ವಿಜಯಪುರ | ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹ

Date:

Advertisements

ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜ್ ಆಯೋಗದ ವರದಿಯನ್ನು ಜಾರಿ ಮಾಡಬೇಕು ಹಾಗೂ ಒಳ ಮೀಸಲಾತಿ ಒದಗಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ ಒತ್ತಾಯಿಸಿದೆ.

ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಹಕ್ಕೊತ್ತಾಯ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಕಲ್ಲಪ್ಪ ತೊರವಿ, “ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಮಾದಿಗ ಹಾಗೂ ಮಾದಿಗ ಸಂಬಂಧಿತ ಜಾತಿಗಳಲ್ಲಿ ಹೆಚ್ಚು ಜನಸಂಖ್ಯೆ ಇದೆ” ಎಂದು ತಿಳಿಸಿದ್ದಾರೆ.

“ಕೆಲವು ಐತಿಹಾಸಿಕ ಕಾರಣಗಳಿಂದ ಮಾದಿಗ ಸಮುದಾಯಕ್ಕೆ ಶಿಕ್ಷಣ, ಸರ್ಕಾರಿ ಸೇವೆ, ರಾಜಕೀಯ ಹಾಗೂ ವಿವಿಧ ರಂಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ. ಹೀಗಾಗಿ, ಸಮುದಾಯ ಹಿಂದುಳಿದಿದೆ” ಎಂದರು.

Advertisements

ಪಕ್ಷದ ಜಿಲ್ಲಾಧ್ಯಕ್ಷ ಹಣಮಂತ ಬೊಮ್ಮನಜೋಗಿ ಮಾತನಾಡಿ, “ಚುನಾವಣೆ ಸಮಯದಲ್ಲಿ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುವುದಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದವು. ಆದರೆ, ಗೆದ್ದ ನಂತರ ಮೌನವಾಗಿವೆ. ಸಮಾಜಕ್ಕೆ ನಿರಂತರವಾಗಿ ದ್ರೋಹ ಮಾಡುತ್ತಾ ಬಂದಿವೆ” ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಯಶ್ವಂತ್ ಪೂಜಾರಿ, ಮಹಾಂತೇಶ್ ಎಂಟಮಾನ,ಮಂಜುನಾಥ್ ಹೊಸಮನಿ,ವಿಠ್ಠಲ್ ಸಂದಿಮನಿ, ಸದಾನಂದ್ ಕಿರಾಗ, ನಾಗರಾಜ ಮಾದರ, ಎಂ ಆರ್ ದೊಡ್ಮನಿ, ಚಂದ್ರಕಾಂತ್ ಕಾಂಬಳೆ, ಸದಾಶಿವು ಭೀಮಸಿ, ರಮೇಶ್ ಬೆಳ್ಳನವರ್, ರಮೇಶ್ ಐನಪುರ್,ಆನಂದ ಕೊಳಲಿ, ರಘುನಾಥ ಪ್ರಕಾಶ್ ಬೆಳಕನ್ನವರ್, ಪ್ರಕಾಶ್ ಮರಡಿ, ನಿತೀಶ್ ದೊರವಿ, ಪ್ರಶಾಂತ್ ಚಲವಾದಿ, ಸಿದ್ದು ಅಲಗೂರ್, ನಿಂಗಪ್ಪ ಹರಿಜನ್, ಚಂದ್ರಶೇಖರ್ ದೇವರು, ಸಂತೋಷ್ ಮೇಲಿನಮನಿ, ದೇವಪ್ಪ ಮಾದರ, ಹುಲಿಗಪ್ಪ ಗುಡಿಮನಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X