ದಾವಣಗೆರೆ | ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹ

Date:

Advertisements

ಪ್ರಚೋದನಕಾರಿ ಭಾಷಣ ಮಾಡಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.

ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಟಿ.ಅಸ್ಗರ್, “ಶ್ರೀರಂಗಪಟ್ಟಣದಲ್ಲಿ ಮಾತನಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ‘ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ’ ಎಂದು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಮಾತನಾಡಿದ್ದಾರೆ. ವಿವಾಹಿತ ಮಹಿಳೆಯರ ಲೈಂಗಿಕ ಜೀವನವನ್ನು ಬಹಿರಂಗವಾಗಿ ಅವಮಾನಿಸಿದ್ದಾರೆ. ಆತನನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ತಂಜಿಮ್ ಕಮಿಟಿ ಕಾರ್ಯದರ್ಶಿ ಶಾನವಾಜ್ ಖಾನ್ ಮಾತನಾಡಿ, “ಪ್ರಪಂಚದಲ್ಲಿ ಹೆಣ್ಣಿಗೆ ಪೂಜೆ ಮಾಡುವ ಏಕೈಕ ದೇಶ ಭಾರತ. ಇಂತಹ ದೇಶದಲ್ಲಿ ಹುಟ್ಟಿದ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಆರ್‌ಎಸ್‌ಎಸ್‌ ಇಂತಹ ಹೊಲಸು ಮಾತುಗಳನ್ನು ಕಲಿಸಿದೆ. ಧರ್ಮ ಧರ್ಮಗಳಲ್ಲಿ ವಿಷ ಬೀಜ ಬಿತ್ತಿ, ಶಾಂತಿಯ ರಾಜ್ಯದಲ್ಲಿ ಕೋಮು ಗಲಭೆ ನಡೆಸಲು ಪ್ರಯತ್ನಿಸುತ್ತಿರುವ ಕೋಮುವಾದಿ ಕಲ್ಲಡ್ಕ ಪ್ರಭಾಕರ್ ಭಟ್‌ನನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

ಒಕ್ಕೂಟದ ಮುಖಂಡ ಮಹಮ್ಮದ್ ಶೋಯೇಬ್ ಮಾತನಾಡಿ, “ಹಿಜಾಬ್ ವಿಷಯದಲ್ಲಿ ಬೆಳಕಿಗೆ ಬಂದಿದ ಮಂಡ್ಯದ ಮುಸ್ಕಾನ್ ಎಂಬ ವಿಧ್ಯಾರ್ಥಿನಿ ಕಾಲೇಜಿಗೆ ಬಂದರೆ ಹಲ್ಲೆ ಮಾಡುವುದಾಗಿ ಕಲ್ಲಡ್ಕ ಪ್ರಭಾಕರ್ ಭಟ್ ನೇರವಾಗಿ ಧಮಕಿ ಹಾಕಿದ್ದಾನೆ. ಯುವ ಪೀಳಿಗೆಗೆ ಕೋಮುವಾದಿ ಪಾಠ ಮಾಡಿ ಹಾದಿ ತಪ್ಪಿಸುವ ವಿಷ ಜಂತು ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ರಜ್ವಿ ರಿಯಾಜ್ ಸಾಬ್, ಇಸ್ಮಾಯಿಲ್ ಜಬೀವುಲ್ಲಾ, ಹಾಕಿ ಸೈಯದ್ ಆರೀಫ್, ಆದಿಲ್ ಖಾನ್, ಮಹಮ್ಮದ್ ಹಯಾತ್, ಇನಯಾತ್ ಅಲಿ ಖಾನ್, ಕೆ.ಹೆಚ್. ಮೆಹಬುಬ್, ಬ್ಯಾಟರಿ ಜಬೀವುಲ್ಲಾ, ಕಲಿಂವುಲ್ಲಾ ಖಾನ್, ಮನ್ಸೂರ್, ನವೀದ್, ಅಜ್ಮತ್, ದದೇಶ, ತಮನ ರಫೀಕ್, ಹೈದರ್, ಎನ್. ಉಸ್ಮಾನ್, ನೂರ್ ಅಯುಬ್ ಬುತ್ತಿ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X