ ಸೇರಿದೆ ಜಮೀನಿನಲ್ಲಿ ಉಳುಮೆಗೆ ಅವಕಾಶ ಕೊಡುತ್ತಾ ಬಂದಿದೆ. ಆದರೆ ಶಾಸನಬದ್ದವಾಗಿ ಭೂಮಿಯ ಹಕ್ಕು ದೊರೆಯದೆ ಇರುವುದರಿಂದ ಬಗರ್ ಹುಕುಂ ಸಾಗುವಳಿದಾರರಿಗೆ ದಿಕ್ಕು ತೋಚದಂತಾಗಿದೆ. ಸರ್ಕಾರ ಕೂಡಲೇ ರೈತರಿಗೆ ನ್ಯಾಯ ಒದಗಿಸಿಕೊಡಬೇಕುʼ ಎಂದು ಆಗ್ರಹಿಸಿದರು.

Advertisements

ʼಸಹಜವಾಗಿ ಇವರಿಗೆ ಕೃಷಿ ಬೆಳೆ ಸಾಲ, ಕೃಷಿ ಪರಿಕರ ಮೇಲಿನ ಸಾಲ ಹಾಗೂ ಇನ್ನಿತರ ಜೀವನೋಪಾಯಕ್ಕಾಗಿ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಅಲ್ಪಾವಧಿ ಸಾಲ ದೊರೆಯದ ಕಾರಣ ಬಹುತೇಕ ಬಡ ರೈತರು ಬೇರೆ ದಾರಿಯಿಲ್ಲದೆ ಕೈಸಾಲ ಪಡೆದು ಸಂಕಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿ ಅವರನ್ನು ಆತ್ಮಹತ್ಯೆಗೆ ದೂಡುವಂತೆ ಮಾಡುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ. ಸರ್ಕಾರ ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುವುದೆಂದರೆ ದೊಡ್ಡ ಕರುಣೆ ಅಥವಾ ಭಿಕ್ಷೆಯಲ್ಲ, ಅದು ನ್ಯಾಯಬದ್ದವಾಗಿ ಕೊಡಬೇಕಾಗಿರುವ ಹಕ್ಕುʼ ಎಂದರು.

ಕಲಬುರಗಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಸಂಬಂಧಿಸಿದಂತೆ ತಹಸೀಲ್ದಾರ್‌ ಅವರೊಂದಿಗೆ ಸಭೆ ಕರೆದು ಬಗರ್ ಹುಕುಂ ರೈತರಿಗೆ ಹಕ್ಕು ಪತ್ರ ವಿತರಿಸುವ ಕುರಿತುಗಿ ಚರ್ಚಿಸಬೇಕು. ಆ ಸಭೆಗೆ ಎಲ್ಲಾ ರೈತ ಸಂಘಟನೆಗಳು ಹಾಗೂ ಬಗರ್ ಹುಕುಂ ಸಾಗುವಳಿ ರೈತರಿಗೆ ಮಾಹಿತಿ ತಿಳಿಸಬೇಕು ಎಂದು ಕೋರಿದರು.

ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಗಾಲ ಅಧಿವೇಶನದಲ್ಲಿ ಈಗ ಸರ್ಕಾರ ಮಾಡಿರುವ ಹಲವು ನಿಯಮಗಳನ್ನು ಸರಳೀಕರಣಗೊಳಿಸಲು ಒತ್ತಾಯಿಸಿ, ಬಡ ರೈತರು ಭೂಮಿಯನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಸ್ತೆ ಅಪಘಾತ : ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿ ಸಾವು

ಈ ಸಂದರ್ಭದಲ್ಲಿ ಶಿವಶರಣಪ್ಪ ದೊಡ್ಮನಿ, ದಶರತ್‌ ತೆಗನೂರ, ಕಾಶಿಪತಿ, ಶರಣಪ್ಪ ತಳವಾರ್‌, ರವಿಚಂದ್ರ, ಪರಶುರಾಮ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X